
CHITRADURGA NEWS | 07 MARCH 2025
ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ನಲ್ಲಿ ರೈತರಿಗೆ ಅನುಗ್ರಹ ಯೋಜನೆಯಡಿ ಹೆಚ್ಚು ಲಾಭ ದೊರೆಯುವಂತೆ ಮಾಡಿದ್ದಾರೆ.
ಹಸು, ಎಮ್ಮೆ, ಕುರಿ, ಮೇಕೆ ಸಾಕಾಣೆ ಮಾಡುವ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅನುಗ್ರಹ ಯೋಜನೆಯಡಿ ನೀಡುತ್ತಿದ್ದ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಲಾಗಿದೆ.
ಇದನ್ನೂ ಓದಿ: ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿ ಈ ವರ್ಷ ಪೂರ್ಣ | ಸಿಎಂ ಸಿದ್ದರಾಮಯ್ಯ
ಅನುಗ್ರಹ ಯೋಜನೆಯಡಿ ಈವರೆಗೆ ಹಸು, ಎಮ್ಮೆ(ಜಾನುವಾರು) ಮೃತಪಟ್ಟರೆ ನೀಡುತ್ತಿದ್ದ ಹತ್ತು ಸಾವಿರ ರೂ.ಗಳನ್ನು 15 ಸಾವಿರಕ್ಕೆ ಹೆಚ್ಚಳ ಮಾಡಿದ್ದಾರೆ.
ಕುರಿ, ಮೇಕೆಗಳು ಮೃತಪಟ್ಟರೆ ನೀಡುತ್ತಿದ್ದ ಪರಿಹಾರವನ್ನು 5 ಸಾವಿರದಿಂದ 7500 ಸಾವಿರಕ್ಕೆ ಹೆಚ್ಚಿಸಿದ್ದು, 3 ರಿಂದ 6 ತಿಂಗಳ ಕುರಿ ಮರಿಗಳು ಮೃತಪಟ್ಟರೆ ನೀಡುತ್ತಿದ್ದ 3500 ಪರಿಹಾರವನ್ನು 5 ಸಾವಿರಕ್ಕೆ ಹೆಚ್ಚಿಸಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
