ಶಕ್ತಿ ಯೋಜನೆಯಡಿ 1.52 ಕೋಟಿ ಮಹಿಳೆಯರ ಪ್ರಯಾಣ | ₹ 52 ಕೋಟಿ ಲಾಭ

CHITRADURGA NEWS | 16 MARCH 2024
ಚಿತ್ರದುರ್ಗ: ಶಕ್ತಿ ಯೋಜನೆಯ ಜಾರಿ ನಂತರ ಚಿತ್ರದುರ್ಗ ಜಿಲ್ಲೆಯ ವಿಭಾಗೀಯ ಬಸ್‌ಗಳಲ್ಲಿ 1.52 ಕೋಟಿ ಅಧಿಕ ಮಹಿಳೆಯರು ಪ್ರಯಾಣ ಮಾಡಿದಾರೆ. ಪ್ರತಿದಿನ 60 ಸಾವಿರ ಮಹಿಳೆಯರು ಬಸ್‍ಗಳಲ್ಲಿ ಸಂಚರಿಸುತ್ತಿದ್ದಾರೆ ಎಂದು ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಹೆಬ್ಬಾಳ ಮಾಹಿತಿ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಆಯೋಜಿಸಿದ್ದ ಪ್ರಥಮ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ‘ಚಿತ್ರದುರ್ಗ ವಿಭಾಗಕ್ಕೆ ಶಕ್ತಿ ಯೋಜನೆಯಿಂದ ಒಟ್ಟು ರೂ.52 ಕೋಟಿ ಲಾಭ ಲಭಿಸಿದೆ. ಬಸ್‌ಗಳಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಹೊಸ ಬಸ್‌ಗಳ ಖರೀದಿಗೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ವಿಭಾಗಕ್ಕೆ 10 ಹೊಸ ಬಸ್‍ಗಳು ಸೇರ್ಪಡೆಯಾಗಿವೆ’ ಎಂದರು.

ಕ್ಲಿಕ್ ಮಾಡಿ ಓದಿ:https://chitradurganews.com/payment-of-crop-insurance-within-a-week/

‘ಕೆಲ ಚಾಲಕರು ಹಾಗೂ ನಿರ್ವಾಹಕರು ಶಕ್ತಿ ಯೋಜನೆ ಬಗ್ಗೆ ಟೀಕೆ ಮಾಡುವುದು ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ನಿಯಮ ಮೀರಿದವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.

3.67 ಲಕ್ಷಕ್ಕೂ ಅಧಿಕ ಗೃಹ ಬಳಕೆದಾರರು ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಲಾಭ ಪಡೆಯುತ್ತಿದ್ದಾರೆ. ಚಿತ್ರದುರ್ಗ ಬೆಸ್ಕಾಂಗೆ ಯೋಜನೆಯಿಂದ ವಾರ್ಷಿಕವಾಗಿ ರೂ.13.84 ಕೋಟಿಯನ್ನು ಸರ್ಕಾರ ಪಾವತಿ ಮಾಡುವುದು ಎಂದು ಬೆಸ್ಕಾಂ ಇಂಜಿಯರ್ ಜಯಣ್ಣ ಸಭೆಗೆ ತಿಳಿಸಿದರು.

ಜಿಲ್ಲೆಯಲ್ಲಿ 4023 ಯುವಕರು ಯುವನಿಧಿ ಯೋಜನೆಯಡಿ ನೊಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 2379 ಜನರಿಗೆ ಈಗಾಗಲೇ ನೇರವಾಗಿ ಹಣ ವರ್ಗಾವಣೆ ಮಾಡಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದರು.

ಕ್ಲಿಕ್ ಮಾಡಿ ಓದಿ: https://chitradurganews.com/farmers-struggle-to-save-crops/

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ದೊರೆಯಬೇಕು. ಜಿಲ್ಲಾಡಳಿತದೊಂದಿಗೆ ಸಮನ್ವಯ ವಹಿಸಿ ಜಿಲ್ಲಾ ಮಟ್ಟದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಕಾರ್ಯನಿರ್ವಹಿಸಲಿದೆ ಎಂದು ಜಿಲ್ಲಾ ಮಟ್ಟದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಹೇಳಿದರು.

ತಾಂತ್ರಿಕ ಕಾರಣಗಳಿಂದಾಗಿ ಫಲಾನುಭವಿಗಳು ಗ್ಯಾರೆಂಟಿ ಯೋಜನೆಗಳಿಂದ ವಂಚಿತರಾಗಬಾರದು. ಗ್ರಾಮ ಮಟ್ಟದಲ್ಲಿ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಸದಸ್ಯರು ಕಾರ್ಯನಿರ್ವಹಿಸಿ ತೊಂದರೆಗಳನ್ನು ಪರಿಹರಿಸಬೇಕು. ಪಕ್ಷಾತೀತವಾಗಿ ಕೆಲಸ ನಿರ್ವಹಿಸಬೇಕು. ಸರ್ಕಾರದ ಎಲ್ಲಾ ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ದೊರಕಲಿವೆ. ಇದರಲ್ಲಿ ಯಾವುದೇ ವೈಯಕ್ತಿಕ ಹಿತಾಸಕ್ತಿಯಿಲ್ಲ. ಸಮಾಜಮುಖಿಯಾಗಿ ಬಡವರಿಗೆ ನೆರವಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೇರಿದಂತೆ ಎಲ್ಲಾ ಶಾಸಕರು ಹಾಗೂ ಜನಪ್ರತಿನಿಧಿಗಳು ನಮ್ಮನ್ನು ನೇಮಿಸಿದ್ದಾರೆ ಎಂದು ಹೇಳಿದರು.

