
CHITRADURGA NEWS | 13 JUNE 2024
ಚಿತ್ರದುರ್ಗ: ನಗರದ ತುರುವನೂರು ರಸ್ತೆ ಹಾಗೂ ಸೇಂಟ್ ಜೋಸೆಫ್ ಶಾಲೆಯ ಸುತ್ತ-ಮುತ್ತ ಪ್ರದೇಶಗಳಲ್ಲಿ ಜಿಲ್ಲಾ, ತಾಲ್ಲೂಕು ಮಟ್ಟದ ತಂಬಾಕು ತನಿಖಾ ತಂಡವು ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಗುರುವಾರ ಭೇಟಿ ನೀಡಿ, ದಾಳಿ ನಡೆಸಿ ದಂಡ ವಿಧಿಸಿದೆ.
ಇದನ್ನೂ ಓದಿ: ಜೂನ್ 16 ರಂದು ಡಾ.ದೊಡ್ಡಮಲ್ಲಯ್ಯ ಅವರ ಕಂಡುಂಡ ಕಥೆ ಹಾಗೂ ಮೂಕ ಲಹರಿ ಕೃತಿ ಬಿಡುಗಡೆ
ಸಾರ್ವಜನಿಕರಲ್ಲಿ ಮತ್ತು ಅಂಗಡಿ ಮಾಲೀಕರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ಎಚ್ಚರಿಸಿ ಜಾಗೃತಿ ಮೂಡಿಸಲಾಯಿತು. ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್ಗಳನ್ನು ಹಾಕಲು ಸೂಚಿಸಲಾಯಿತು.
ಸೆಕ್ಷನ್-4 ಅಡಿಯಲ್ಲಿ 02 ಪ್ರಕರಣ ದಾಖಲಿಸಿ ರೂ. 200 ದಂಡವನ್ನು, ಸೆಕ್ಷನ್-6ಎ ಅಡಿಯಲ್ಲಿ 02 ಪ್ರಕರಣ ದಾಖಲಿಸಿ ರೂ.200 ದಂಡವನ್ನು ಮತ್ತು ಸೆಕ್ಷನ್-6ಬಿ ಅಡಿಯಲ್ಲಿ 07 ಪ್ರಕರಣದ ದಾಖಲಿಸಿ ರೂ. 1200 ದಂಡವನ್ನು ವಸೂಲಿ ಮಾಡಲಾಯಿತು.
ಇದನ್ನೂ ಓದಿ: ಅನಗತ್ಯವಾಗಿ ಎಂಎಲ್ಸಿ ಮಾಡಬೇಡಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ
ತಂಬಾಕು ದಾಳಿಯಲ್ಲಿ ಜಿಲ್ಲಾ, ತಾಲ್ಲೂಕು ಮಟ್ಟದ ತನಿಖಾ ತಂಡದ ಅಧಿಕಾರಿಗಳಾದ ತಾಲ್ಲೂಕು ಅರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ, ಪೊಲೀಸ್ ಇಲಾಖೆಯ ಶೃಂಗಾರ ಸಾಗರ್, ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಕೆ.ಪ್ರವೀಣ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
