By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Sri Raghavendra Swamy; ಚಿತ್ರದುರ್ಗದಲ್ಲಿ 3 ದಿನ ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಪಂಚರಾತ್ರೋತ್ಸವ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Sri Raghavendra Swamy; ಚಿತ್ರದುರ್ಗದಲ್ಲಿ 3 ದಿನ ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಪಂಚರಾತ್ರೋತ್ಸವ 

ಮುಖ್ಯ ಸುದ್ದಿ

Sri Raghavendra Swamy; ಚಿತ್ರದುರ್ಗದಲ್ಲಿ 3 ದಿನ ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಪಂಚರಾತ್ರೋತ್ಸವ 

News Desk Chitradurga News
Last updated: 20 August 2024 07:53
News Desk Chitradurga News
10 months ago
Share
ಚಿತ್ರದುರ್ಗ ನಗರದ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ
ಚಿತ್ರದುರ್ಗ ನಗರದ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 20 AUGUST 2024

ಚಿತ್ರದುರ್ಗ: ಶ್ರೀ ಗುರುಸಾರ್ವಭೌಮರು ಮಂತ್ರಾಲಯ ಮಹಾಕ್ಷೇತ್ರದಲ್ಲಿ ಸಶರೀರರಾಗಿ ಬೃಂದಾವನ ಪ್ರವೇಶ ಮಾಡಿದ ಸ್ಮರಣಾರ್ಥವಾಗಿ ಆಚರಿಸುವ 353ನೇ ಆರಾಧನಾ ಪಂಚರಾತ್ರೋತ್ಸವ ಆ. 20ರಿಂದ 22 ರವರೆಗೆ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಚಿತ್ರದುರ್ಗ ನಗರದ ಶ್ರೀ ರಾಘವೇಂದ್ರ ಸ್ವಾಮಿ(Sri Raghavendra Swamy)ಗಳವರ ಮಠದಲ್ಲಿ ನಡೆಸಲು ಸಂಕಲ್ಪಿಸಲಾಗಿದೆ.

ಕ್ಲಿಕ್ ಮಾಡಿ ಓದಿ: Govt Recruitment: ಸರ್ಕಾರಿ ಕೆಲಸಕ್ಕೆ ನೇಮಕಾತಿ ಪ್ರಾರಂಭ | ಅರ್ಜಿ ಸಲ್ಲಿಕೆಗೆ ಕೌಂಟ್‌ಡೌನ್‌

ಇದರ ಅಂಗವಾಗಿ ಸೋಮವಾರ ಸಂಜೆ ಧ್ವಜಾರೋಹಣ, ಗೋಪೂಜೆ, ಧನ-ಧಾನ್ಯ ಪೂಜೆ, ಲಕ್ಷ್ಮೀ ಪೂಜೆ, ಸ್ವಸ್ತಿ ವಾಚನ, ಮಹಾಮಂಗಳಾರತಿ ಕಾರ್ಯಕ್ರಮವನ್ನು ನಡೆಸಲಾಯಿತು.

353ನೇ ಆರಾಧನಾ ಮಹೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಋಗ್ವದ, ಯಜುರ್ವೇದ, ನಿತ್ಯ, ನೂತನ ಉಪಾಕರ್ಮ ಕಾರ್ಯಕ್ರಮ ನಡೆಸಲಾಯಿತು.

ಇದರಲ್ಲಿ ಮೂರು ದಿನಗಳ ನಡೆಯುವ ರಾಯರ ಆರಾಧನೆಗೆ ಅಗತ್ಯವಾಗಿ ಬೇಕಾದ ವಿವಿಧ ರೀತಿಯ ಧಾನ್ಯಗಳಾದ ಅಕ್ಕಿ,ಬೇಳೆ,ಬೆಲ್ಲ,ಎಣ್ಣೆ, ತರಕಾರಿಗಳು ಸೊಪ್ಪು, ರಾಯರಿಗೆ ಉಡಿಸುವ ಪಂಚೆ, ಬಾಳೆಹಣ್ಣು, ಸೇಬು, ತೆಂಗಿನ ಕಾಯಿ, ಎಳೆ ನೀರು, ಸೇಬು, ದಾಳಿಂಬೆ ಮೋಸುಂಬೆ, ಕಲ್ಲಂಗಡಿ, ಹುಣಸೇಹಣ್ಣು, ದೀಪದ ಬತ್ತಿಗಳನ್ನು ಪೂಜೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬ್ರಾಹ್ಮಣ ಸಂಘ(ರಿ)ದ ಅಧ್ಯಕ್ಷ ಪಿ.ಎಸ್.ಮಂಜುನಾಥ್, ಕಾರ್ಯದರ್ಶಿ ದೀಪಾನಂದ ಉಪಾಧ್ಯ ಮತ್ತು ಸಹೋದರರು ಶ್ರೀಗುರುರಾಯಸೇವಾ ಸಂಘದ ಅಧ್ಯಕ್ಷ ವೇದವ್ಯಾಸಾಚಾರ್, ಶ್ರೀ ಹರಿವಾಯು ಗುರು ಸೇವಾ ಟ್ರಸ್ಟ್‍ನ ಅಧ್ಯಕ್ಷ ಟಿ.ಕೆ. ನಾಗರಾಜ್‍ರಾವ್ ಭಾಗವಹಿಸಿದ್ದರು.

