By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮುರುಘಾ ಮಠದಿಂದ 25 ಎಕರೆ ತೋಟ ಮಾಡುವ ಸಂಕಲ್ಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮುರುಘಾ ಮಠದಿಂದ 25 ಎಕರೆ ತೋಟ ಮಾಡುವ ಸಂಕಲ್ಪ

ಮುಖ್ಯ ಸುದ್ದಿ

ಮುರುಘಾ ಮಠದಿಂದ 25 ಎಕರೆ ತೋಟ ಮಾಡುವ ಸಂಕಲ್ಪ

chitradurganews.com
Last updated: 5 June 2025 22:52
chitradurganews.com
2 weeks ago
Share
areca garden intent from murugha matha
ಮುರುಘಾ ಮಠದಿಂದ ತೋಟ ನಿರ್ಮಾಣಕ್ಕೆ ಯೋಜನೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 06 JUNE 2025

ಚಿತ್ರದುರ್ಗ: ಸೀಬಾರ ಬಳಿಯಿರುವ ಮುರುಘಾ ಮಠದ 25 ಎಕರೆ ಜಾಗದಲ್ಲಿ ತೋಟ ನಿರ್ಮಿಸಲು ಯೋಜನೆ ರೂಪಿಸಲಾಗಿದೆ.

ವಿಶ್ವ ಪರಿಸರ ದಿನಾಚರಣೆ ವೇಳೆ ಮುರುಘಾ ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಇದನ್ನೂ ಓದಿ: ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ | 5 ಅಂತರ್ಜಾತಿ ಸೇರಿ 26 ಜೋಡಿಗಳು ದಾಂಪತ್ಯಕ್ಕೆ ಪದಾರ್ಪಣೆ

ಸೀಬಾರ ಸಣ್ಣ ಗುರುಪಾದ ಸ್ವಾಮಿಗಳು ನೆಲೆಸಿರುವ ಸ್ಥಳ. ಈ ಸ್ಥಳದಲ್ಲಿ 25 ಎಕರೆ ಭೂಮಿ ಇದೆ. ಇಲ್ಲಿ 5 ಬೋರ್‌ವೆಲ್ ಕೊರೆಸಲಾಗಿದ್ದು, ಎಲ್ಲ ಕೊಳವೆ ಬಾವಿಗಳಲ್ಲೂ 4 ಇಂಚು ನೀರು ಸಿಕ್ಕಿದೆ.

ಮುಂದಿನ ದಿನಗಳಲ್ಲಿ ಚಿತ್ರದುರ್ಗ ಸುತ್ತಾಮುತ್ತಾ ಮುರುಘಾ ಮಠದಿಂದ 200 ಎಕರೆಯಷ್ಟು ವಿಸ್ತೀರ್ಣದ ತೋಟ ಮಾಡುವ ಚಿಂತನೆ ಇದೆ ಎಂದು ಶ್ರೀಗಳು ಹೇಳಿದ್ದಾರೆ.

ಇದನ್ನೂ ಓದಿ: ಭೀಮಸಮುದ್ರ ಸೇರಿ ವಿವಿಧ ಅಡಿಕೆ ಮಾರುಕಟ್ಟೆಗಳ ಧಾರಣೆ

ಅಡಿಕೆ, ತೆಂಗಿನ ತೋಟ ನಿರ್ಮಾಣಕ್ಕೆ ಆಸಕ್ತಿ ತೋರಿದ್ದು, ಇಂದಿನಿಂದ ಸಸಿ ನೆಡುವ ಕಾರ್ಯ ಪ್ರಾರಂಭವಾಗಲಿದೆ.

