CHITRADURGA NEWS | 26 MARCH 2024
ಚಿತ್ರದುರ್ಗ: ನಗರದ ಪಿಳ್ಳೇಕೆರನಹಳ್ಳಿ ಚೆಕ್ಪೋಸ್ಟ್ ಬಳಿ ಸೂಕ್ತ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ ₹ 20.35 ಲಕ್ಷ ಹಣವನ್ನು ಮಂಗಳವಾರ ವಶಪಡಿಸಿಕೊಳ್ಳಲಾಗಿದೆ.
ತಾಲ್ಲೂಕಿನ ಭರಮಸಾಗರ ಗ್ರಾಮದ ಮನೋಜ್ ಕುಮಾರ್ ಎಂಬುವವರು ಹೊಸಪೇಟೆಯಿಂದ ಹಣವನ್ನು ಕಾರಿನಲ್ಲಿ ಗ್ರಾಮಕ್ಕೆ ಕೊಂಡಯ್ಯುತ್ತಿದ್ದರು. ಲೋಕಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನಲೆಯಲ್ಲಿ ಸ್ಥಾಪಿಸಲಾಗಿರುವ ಪಿಳ್ಳೇಕೆರನಹಳ್ಳಿ ಚೆಕ್ ಪೋಸ್ಟ್ನಲ್ಲಿ ಎಸ್ಎಸ್ಟಿ ತಂಡ ತಪಾಸಣೆ ನಡೆಸುವ ವೇಳೆ ಕಾರಿನಲ್ಲಿ ನಗದು ಇರುವುದು ಪತ್ತೆಯಾಗಿದೆ.
ಕ್ಲಿಕ್ ಮಾಡಿ ಓದಿ: 150 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಣೆ | ಖಚಿತ ಮಾಹಿತಿ ಆಧರಿಸಿ ಪೊಲೀಸರ ಕಾರ್ಯಾಚರಣೆ

ಮನೋಜ್ ಕುಮಾರ್ ಅವರು ಹಣ ಹೊಂದಿದ್ದಕ್ಕೆ ಯಾವುದೇ ಸೂಕ್ತ ದಾಖಲೆ ಪ್ರಸುತ ಪಡಿಸದ ಕಾರಣ ₹ 20.35 ಲಕ್ಷ ನಗದನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಹಣದ ಮೂಲ ಹಾಗೂ ಇನ್ನಿತರ ಮಾಹಿತಿಯ ತನಿಖೆಗಾಗಿ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆ ವರ್ಗಾಯಿಸಲಾಗಿದೆ.
ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ, ಗ್ರಾಮಾಂತರ ಠಾಣೆ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
