By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: T. Raghumurthy: ಶಾಲಾ ಕಾಲೇಜುಗಳ ಅಭಿವೃದ್ಧಿಗೆ 35 ಕೋಟಿ | 150 ಕ್ಕೂ ಹೆಚ್ಚು ನೂತನ ಕೊಠಡಿ ನಿರ್ಮಾಣ | ಶಾಸಕ ಟಿ.ರಘುಮೂರ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » T. Raghumurthy: ಶಾಲಾ ಕಾಲೇಜುಗಳ ಅಭಿವೃದ್ಧಿಗೆ 35 ಕೋಟಿ | 150 ಕ್ಕೂ ಹೆಚ್ಚು ನೂತನ ಕೊಠಡಿ ನಿರ್ಮಾಣ | ಶಾಸಕ ಟಿ.ರಘುಮೂರ್ತಿ

ಮುಖ್ಯ ಸುದ್ದಿ

T. Raghumurthy: ಶಾಲಾ ಕಾಲೇಜುಗಳ ಅಭಿವೃದ್ಧಿಗೆ 35 ಕೋಟಿ | 150 ಕ್ಕೂ ಹೆಚ್ಚು ನೂತನ ಕೊಠಡಿ ನಿರ್ಮಾಣ | ಶಾಸಕ ಟಿ.ರಘುಮೂರ್ತಿ

News Desk Chitradurga News
Last updated: 1 December 2024 18:46
News Desk Chitradurga News
7 months ago
Share
ಶಾಲಾ ಕೊಠಡಿಗಳ ಉದ್ಘಾಟನೆ
ಶಾಲಾ ಕೊಠಡಿಗಳ ಉದ್ಘಾಟನೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 01 DECEMBER 2024

ಚಿತ್ರದುರ್ಗ: ನನ್ನ ಕ್ಷೇತ್ರದಲ್ಲಿ ಶಾಲಾ ಕಾಲೇಜುಗಳ ಅಭಿವೃದ್ಧಿಗೆ ಸುಮಾರು 35 ಕೋಟಿಗೂ ಹೆಚ್ಚಿನ ಅನುದಾನದ ನೀಡಿದ್ದು, 150 ಕ್ಕೂ ಹೆಚ್ಚು ನೂತನ ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು  ಸಣ್ಣ ಕೈಗಾರಿಕೆ ನಿಗಮದ ಅಧ್ಯಕ್ಷ ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ(T. Raghumurthy) ಹೇಳಿದರು.

ಕ್ಲಿಕ್ ಮಾಡಿ ಓದಿ: ಮಂಜುನಾಥ್ ಕೊಲೆ ಆರೋಪಿಗಳ ಬಂಧನ | ಭರಮಸಾಗರ ಪೊಲೀಸರ ಕಾರ್ಯಾಚರಣೆ

ಚಿತ್ರದುರ್ಗ ತಾಲೂಕಿನ ತುರುವನೂರು ಹೋಬಳಿಯಲ್ಲಿ ಮುದ್ದಾಪುರ ಗ್ರಾಮದಲ್ಲಿ ಆರ್.ಐ.ಡಿ.ಎಫ್. ನಬಾರ್ಡ್ ಯೋಜನೆಯಡಿ ಮುದ್ದಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿದ್ದ 6 ಶಾಲಾ ಕೊಠಡಿಗಳ ಉದ್ಘಾಟನೆ ಮತ್ತು ವಿವಿಧ ಕಾರ್ಯಕ್ರಮಗಳ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಶಾಸಕರ ಅನುದಾನ, ಡಿಎಂಎಫ್, ನಬರ್ಡ್, ಸಿಎಂ ವಿಶೇಷ ಅನುದಾನ, ರಾಜ್ಯ ವಲಯ ಸೇರಿ ಸುಮಾರು 35 ಕೋಟಿ ವೆಚ್ಚದಲ್ಲಿ ಅತ್ಯಗತ್ಯವಾಗಿರುವ ಕಡೆ ನೂತನ ಕಟ್ಟಡಗಳನ್ನು ಇಡೀ ಚಳ್ಳಕೆರೆ ಕ್ಷೇತ್ರದಲ್ಲಿ ನಿರ್ಮಾಣವನ್ನು ಮಾಡಲಾಗುತ್ತಿದೆ.

