
CHITRADURGA NEWS | 26 MARCH 2024
ಚಿತ್ರದುರ್ಗ: ಅನಧಿಕೃತವಾಗಿ ಸಾಗಟ ಮಾಡುತ್ತಿದ್ದ 150 ಕ್ವಿಂಟಲ್ ಅನ್ನಭಾಗ್ಯ ಅಕ್ಕಿಯನ್ನು ಹೊಳಲ್ಕೆರೆ ಮಲಾಡಿಹಳ್ಳಿ ಬಳಿ ಶನಿವಾರ ವಶಕ್ಕೆ ಪಡೆಯಲಾಗಿದೆ.
ಕೆ.ಎ.17 ಎ.ಎ.2952 ಲಾರಿಯಲ್ಲಿ ಶಿವಮೊಗ್ಗ ರಸ್ತೆಯಿಂದ ಅಕ್ರಮವಾಗಿ ಸಾರ್ವಜನಿಕ ಪಡಿತರ ವಿತರಣೆಯಲ್ಲಿ ನೀಡುವ ಅನ್ನಭಾಗ್ಯ ಅಕ್ಕಿ ಸಾಗಣಿಕೆ ಮಾಡಲಾಗುತ್ತದೆ ಎಂಬ ಮಾಹಿತಿ ಆಧರಿಸಿ, ಹೊಳಲ್ಕೆರೆ ಪೊಲೀಸ್ ಉಪನಿರೀಕ್ಷ ಸುರೇಶ್ ಹಾಗೂ ಅವರ ತಂಡ ಲಾರಿ ಮತ್ತು 150 ಕ್ವಿಂಟಲ್ ಅಕ್ಕಿ ವಶಪಡೆದಿದೆ.
ಇದನ್ನೂ ಓದಿ: ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ
ಹೊಳಲ್ಕೆರೆ ತಹಶೀಲ್ದಾರ್ ಫಾತೀಮಾ ಬಿಬಿ ಅವರ ನಿರ್ದೇಶನದ ಅನುಸಾರ ಆಹಾರ ಶಿರಸ್ತೇದಾರ್ ಲಿಂಗರಾಜು ಸ್ಥಳಕ್ಕೆ ಭೇಟಿ ನೀಡಿ ಅಧಿಕೃತವಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.
ಅಗತ್ಯ ವಸ್ತುಗಳ ನಿಯಂತ್ರಣ ಕಾಯ್ದೆ ಕಲಂ 3 ಮತ್ತು ಚುನಾವಣೆ ಅಕ್ರಮಗಳ ತಡೆಗಟ್ಟುವ ಕಾಯ್ದೆ ಕಲಂ 7 ಅಡಿ ಪ್ರಕರಣ ದಾಖಲಿಸಲಾಗಿದೆ. ವಿಚಾರಣೆ ಮುಂದುವರೆದಿದೆ. ಕೆ.ಎ.17 ಎ.ಎ.2952 ಲಾರಿ ಚಾಲಕ ಅಕ್ಕಿಯನ್ನು ಚನ್ನಗಿರಿ ತಾಲ್ಲೂಕಿನಿಂದ ಬೆಂಗಳೂರು ಹಾಗೂ ಮಂಡ್ಯ ನಗರಕ್ಕೆ ತೆಗೆದುಕೊಂಡು ಹೋಗುತ್ತಿರುವುದಾಗಿ ತನಿಖೆಯಲ್ಲಿ ತಿಳಿಸಿದ್ದಾನೆ.
ಇದನ್ನೂ ಓದಿ: ನಾಯನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆ | ಅಂತಿಮ ಸಿದ್ಧತೆಗಳ ಪರಿಶೀಲನೆ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
