
CHITRADURGA NEWS | 27 SEPTEMBER 2025
ಚಿತ್ರದುರ್ಗ: ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದ 2025ನೇ ಸಾಲಿನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭವನ್ನು ಶ್ರೀಮುರುಘಾಮಠದ ಅನುಭವಮಂಟಪದಲ್ಲಿ ಆಯೋಜಿಸಲಾಗಿತ್ತು.
ಇದನ್ನೂ ಓದಿ: ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದೊಡ್ಡಕೆರೆ ಹೆಚ್.ಜಿ. ಮಂಜಪ್ಪ ಸೆ.29 ರಂದು ಪದಗ್ರಹಣ

ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಶಿವಶರಣ ಮಾದಾರಚೆನ್ನಯ್ಯ ಗುರುಪೀಠದ ಡಾ.ಮಾದಾರಚನ್ನಯ್ಯ ಸ್ವಾಮಿಗಳು ಮಾತನಾಡಿ, ಇದು ನಿಮ್ಮೆಲ್ಲರ ಜೀವನದ ಅವಿಸ್ಮರಣೀಯ ದಿನ. ಆದರೆ ಅದರ ಹಿಂದೆ ನಿಮ್ಮ ತಂದೆ ತಾಯಿಗಳು ಎಷ್ಟು ಶ್ರಮಪಟ್ಟಿದ್ದಾರೆ ಎಂದು ನೀವು ನೆನೆಯಬೇಕು. ನಿಮಗಿಂತ ನಿಮ್ಮ ಪೋಷಕರು ಹೆಚ್ಚು ಸಂತೋಷ ಪಟ್ಟಿದ್ದಾರೆ. ನಿಮ್ಮಗಳ ವಿದ್ಯಾಭ್ಯಾಸದ ಸಾಧನೆ ಮುಂದುವರೆದು ಉನ್ನತಿಯನ್ನು ಪಡೆಯಿರಿ.
ಅಮೆರಿಕದಲ್ಲಿ ಒಂದು ಪದವಿ ಸನ್ಮಾನ ಕಾರ್ಯಕ್ರಮ ಮಾಡುವಾಗ ಅಂದಿನ ಅಧ್ಯಕ್ಷರಾದ ಬರಾಕ್ಒಬಾಮರವರು ಅಮೆರಿಕದಲ್ಲಿ ತಾಂತ್ರಿಕ ಶಿಕ್ಷಣವು ಕಡಿಮೆಯಾಗುತ್ತಿದ್ದು, ಅದು ಹೆಚ್ಚಿಸದೇ ಹೋದರೆ ಮುಂದೊ0ದು ದಿನ ಭಾರತೀಯರೇ ನಮ್ಮ ದೇಶದಲ್ಲಿ ಹೆಚ್ಚಿನ ಉದ್ಯೋಗಸ್ಥರಾಗಿರುತ್ತಾರೆ ಎಂದಿದ್ದರು. ಅದರಂತೆ ಭಾರತ ಸಾಗುತ್ತಿದೆ.
ತಂದೆ ತಾಯಿಗಳಿಗೆ ಋಣ ತೀರಿಸಿ ದೇಶ ಸೇವೆಯನ್ನು ಮಾಡುವಂತರಾಗಿ. ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಸೀಮಿತವಾಗದೆ, ಸಮಾಜಕ್ಕೆ ಕೊಡುಗೆ ನೀಡುವ ಉತ್ತಮ ಪ್ರಜೆಗಳಾಗಿ ಬೆಳೆಯಬೇಕು. ಜೀವನದಲ್ಲಿ ಶರಣ ಸಂಸ್ಕೃತಿಯ ಮೌಲ್ಯಗಳನ್ನು ಅಳವಡಿಸಿಕೊಂಡು, ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಯಶಸ್ಸು ಸಾಧಿಸಬೇಕು. ನಿಮ್ಮ ಭವಿಷ್ಯದ ಸುಂದರಮಯವಾಗಿರಲಿ ಎಂದು ನುಡಿದರು.