ನನಗೆ ಬರುವಂತಹ ಶಾಸಕರ ಅನುದಾನದಲ್ಲಿ ಮೊದಲ ಆದ್ಯತೆ ಶಾಲೆಗಳ ಮಾಲಭೂತ ಸೌಲಭ್ಯಕ್ಕೆ ನೀಡುತ್ತಿದ್ದೇನೆ. ಚಳ್ಳಕೆರೆ ನಗರದಲ್ಲಿ ಬಿಎಂಹೆಚ್ ಎಸ್ 6 ಕೊಠಡಿ, ಮತ್ತು ಹೆಗ್ಗೆರೆ ತಾಯಮ್ಮ ಶಾಲೆ 6 ಕೊಠಡಿ, ಕ್ಷೇತ್ರ ಮಾದರಿ ಬಾಲಕರ ಶಾಲೆ 6 ಕೊಠಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 6 ಕೊಠಡಿ ಸೇರಿ 24 ನೂತನ ಕಟ್ಟಡಗಳನ್ನು ನಿರ್ಮಾಣ ಮಾಡಿ ಈಗಾಗಲೇ ಲೋಕಾರ್ಪಣೆ ಮಾಡಲಾಗಿದೆ ಎಂದರು.

ಕ್ಲಿಕ್ ಮಾಡಿ ಓದಿ: 11. ಬಂಡಿ ತಂದ ಬದಲಾವಣೆ

ತುರುವನೂರು ಹೋಬಳಿಯ ತುರುವನೂರು ಗ್ರಾಮದಲ್ಲಿ ಐದು ಕೋಟಿ ವೆಚ್ಚದಲ್ಲಿ ಪದವಿ ಕಾಲೇಜು ನಿರ್ಮಾಣ ಮಾಡಿದ್ದು ಉದ್ಘಾಟನೆ ಹಂತದಲ್ಲಿದೆ. ಚಿಕ್ಕಗೊಂಡನಹಳ್ಳಿ ಪ್ರಾಥಮಿಕ ಶಾಲೆಗೆ 6 ಕೊಠಡಿ, ಕೂನಬೇವು ಪ್ರಾಥಮಿಕ ಶಾಲೆಗೆ 4 ಕೊಠಡಿ, ತುರುವನೂರು ಪ್ರೌಢಶಾಲೆಗೆ 6 ಕೊಠಡಿ ನಿರ್ಮಾಣಕ್ಕೆ ಅನುದಾನ ನೀಡಿದ್ದು ಮುದ್ದಪುರದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 66 ಲಕ್ಷದ 6 ಕೊಠಡಿಗಳನ್ನು ಇಂದು ಉದ್ಘಾಟನೆ ಮಾಡಿದ್ದೇನೆ.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಅವಶ್ಯಕತೆ ಇದ್ದು, ಶಿಕ್ಷಣದಿಂದ ನಾವೆಲ್ಲರೂ ವಂಚಿತರಾಗಬಾರದು. ಶಿಕ್ಷಣಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಮಕ್ಕಳಿಗೆ ಉಚಿತ ಶಿಕ್ಷಣ, ಉಚಿತ ಸಮವಸ್ತ್ರ, ಕ್ಷೀರಭಾಗ್ಯ, ಮೊಟ್ಟೆ ಸೇರಿ ಹಲವು ಸೌಲಭ್ಯ ಒದಗಿಸಲಾಗಿದೆ. ಪೋಷಕರು ಕಡ್ಡಾಯವಾಗಿ ಮಕ್ಕಳನ್ನು ಶಾಲೆಗೆ ಕಳುಹಿಸುವ ಮೂಲಕ ಮಕ್ಕಳಿಗೆ ಶಿಕ್ಷಣವನ್ನು ಕೊಡಿಸಬೇಕು ಎಂದು ಮನವಿ ಮಾಡಿದರು.

