By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಜಿಲ್ಲಾ ಕಾರಾಗೃಹದಲ್ಲಿ ಗಾಂಧೀಜಿ-ಶಾಸ್ತ್ರೀಜಿ ಜಯಂತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಜಿಲ್ಲಾ ಕಾರಾಗೃಹದಲ್ಲಿ ಗಾಂಧೀಜಿ-ಶಾಸ್ತ್ರೀಜಿ ಜಯಂತಿ

ಮುಖ್ಯ ಸುದ್ದಿ

ಜಿಲ್ಲಾ ಕಾರಾಗೃಹದಲ್ಲಿ ಗಾಂಧೀಜಿ-ಶಾಸ್ತ್ರೀಜಿ ಜಯಂತಿ

chitradurganews.com
Last updated: 2 October 2023 22:34
chitradurganews.com
2 years ago
Share
ಜಿಲ್ಲಾ ಕಾರಾಗೃಹದಲ್ಲಿ ಗಾಂಧೀಜಿ-ಶಾಸ್ತ್ರೀಜಿ ಜಯಂತಿ
ಜಿಲ್ಲಾ ಕಾರಾಗೃಹದಲ್ಲಿ ಗಾಂಧೀಜಿ-ಶಾಸ್ತ್ರೀಜಿ ಜಯಂತಿ
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ: ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಜಿ ಈ ದೇಶ ಕಂಡ ಅನಘ್ರ್ಯ ರತ್ನಗಳು ಎಂದು ನ್ಯಾಯವಾದಿ ಹಾಗೂ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಓ.ಪ್ರತಾಪ್ ಜೋಗಿ ಅಭಿಪ್ರಾಯಪಟ್ಟರು.

ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ ಅವರ 154ನೇ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ 119ನೇ ಜನ್ಮ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

ಇದನ್ನೂ ಓದಿ: ಮಗನ ವೈಭವ ನೋಡಲು ಬಂದ ತಾಯಿ; ಹಿಂದೂ ಮಹಾಗಣಪತಿ ಮಂಟಪದಲ್ಲಿ ಶಕ್ತಿ ದೇವತೆಗಳ ಸಮಾಗಮ

ಗಾಂಧೀಜಿ ಸ್ವಾತಂತ್ರ್ಯ ಹೋರಾಟ ಮಾಡಿ ಸೆರೆವಾಸ ಅನುಭವಿಸಿದ್ದರು. ಅವರು ಸೆರೆಮನೆಯಲ್ಲಿದ್ದ ಸಂದರ್ಭದಲ್ಲಿ ಅಲ್ಲಿನ ಸೆರವಾಸಿಗಳ ಮನಪರಿವರ್ತನೆಯ ಕೆಲಸ ಮಾಡಿದ್ದರು. ಆಗ ಸೆರೆವಾಸಿಗಳು ನಾವು ಸಹ ನಿಮ್ಮ ಹೋರಾಟಕ್ಕೆ ಬರುತ್ತೇವೆ ಎಂದು ಸ್ವಾತಂತ್ರ್ಯ ಹೋರಾಟಕ್ಕೆ ಸಿದ್ಧರಾಗಿದ್ದರು. ಇಂತಹ ಅನೇಕ ಘಟನೆಗಳಿಂದಾಗಿ ಸ್ವಾತಂತ್ರ್ಯ ಹೋರಾಟ ದಿನದಿಂದ ದಿನಕ್ಕೆ ತೀವ್ರತೆ ಪಡೆದುಕೊಳ್ಳುತ್ತಿತ್ತು ಎಂದು ಸ್ಮರಿಸಿದರು.

ಇಂದು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯೂ ಆಗಿದೆ. ಭಾರತದ ಎರಡನೆಯ ಪ್ರಧಾನಮಂತ್ರಿಯಾಗಿದ್ದ ಅವರು ಉತ್ತಮ ಆಡಳಿತ ನೀಡಿದರು. ಇದರಿಂದ ಅವರಿಗೆ ಭಾರತ ರತ್ನ ಪ್ರಶಸ್ತಿ ಲಭಿಸಿದೆ. ಗಾಂಧೀಜಿ ಅವರ ಮಾರ್ಗದರ್ಶನದಲ್ಲಿ ದೇಶಕ್ಕಾಗಿ ಹೋರಾಟ ಮಾಡಿದ ಮಹಾನ್ ವ್ಯಕ್ತಿಗಳಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಸಹ ಒಬ್ಬರಾಗಿದ್ದಾರೆ ಎಂದು ಹೇಳಿದರು.