ಕ್ಲಿಕ್ ಮಾಡಿ ಓದಿ: https://chitradurganews.com/2000-acres-of-land-will-be-green/

ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 4.01 ಲಕ್ಷ ಬಿ.ಪಿ.ಎಲ್ ಹಾಗೂ ಎ.ಪಿ.ಎಲ್ ಕಾರ್ಡುಗಳು ಇವೆ. ಇದರಲ್ಲಿ 3.70 ಲಕ್ಷ ಕುಟುಂಬಗಳು ಅನ್ನಭಾಗ್ಯ ಯೋಜನೆಯ ಲಾಭ ಪಡೆಯುತ್ತಿವೆ. ಯೋಜನೆಯಡಿ ಪ್ರತಿ ಕುಟುಂಬ ಸದಸ್ಯರಿಗೆ ತಲಾ 5 ಕೆ.ಜಿ. ಅಕ್ಕಿ ನೀಡಲಾಗುತ್ತಿದೆ. ಉಳಿದ 5 ಕೆ.ಜಿ. ಅಕ್ಕಿಗೆ ಪ್ರತಿಯಾಗಿ ತಲಾ ರೂ.170 ರೂಪಾಯಿಗಳನ್ನು ಡಿಬಿಟಿ ಮುಖಾಂತರ ಫಲಾನುಭವಿಗಳಿಗೆ ನೀಡಲಾಗುತ್ತಿದೆ. ಇದುವರೆಗೂ 3.60 ಲಕ್ಷ ಪಡಿತರ ಕಾರ್ಡುದಾರ ಖಾತೆ ಹಣ ವರ್ಗಾವಣೆಯಾಗುತ್ತಿದೆ. ಬಯೋಮೆಟ್ರಿಕ್ ಸೇರಿದಂತೆ ಇತರೆ ತಾಂತ್ರಿಕ ಕಾರಣಗಳಿಗಾಗಿ 10 ಸಾವಿರ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಸಾಧ್ಯವಾಗಿಲ್ಲ. ಇದರ ಬಗ್ಗೆ ಸರ್ಕಾರಕ್ಕೆ ವರದಿ ನೀಡಲಾಗಿದೆ. ಸರ್ಕಾರ ನಿರ್ದೇಶನ ಅನುಸರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್ ಸಭೆಯಲ್ಲಿ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಒಟ್ಟು 3.84 ಲಕ್ಷಕ್ಕೂ ಅಧಿಕ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯಡಿ ನೊಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 3.60 ಲಕ್ಷ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ರೂ.2000 ಜಮೆ ಮಾಡುತ್ತಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಸಭೆಯಲ್ಲಿ ತಿಳಿಸಿದರು.

ಕ್ಲಿಕ್ ಮಾಡಿ ಓದಿ: https://chitradurganews.com/fixation-of-uniform-rate-for-drilling-of-borewell

ನೂತನವಾಗಿ ಅಸ್ತಿತ್ವಕ್ಕೆ ಬಂದ ಜಿಲ್ಲಾ ಮಟ್ಟದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಸ್ವಾಗತಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಭಿನಂಧನೆ ಸಲ್ಲಿಸಿದರು.

ಗ್ಯಾರೆಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರಾಗಿ ಆರ್.ಶಿವಣ್ಣ, ಉಪಾಧ್ಯಕ್ಷರುಗಳಾಗಿ ಡಿ.ಎನ್.ಮೈಲಾರಪ್ಪ, ಖಾದಿ.ಜೆ.ರಮೇಶ್, ಟಿ.ನಿರಂಜನ್, ಜಿ.ಟಿ.ಬಾಬುರೆಡ್ಡಿ, ನಾಗೇಶ್ ರೆಡ್ಡಿ, ಸದಸ್ಯರುಗಳಾಗಿ ಕೆ.ಪಿ.ಸಂಪತ್‍ಕುಮಾರ್, ಬಿ.ಟಿ.ಜಗದೀಶ್, ಅಬ್ದುಲ್ಲಾ ಶಾ ವಲಿ, ಟಿ.ಕೃಷ್ಣಮೂರ್ತಿ, ನಾಗರಾಜ್, ಹೇಮಂತ್ ಯಾದವ್, ಮಹಮದ್ ಇಸ್ಮಾಯಿಲ್, ಎ.ಲೋಹಿತ್, ಕೆ.ಎ.ತಿಪ್ಪೇಶ್, ಎಲ್.ಇಂದಿರಾ, ಪಿ.ಆರ್.ಶಿವಕುಮಾರ್, ಮಧುಪಾಲೇಗೌಡ, ಟಿ.ಪ್ರಕಾಶ್, ಚನ್ನಕೇಶವ, ಜಿ.ಪಿ.ಸುರೇಶ್ ಕಾರ್ಯನಿರ್ವಹಿಸಲಿದ್ದಾರೆ.

ತಾಲ್ಲೂಕು ಮಟ್ಟದಲ್ಲಿಯೂ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯನ್ನು ರಚಿಸಲಾಗಿದೆ. ತಾ.ಪಂ.ಇಓ ಈ ಸಮಿತಿ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಜಿಲ್ಲಾ ಮಟ್ಟದ ಪ್ರಾಧಿಕಾರದಲ್ಲಿ ಚರ್ಚಿಸುವ ವಿಷಯಗಳ ಆಧಾರದಲ್ಲಿ ಗ್ಯಾರೆಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದಾಗಿ ಜಿಲ್ಲಾ ಮಟ್ಟದ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿರುವ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸಭೆಯಲ್ಲಿ ತಿಳಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version