ಇದನ್ನೂ ಓದಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ | ಗೈರಾಗುವ ಸಿಬ್ಬಂದಿಗಳ ಮೇಲೆ ಕಠಿಣ ಕ್ರಮ | ಡಿಸಿ ಎಚ್ಚರಿಕೆ
ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್ಜೆಎಂ ವಿದ್ಯಾಪೀಠಪೀಠದ ಆಡಳಿತಮಂಡಳಿ ಅಧ್ಯಕ್ಷ ಶಿವಯೋಗಿ ಸಿ ಕಳಸದ ವಿಡಿಯೋ ಕಾನ್ಫರೆನ್ಸ್ ಮುಖಾಂತರ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿ, ವಿದ್ಯಾರ್ಥಿಗಳಿಗೆ ಶುಭಕೋರಿ, ನಿಮ್ಮ ಜೀವನದಲ್ಲಿ ಯಶಸ್ಸನ್ನು ಪಡೆಯಿರಿ ಎಂದು ನುಡಿದರು.
ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್ಜೆಎಂ ವಿದ್ಯಾಪೀಠಪೀಠದ ಆಡಳಿತಮಂಡಳಿ ಸದಸ್ಯರಾದ ಡಾ.ಪಿ ಎಸ್ ಶಂಕರ್ರವರು ವಿಡಿಯೋಕಾನ್ಫರೆನ್ಸ್ ಮೂಲಕ ವಿದ್ಯಾರ್ಥಿಗಳಿಗೆ ಶುಭಕೋರಿ, ಜ್ಞಾನಿಗಳಿಗೆ ಸಮಾಜದಲ್ಲಿ ಮನ್ನಣೆ ಇದೆ. ಆದ್ದರಿಂದ ತಾವುಗಳು ಜ್ಞಾನಿಗಳಾಗಿ ಬಾಳಿ ಎಂದು ನುಡಿದರು.
ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್ಜೆಎಂ ವಿದ್ಯಾಪೀಠಪೀಠದ ಆಡಳಿತಮಂಡಳಿ ಸದಸ್ಯರಾದ ಶ್ರೀ.ಎಸ್.ಎನ್.ಚಂದ್ರಶೇಖರ್ ವಿಡಿಯೋಕಾನ್ಫರೆನ್ಸ್ ಮೂಲಕ ವಿದ್ಯಾರ್ಥಿಗಳಿಗೆ ಶುಭಕೋರಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದಾವಣಗೆರೆಯ ಯು.ಬಿ.ಡಿ.ಟಿ.ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾದ ಡಾ.ಡಿ.ಪಿ. ನಾಗರಾಜಪ್ಪ ಮಾತನಾಡಿ, ಇಂದಿನ ಪೀಳಿಗೆ ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನವನ್ನು ಪಡೆದವರಾಗಿದ್ದಾರೆ. ನಿಮ್ಮಗಳ ಜೀವನ ಹಾಗೂ ಭವಿಷ್ಯ ಉತ್ತಮವಾಗಿರಲಿ.
ಇದನ್ನೂ ಓದಿ: ಬಿಜೆಪಿಗೆ ನಗರ ಮಂಡಲಕ್ಕೆ ಪದಾಧಿಕಾರಿಗಳ ನೇಮಕ | ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಆದೇಶ
ನಮ್ಮ ರಾಜ್ಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದಡಿಯಲ್ಲಿ ವಿದ್ಯಾರ್ಥಿಗಳಿಗೆ ನೂತನ ತಂತ್ರಜ್ಞಾನಗಳನ್ನು ಒಳಗೊಂಡ ಪಠ್ಯಕ್ರಮಗಳನ್ನು ಪರಿಚಯಿಸುತ್ತಿದೆ. ಅದರಂತೆ ಅನೇಕ ಇಂಜಿನಿಯರಿಂಗ್ ಕಾಲೇಜುಗಳು ವಿದ್ಯಾರ್ಥಿಗಳಿಗೆ ಜ್ಞಾನವನ್ನು ತುಂಬುತ್ತಿವೆ.
