
CHITRADURGA NEWS | 14 JANUARY 2024
ಚಿತ್ರದುರ್ಗ: ಲಾಭದ ಆಸೆ ತೋರಿಸಿ ಆನ್ಲೈನ್ ಮೂಲಕ ಹಣ ವರ್ಗಾವಣೆ ಮಾಡಿಸಿಕೊಂಡು ವಂಚನೆ ಮಾಡಿರುವ ಸಂಬಂಧ ಚಿತ್ರದುರ್ಗದ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹೊಸದುರ್ಗದ ವಿಜ್ಞಾನಿ ವಿಜಯ್.ಎನ್ ಎಂಬುವವರಿಗೆ 2023 ನವೆಂಬರ್ನಲ್ಲಿ ವಾಟ್ಸಪ್ ಮೂಲಕ ಜೆಪಿ ಮಾರ್ಗನ್ ಫೈನಾನ್ಸ್ ಡಿಮ್ಯಾಟ್ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂದು ಅನಾಮಿಕ ವ್ಯಕ್ತಿಯೊಬ್ಬರು ಸಂದೇಶ ಕಳಿಸಿದ್ದಾರೆ.

ಇದನ್ನೂ ಓದಿ: ಲಂಚಕ್ಕೆ ಬೇಡಿಕೆ | ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ಇದನ್ನು ನಂಬಿದ ವಿಜಯ್ ಹಾಗೂ ಅವರ ಪತ್ನಿಯ ಖಾತೆಗಳಿಂದ ನವೆಂಬರ್ 21 ರಿಂದ 26ರವರೆಗೆ 14.21 ಲಕ್ಷ ರೂ.ಗಳನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ.
ಆದರೆ, ಇದೊಂದು ನಕಲಿ ಕಂಪನಿ ಎಂದು ಗೊತ್ತಾಗಿದ್ದು, ವಿಜಯ್ ಹಾಗೂ ಅವರ ಪತ್ನಿ ಮೋಸ ಹೋಗಿರುವ ಬಗ್ಗೆ ಸಂಪರ್ಕಿಸಿದ ಮೊಬೈಲ್ ಸಂಖ್ಯೆಯ ಆಧಾರದಲ್ಲಿ ಸೈಬರ್ ಠಾಣೆಯಲ್ಲಿ ಐಟಿ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
