
CHITRADURGA NEWS | 24 OCTOBER 2024
ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯಕ್ಕೆ ಭರ್ಜರಿ ಒಳಹರಿವು ಬರುತ್ತಿದ್ದು, ಒಂದೇ ದಿನದಲ್ಲಿ 1 ಟಿಎಂಸಿ ನೀರು ಜಲಾಶಯ ಸೇರಿದ್ದು, ಈ ವರ್ಷ ಭರ್ತಿಯಾಗುವುದು ಬಹುತೇಕ ನಿಶ್ಚಿತವಾಗಿದೆ.
ವೇದಾವತಿ ನದಿಯಲ್ಲಿ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಅ.24 ಗುರುವಾರ ಬೆಳಗ್ಗೆ ನಡೆಸಿದ ಮಾಪನದ ವೇಳೆ ವಿವಿ ಸಾಘರ ಜಲಾಶಯಕ್ಕೆ ಬರೋಬ್ಬರಿ 7741 ಕ್ಯೂಸೆಕ್ ನೀರು ಹರಿದು ಬಂದಿದೆ.
ಇದನ್ನೂ ಓದಿ: ವಿವಿ ಸಾಗರಕ್ಕೆ ಭರ್ಜರಿ ನೀರು | ಮೈದುಂಬಿ ಹರಿಯುತ್ತಿರುವ ವೇದಾವತಿ
130 ಅಡಿ ಎತ್ತರದ ವಿವಿ ಸಾಗರ ಜಲಾಶಯದಲ್ಲಿ ಅ.24ಕ್ಕೆ 125.60 ಅಡಿಯಷ್ಟು ನೀರು ಬಂದಿದೆ. 30 ಟಿಎಂಸಿ ಸಾಮಥ್ರ್ಯದ ಈ ಜಲಾಶಯಕ್ಕೆ ಈಗ 26.73 ಟಿಎಂಸಿ ನೀರು ಸಂಗ್ರಹವಾಗಿದೆ. ಭರ್ತಿಯಾಗಲು ಇನ್ನು 3 ಟಿಎಂಸಿ ಮಾತ್ರ ಬೇಕಾಗಿದೆ.

ಅ.23 ರಂದು ಕೂಡಾ ವಿವಿ ಸಾಗರಕ್ಕೆ 4852 ಕ್ಯೂಸೆಕ್ ನೀರು ಹರಿದು ಬಂದಿತ್ತು. ಇಂದು ಇನ್ನೂ ಹೆಚ್ಚಾಗಿದ್ದು, ನಾಳೆಯೂ ಈ ಒಳಹರಿವು ಇರಲಿದೆ. ಇದರಿಂದಾಗಿ ಜಲಾಶಯಕ್ಕೆ ವೇದಾವತಿ ನದಿ ಮೂಲಕ ಭಾರೀ ಪ್ರಮಾಣದಲ್ಲಿ ನೀರು ಬಂದು ಸೇರುತ್ತಿದೆ.
ಇದನ್ನೂ ಓದಿ: ನೀರಿನಲ್ಲಿ ಸಿಲುಕಿದ ಟ್ರ್ಯಾಕ್ಟರ್ | ನಾಯಕನಹಟ್ಟಿ ಹೊರಮಠ ಜಲಾವೃತ
89 ವರ್ಷಗಳ ನಂತರ 2022ರಲ್ಲಿ ಭರ್ತಿಯಾಗಿ ತಿಂಗಳುಗಳ ಕಾಲ ಕೋಟಿಯಲ್ಲಿ ಅಪಾರ ಪ್ರಮಾಣದ ನೀರು ಹರಿದಿತ್ತು. ಈಗ 2024ರಲ್ಲಿ ಮತ್ತೊಮ್ಮೆ ವಿವಿ ಸಾಗರ ಕೋಡಿ ಹರಿಯುವ ಸಾಧ್ಯತೆ ಕಂಡು ಬರುತ್ತಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