ವಿದ್ಯಾರ್ಥಿಗಳ ಅನುಕೂಲತೆಯನ್ನು ಗಮನದಲ್ಲಿರಿಸಿಕೊಂಡು ವಿಶ್ವವಿದ್ಯಾಲಯ ಆಧುನಿಕ ತಂತ್ರಜ್ಞಾನವನ್ನು ಜಾರಿಗೆ ತರುತ್ತಿದೆ. ಶ್ರೀಮಠವು ನೂರಾರು ವರ್ಷಗಳಿಂದ ತ್ರಿವಿಧ ದಾಸೋಹವನ್ನು ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ. ಗುರುಗಳ ಸ್ಥಾನ ಬಹು ಮುಖ್ಯವಾದದ್ದು. ನಿಮ್ಮ ಸಂಸ್ಥೆಯ ಏಳಿಗೆಗಾಗಿ ಶ್ರಮಿಸಿ ಎಂದು ಹೇಳಿದರು.
ಎಸ್ಜೆಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಸಿ.ಬಿ.ಭರತ್, ಬಿ.ರುದ್ರಮನಿ ಮಾತನಾಡಿದರು.
ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತಮಂಡಳಿಯ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ, ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದ ವಿವಿಧ ವಿಭಾಗದ ಮುಖ್ಯಸ್ಥರುಗಳಾದ ಡಾ.ಕೃಷ್ಣಾರೆಡ್ಡಿ ಕೆ ಆರ್, ಡಾ.ಸಿದ್ದೇಶ್ ಕೆ ಬಿ, ಡಾ.ಕುಮಾರಸ್ವಾಮಿ ಬಿ ಜಿ, ಡಾ.ಶ್ರೀಶೈಲ ಜೆ ಎಂ, ಡಾ. ಶಿವಕುಮಾರ್ ಎಸ್ ಪಿ, ಡಾ.ಅರವಿಂದ್ ಟಿ.ವಿ, ಡಾ. ಲೋಕೇಶ್ ಹೆಚ್ ಜೆ, ಪ್ರೊ.ಶಶಿಧರ್ ಎ.ಪಿ, ಡಾ.ನಿರಂಜನ್ ಈ, ಐಕ್ಯೂಎಸಿ ಸಂಚಾಲಕ ಡಾ.ರಾಜೇಶ್ ಎ.ಎಂ, ಕಾರ್ಯಕ್ರಮ ಸಂಚಾಲಕ ಪ್ರೊ.ಲವಕುಮಾರ್ ಟಿ ಬಿ ಹಾಗೂ ವಕೀಲರಾದ ಉಮೇಶ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.
ಇದನ್ನೂ ಓದಿ: ಚಿತ್ರದುರ್ಗ ನಗರದಲ್ಲಿ ಸೆ. 29 ರಂದು ವಿದ್ಯುತ್ ವ್ಯತ್ಯಯ
200 ಸ್ನಾತಕ ವಿದ್ಯಾರ್ಥಿಗಳಿಗೆ 05 ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.
ಪ್ರೊ.ಶ್ರುತಿ ಎಂ ಕೆ ಪ್ರತಿಜ್ಞೆ ವಿಧಿಯನ್ನು ಬೋಧಿಸಿದರು. ಪ್ರಣತಿ ಪ್ರಾರ್ಥಿಸಿ, ಡಾ. ಚೇತನ್.ಎಸ್ ಸ್ವಾಗತಿಸಿ, ಪ್ರೊ. ಸುಶ್ಮಿತಾ ದೇಬ್ ನಿರೂಪಿಸಿ, ಪ್ರೊ.ಅನುಷಾ.ವಿ ವಂದಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