ಶಿಕ್ಷಣದಿಂದಲೇ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ. ಒಂದು ಹೆಣ್ಣು ಮಗು ಶಾಲೆ ಕಲಿತರೆ, ಇಡೀ ಕುಟುಂಬವೆ ಶಾಲೆ ಕಲಿತಂತೆ. ಈ ಹಿನ್ನೆಲೆಯಲ್ಲಿ ಗಂಡು, ಹೆಣ್ಣು ತಾರತಮ್ಯ ಮಾಡದೇ ಎಲ್ಲಾರೂ ಅಭ್ಯಾಸ ಮಾಡಬೇಕು. ಕ್ಷೇತ್ರದಲ್ಲಿ ಅಂಗವಾಡಿ ಕೇಂದ್ರಗಳು, ಶಾಲಾ ಕಟ್ಟಡಗಳು, ಆಸ್ಪತ್ರೆಗಳು, ರಸ್ತೆ, ಬ್ರಿಡ್ಜ್ ಕಂ ಬ್ಯಾರೇಜ್‌ಗಳಂತಹ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿದ್ದು, ಬಡವರಿಗಾಗಿ ಅನೇಕ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: ಕೊಳಾಳು ಕೆಂಚಾವಧೂತರ ಕಾರ್ತಿಕ ಮಹೋತ್ಸವ | ಇಂದು ರಾತ್ರಿ 8 ರಿಂದ ಅಖಂಡ ಭಜನೆ

ಇದೇ ವೇಳೆ ತುರುವನೂರು ಹೋಬಳಿಯ ಸೂರನಹಳ್ಳಿಯಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನೆ ಹಾಗೂ ಸುಲ್ತಾನಿಪುರ ಕೆರೆ ಬಾಗಿನ ಅರ್ಪಣೆ ಮತ್ತು ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಚಳ್ಳಕೆರೆ ತಾಲೂಕು ಗ್ಯಾರೆಂಟಿ ಸಮಿತಿ ಅಧ್ಯಕ್ಷ ಬಾಬುರೆಡ್ಡಿ, ಕ್ಷೇತ್ರ ಶಿಕ್ಷಣಧಿಕಾರಿ ಎಸ್.ನಾಗಭೂಷಣ್, ಮುದ್ದಾಪುರ ಗ್ರಾ.ಪಂ ಅಧ್ಯಕ್ಷೆ ಮಂಗಳ ಸಿದ್ದೇಶ್, ಉಪಾಧ್ಯಕ್ಷ ಸುಧಾರಾಣಿ ನಾಗರಾಜ್, ಗ್ರಾಮ ಪಂಚಾಯತಿ ಸದಸ್ಯರಾದ ಓಬಳೇಶ್ ಶಾಂತಮ್ಮ, ನಾಗರಾಜ್ ಸುದಮ್ಮ, ಮುಖಂಡರುಗಳಾದ ತಿಮ್ಮರಾಜು, ಮಹೇಶ್, ನಾಗರಾಜ್ ಮತ್ತು ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChallakereChitradurgaChitradurga newsChitradurga UpdatesDevelopmentfeaturedKannada Latest NewsKannada NewsMLA T. RaghumurthySchool CollegeSmall Industries CorporationTurvanurಅಭಿವೃದ್ಧಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ನ್ಯೂಸ್ತುರುವನೂರುಫೀಚರ್ಡ್ಶಾಲಾ ಕಾಲೇಜುಶಾಸಕ ಟಿ.ರಘುಮೂರ್ತಿಸಣ್ಣ ಕೈಗಾರಿಕೆ ನಿಗಮ
Share This Article
Facebook Email Print
Previous Article jobs in chitradurga news BTV ಬಜಾಜ್ ನಲ್ಲಿ ಉದ್ಯೋಗಾವಕಾಶ
Next Article ಸಮಾರೋಪ ಸಮಾರಂಭ ಕಾರ್ಯಕ್ರಮ Computer knowledge: ಆಧುನಿಕ ಜಗತ್ತಿನಲ್ಲಿ ಕಂಪ್ಯೂಟರ್ ಜ್ಞಾನ ಅವಶ್ಯಕ | ಸಿ.ಎಸ್.ಗಾಯತ್ರಿ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up