ಜಿಲ್ಲಾ ಕಾರಾಗೃಹದಲ್ಲಿ ಗಾಂಧೀಜಿ-ಶಾಸ್ತ್ರೀಜಿ ಜಯಂತಿ
ಜಿಲ್ಲಾ ಕಾರಾಗೃಹದಲ್ಲಿ ಗಾಂಧೀಜಿ-ಶಾಸ್ತ್ರೀಜಿ ಜಯಂತಿ

ಪರಿಸ್ಥಿತಿಯ ಕೈಗೊಂಬೆಗಳಾಗಿ ಯಾವುದೋ ಸಂದರ್ಭದಲ್ಲಿ ಕೋಪದ ಕೈಗೆ ಬುದ್ದಿ ಕೊಟ್ಟು ಮತ್ತಿತರೆ ಕಾರಣಗಳಿಗೆ ಕಾರಾಗೃಹಕ್ಕೆ ಬಂದಿದ್ದೀರಿ. ಆದರೆ, ಇದು ಸೆರೆಮನೆಯಲ್ಲ. ಪರಿವರ್ತನಾ ಕೇಂದ್ರ. ಇಲ್ಲಿಂದ ಹೊಸ ಬದುಕಿನೊಂದಿಗೆ ಹೋಗಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಕಾರಾಗೃಹದ ಅಧೀಕ್ಷಕಿ ಮಹದೇವಿ ಎಂ ಮರಕಟ್ಟೆ ಮಾತನಾಡಿ, ಮಹಾತ್ಮ ಗಾಂಧೀಜಿ ಸತ್ಯ ಮತ್ತು ಅಹಿಂಸಾ ಮಾರ್ಗದಲ್ಲಿ ಹೋರಾಟ ಮಾಡಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಇವರ ಕೊಡುಗೆಯನ್ನು ನಾವೆಲ್ಲರೂ ಸ್ಮರಿಸಬೇಕು. ಲಾಲ್ ಬಹದ್ದೂರ್ ಶಾಸ್ತ್ರೀಜಿ ನೀಡಿದ ಜೈ ಜವಾನ್ ಜೈ ಕಿಸಾನ್ ಎಂಬ ಘೋಷವಾಕ್ಯ ಎಂದೆಂದಿಗೂ ಸ್ಮರಣೀಯ ಎಂದರು.

ಇಂಗಳದಾಳದ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿರುವಲ್ಲಪ್ಪ ಮಾತನಾಡಿದರು. ತಾ.ಪಂ. ಮಾಜಿ ಸದಸ್ಯ ಎಚ್.ಲಿಂಗಬಸಪ್ಪ, ನ್ಯಾಯವಾದಿ ಜಿ.ರಮೇಶ್, ಜೈಲರ್ ಶ್ರೀಮಂತಗೌಡ ಪಾಟೀಲ್, ಸಹಾಯಕ ಜೈಲರ್ ರಾಮಣ್ಣ ಹರೆಕಲ್, ಮಂಜು, ಪ್ರವೀಣ್, ಭಾಗ್ಯಮ್ಮ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಬಂಧಿಖಾನೆ ನಿವಾಸಿಗಳಿಗೆ ಹಣ್ಣು ವಿತರಿಸಿ ಜಯಂತಿ ಆಚರಿಸಲಾಯಿತು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaDistrict JailFather of the NationFormer Prime MinisterFreedom Strugglegandhi jayantiKannada Latest NewsLal Bahadur Shastri JayantiNonviolencePratap Jogiಅಹಿಂಸೆಕನ್ನಡ ಲೇಟೆಸ್ಟ್ ನ್ಯೂಸ್ಗಾಂಧಿ ಜಯಂತಿಚಿತ್ರದುರ್ಗಜಿಲ್ಲಾ ಕಾರಾಗೃಹಪ್ರತಾಪ್ ಜೋಗಿಮಾಜಿ ಪ್ರಧಾನಿರಾಷ್ಟ್ರಪಿತಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಸ್ವಾತಂತ್ರ್ಯ ಹೋರಾಟ
Share This Article
Facebook Email Print
Previous Article ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನೇತೃತ್ಬದಲ್ಲಿ ಸರಣಿ ಸಭೆಗಳು | ಸರ್ಕಾರಿ ಮೆಡಿಕಲ್ ಕಾಲೇಜು ಪ್ರಗತಿ ಪರಿಶೀಲನಾ ಸಭೆ
Next Article ಬಬ್ಬೂರು ಕೆವಿಕೆ ಆವರಣದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸುವ ಕಾರ್ಯಕ್ರಮದ ಪೆಂಡಾಲ್ ಸಿದ್ಧತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನಕ್ಕೆ ಇನ್ನೆರಡು ದಿನ ಬಾಕಿ | ಸಿಎಂ ಸ್ವಾಗತಕ್ಕೆ ಭರ್ಜರಿ ಸಿದ್ಧತೆ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up