By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Railway: ಕೇಂದ್ರ ಬಜೆಟ್‌ನಲ್ಲಿ ಚಿತ್ರದುರ್ಗ ರೈಲ್ವೇ ಯೋಜನೆಗೆ 150 ಕೋಟಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Railway: ಕೇಂದ್ರ ಬಜೆಟ್‌ನಲ್ಲಿ ಚಿತ್ರದುರ್ಗ ರೈಲ್ವೇ ಯೋಜನೆಗೆ 150 ಕೋಟಿ

ಮುಖ್ಯ ಸುದ್ದಿ

Railway: ಕೇಂದ್ರ ಬಜೆಟ್‌ನಲ್ಲಿ ಚಿತ್ರದುರ್ಗ ರೈಲ್ವೇ ಯೋಜನೆಗೆ 150 ಕೋಟಿ

chitradurganews.com
Last updated: 7 August 2024 20:14
chitradurganews.com
11 months ago
Share
Davangere, Chitradurga and Tumkur direct train route
ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ನೇರ ರೈಲು ಮಾರ್ಗ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 07 AUGUST 2024

ಚಿತ್ರದುರ್ಗ: ಕೇಂದ್ರ ಬಜೆಟ್‌ನಲ್ಲಿ ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ನೇರ ರೈಲು (Railway) ಮಾರ್ಗಕ್ಕೆ 150 ಕೋಟಿ ರೂ. ಮೀಸಲಿಡಲಾಗಿದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಲೋಕಸಭೆ ಅಧಿವೇಶನದಲ್ಲಿ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಈ ಬಗ್ಗೆ ಪ್ರಶ್ನೆ ಕೇಳಿದ್ದು, ಅದಕ್ಕೆ ಉತ್ತರಿಸುವಾಗಿ ರೈಲ್ವೇ ಯೋಜನೆಗೆ ವಲಯವಾರು ಅನುದಾನ ಹಂಚಿಕೆ ಮಾಡಲಿದ್ದು ನೇರ ರೈಲು ಮಾರ್ಗಕ್ಕೆ 150 ಕೋಟಿ ಮೀಸಲಿಟ್ಟಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ವೇದಾವತಿ ಜೊತೆಗೆ ನೇತ್ರಾವತಿ ಸಮಾಗಮ | ಎತ್ತಿನಹೊಳೆ ನೀರು ವಿವಿ ಸಾಗರಕ್ಕೆ | ಈ ವರ್ಷವೂ ಮಾರಿಕಣಿವೆ ಕೋಡಿ ಪಕ್ಕಾ

ತುಮಕೂರು-ಚಿತ್ರದುರ್ಗ-ದಾವಣಗೆರೆ ನಡುವೆ 191 ಕಿ.ಮೀ ಉದ್ದದ ನೇರ ರೈಲು ಮಾರ್ಗವನ್ನು ಕರ್ನಾಟಕ ರಾಜ್ಯ ಸರ್ಕಾರದೊಂದಿಗೆ ವೆಚ್ಚ ಹಂಚಿಕೆ ಆಧಾರದ ಮೇಲೆ ಕೈಗೆತ್ತಿಕೊಳ್ಳಲಾಗಿದೆ.

ಇದರಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಉಚಿತವಾಗಿ ಅಗತ್ಯ ಭೂಮಿ ಹಾಗೂ ಶೇ.50 ರಷ್ಟು ನಿರ್ಮಾಣ ವೆಚ್ಚವನ್ನು ಹಂಚಿಕೊಳ್ಳುತ್ತಿದೆ. ಒಟ್ಟಾರೆ ಯೋಜನೆಯ ವೆಚ್ಚ ರೂ.2,142.35 ಕೋಟಿಯಾಗಲಿದ್ದು, ಮಾರ್ಚ್ 2024 ರವರೆಗೆ ರೂ.359.32 ಕೋಟಿ ವೆಚ್ಚ ಮಾಡಲಾಗಿದೆ.

ಇದನ್ನೂ ಓದಿ: ಏಳು ದಿನ ವಿದ್ಯುತ್‌ ವ್ಯತ್ಯಯ | ಬೆಸ್ಕಾಂ ಮಾಹಿತಿ

2024-25 ರ ರೈಲ್ವೆ ಬಜೆಟ್‌ನಲ್ಲಿ 150 ಕೋಟಿ ಅನುದಾನವನ್ನು ಈ ಯೋಜನೆಗಾಗಿ ಒದಗಿಸಲಾಗಿದೆ ಎಂದಿದ್ದಾರೆ.

2024 ಏಪ್ರಿಲ್ 1ರ ಮಾಹಿತಿಯಂತೆ ಕರ್ನಾಟಕ ರಾಜ್ಯದಲ್ಲಿ ಅಂದಾಜು 47,016 ಕೋಟಿ ವೆಚ್ಚದ 21 ಹೊಸ ಮಾರ್ಗಗಳು ಹಾಗೂ 10 ಡಬ್ಲಿಂಗ್ ಕಾಮಗಾರಿಗಳು ಸೇರಿ ಒಟ್ಟು 3,840 ಕಿ.ಮೀ ಉದ್ದದ 31 ಮೂಲಸೌಲಭ್ಯ ಯೋಜನೆಗಳು ವಿವಿಧ ಹಂತದ ಪ್ಲಾನಿಂಗ್/ಅನುಮೋದನೆ/ಪ್ರಗತಿ ಹಂತದಲ್ಲಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿವಿ ಸಾಗರಕ್ಕೆ ಹೆಚ್ಚಿದ ಒಳಹರಿವು | ಜಲಾಶಯದ ಇಂದಿನ ನೀರಿನ ಮಟ್ಟ

ಇದರಲ್ಲಿ 1,302 ಕಿ.ಮೀ ಉದ್ದದ ಮಾರ್ಗದ ಕೆಲಸ ಪೂರ್ಣಗೊಳಿಸಿ ಕಾರ್ಯಾರಂಭ ಮಾಡಲಾಗಿದೆ ಮತ್ತು ಮಾರ್ಚ್ 2024 ರವರೆಗೆ ರೂ.17,382 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Ashwini VaishnavDavangere-Chitradurga-Tumkur Rail LineDirect Rail LineGovinda KarajolagovtKarnatakaRailRailway Ministerಅಶ್ವಿನಿ ವೈಷ್ಣವ್ಕರ್ನಾಟಕಗೋವಿಂದ ಕಾರಜೋಳದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗನೇರ ರೈಲು ಮಾರ್ಗರೈಲುರೈಲ್ವೇ ಸಚಿವಸರ್ಕಾರ
Share This Article
Facebook Email Print
Previous Article jobs in chitradurga news Challakere; ಚಳ್ಳಕೆರೆ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
Next Article ರಘುಚಂದನ್ ನೇತೃತ್ವದಲ್ಲಿ ಮೈಸೂರು ಪಾದಯಾತ್ರೆಗೆ ತೆರಳಿದ ನೂರಾರು ಕಾರ್ಯಕರ್ತರು Mysore; ರಘುಚಂದನ್ ನೇತೃತ್ವ | ಮೈಸೂರು ಪಾದಯಾತ್ರೆಗೆ ತೆರಳಿದ ನೂರಾರು ಬಿಜೆಪಿ ಕಾರ್ಯಕರ್ತರು
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up