ಮುರುಘಾ ಮಠ ಹಾಗೂ ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ ಮಾತನಾಡಿ, ಬರಡು ಭೂಮಿಯನ್ನು ಉತ್ತಮ ತೋಟ ಮಾಡಲು ಕ್ರಮ ವಹಿಸಲಾಗಿದೆ. ಪರಿಸರ ನಾಶವಾಗದಂತೆ ಹಸಿರು ಹಸಿರಾಗೇ ಉಳಿಯುವಂತೆ ಸರ್ಕಾರಗಳು ಅನೇಕ ಯೋಜನೆ ಮಾಡಿದೆ. ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಇದನ್ನೂ ಓದಿ: ವಿದ್ಯಾರ್ಥಿ ಬಸ್ ಪಾಸ್ ವಿತರಣೆ | ಎಲ್ಲೆಲ್ಲಿ ಅರ್ಜಿ ಸಲ್ಲಿಸಬಹುದು, ಇಲ್ಲಿದೆ ಮಾಹಿತಿ…

ಶ್ರೀ ಬಸವ ಮಾದಾರ ಚೆನ್ನಯ್ಯ ಸ್ವಾಮಿಗಳು ಮಾತನಾಡಿದರು. ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ಶ್ರೀ ಬಸವಚೇತನ ಸ್ವಾಮಿಗಳು, ಶ್ರೀ ಬಸವ ನಾಗಿದೇವ ಸ್ವಾಮಿಗಳು, ಶ್ರೀಮಠದ ಆಡಳಿತ ಮಂಡಳಿ ಸದಸ್ಯ ಎಸ್.ಎನ್. ಚಂದ್ರಶೇಖರ್, ಕೃಷ್ಣಮೂರ್ತಿ, ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಸಿಇಓ ಎಂ.ಸಿ. ರಘುಚಂದನ್, ಉಪಅರಣ್ಯ ಸಂರಕ್ಷಣಾಧಿಕಾರಿ ಹರೀಶ್ ಕೆ., ವಲಯ ಅರಣ್ಯಾಧಿಕಾರಿ ಉಷಾರಾಣಿ, ಮಹಂತೇಶ್ ಎಸ್., ಕಾರ್ತಿಕ್, ರಾಘವೇಂದ್ರ, ವಕೀಲರಾದ ಫಾತ್ಯರಾಜನ್, ಎಸ್.ವಿ. ನಾಗರಾಜಪ್ಪ ಸಿದ್ದಾಪುರ, ಕೆಇಬಿ ಷಣ್ಮುಖಪ್ಪ, ಗುತ್ತಿನಾಡು ಪ್ರಕಾಶ್ ಮೊದಲಾದವರಿದ್ದರು.

ಇದನ್ನೂ ಓದಿ: ಸಾಹಿತ್ಯ ಕೃತಿಗಳಿಗೆ ಬಹುಮಾನ | ಅರ್ಜಿ ಅಹ್ವಾನ

ಉಮೇಶ್ ಪತ್ತಾರ್ ಪ್ರಾರ್ಥಿಸಿದರು. ಶಿಕ್ಷಕಿ ಅನಿತಾ ನಿರೂಪಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Adike TotaChitradurga newsDr. Basavakumar SwamijiEnvironment DayKannada NewsMuruga MuttSeebaraShivayogi C. Kalasadaಅಡಿಕೆ ತೋಟಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಡಾ.ಬಸವಕುಮಾರ ಸ್ವಾಮೀಜಿಪರಿಸರ ದಿನಾಚರಣೆಮುರುಘಾ ಮಠಶಿವಯೋಗಿ ಸಿ.ಕಳಸದಸೀಬಾರ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ಆರ್ಥಿಕ ಲಾಭ, ದೂರದ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಜಾಗೃತಿ ವಹಿಸಿ
Next Article ಅಶ್ವಗಂಧ ಮತ್ತು ಅಮೃತಬಳ್ಳಿಯನ್ನು ಒಟ್ಟಿಗೆ ತೆಗೆದುಕೊಂಡರೆ ಏನಾಗುತ್ತದೆ ಗೊತ್ತಾ?
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | ಜೂನ್‌ 16 | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
ಅಡಕೆ ಧಾರಣೆ
UPSC ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಪಾಪೇಶ್ ಅವಿರೋಧ ಆಯ್ಕೆ
ಮುಖ್ಯ ಸುದ್ದಿ
ಖಾಸಗಿ ಕಂಪನಿಗಳಲ್ಲಿ ಉದ್ಯೋಗ | ಜೂ.19 ರಂದು ನೇರ ನೇಮಕಾತಿ ಸಂದರ್ಶನ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up