ಕ್ಲಿಕ್ ಮಾಡಿ ಓದಿ: Direct Recruitment: ತೆರೆದಿದೆ ಉದ್ಯೋಗದ ಬಾಗಿಲು | ನೇರ ನೇಮಕಾತಿ ಸಂದರ್ಶನ

ಆ.20ರ ಮಂಗಳವಾರ ಶ್ರೀ ಗುರುಸಾರ್ವಭೌಮರ ಪೂರ್ವಾರಾಧನೆ, ಆ. 21ನೇ ಬುಧವಾರ ಶ್ರೀ ಗುರುಸಾರ್ವ ಭೌಮರ ಮಧ್ಯಾರಾಧನೆ, ಆ. 22ನೇ ಗುರುವಾರ ಶ್ರೀ ಗುರುಸಾರ್ವಭೌಮರ ಉತ್ತರಾರಾಧನೆ ಪ್ರಾತ: 10 ಗಂಟೆಗೆ ಶ್ರೀ ಗುರುಸಾರ್ವಭೌಮರ ಉತ್ತರಾರಾಧನೆ ಪ್ರಯುಕ್ತ ಮಹಾರಥೋತ್ಸವವು ಚಿತ್ರದುರ್ಗದ ರಾಜಬೀದಿ ಗಳಲ್ಲಿ ವಿವಿಧ ಭಜನಾಮಂಡಳಿಗಳು ಹಾಗೂ ಶ್ರೀ ಗುರುಸಾರ್ವಭೌಮರ ಭಕ್ತರೊಂದಿಗೆ ಜರುಗುವುದು.

ಆ.23 ನೇ ಶುಕ್ರವಾರ ಶ್ರೀ ಸುಜ್ಞಾನೇಂದ್ರತೀರ್ಥರ ಆರಾಧನೆ, ಪವಮಾನ ಹೋಮ, ಸರ್ವಸಮರ್ಪಣೋತ್ಸವ ಕಾರ್ಯಕ್ರಮ ನಡೆಯಲಿದೆ.

ಆರಾಧನಾ ದಿನತ್ರಯಗಳಲ್ಲಿ ಬೆಳಿಗ್ಗೆ 05.30ಕ್ಕೆ ಬೆಳಿಗ್ಗೆ 07.30ಕ್ಕೆ ನಿರ್ಮಾಲ್ಯ ಅಷ್ಟೋತ್ತರ ಸಹಿತ ಫಲಪಂಚಾಮೃತ ಅಭಿಷೇಕ, ಬೆಳಿಗ್ಗೆ 09.30ಕ್ಕೆ ಉತ್ಸವರಾಯರ ಪಾದಪೂಜೆ, ಕನಕಾಭಿಷೇಕ, ಬೆಳಿಗ್ಗೆ 12.00ಕ್ಕೆ, ನೈವೇದ್ಯ, ಅಲಂಕಾರ ಪಂಕ್ತಿ, ಹಸ್ತೋದಕ, ಮಹಾಮಂಗಳಾರತಿ, ತೀರ್ಥಪ್ರಸಾದ ಬೆಳಿಗ್ಗೆ 11.00 ರಿಂದ ಭಜನಾ ಕಾರ್ಯಕ್ರಮ, ಸಂಜೆ 05.30 ರಿಂದ 07.30ವರೆಗೆ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ 07.30 ರಿಂದ 09.00ವರೆಗೆ ರಜತ ರಥೋತ್ಸವ, ಸ್ವಸ್ತಿವಾಚನ, ಅಷ್ಟಾವಧಾನ, ಮಹಾ ಅನ್ನಸಂತರ್ಪಣೆ (ರಾಯರ ಮಹಾಪ್ರಸಾದ) ವಿತರಿಸಲಾಗುವುದು.

ಕ್ಲಿಕ್ ಮಾಡಿ ಓದಿ: CONGRESS: ಶಾಸಕರು, ಸಚಿವರು ಬೀದಿಗಿಳಿದು ಪ್ರತಿಭಟಿಸುವುದು ಎಷ್ಟು ಸರಿ ?

ಸಾಂಸ್ಕೃತಿಕ ಕಾರ್ಯಕ್ರಮ ಆ.20 ರಂದು ಬೆಳಿಗ್ಗೆ 11.00 ರಿಂದ ಭಜನೆ – ಶ್ರೀ ಪಾಂಡುರಂಗ ಭಜನಾ ಮಂಡಳಿ ಸಂಜೆ 5.30 ರಿಂದ 7.30 ರವರೆಗೆ ಭರತನಾಟ್ಯ ಕಾರ್ಯಕ್ರಮ, ನಾಟ್ಯಶ್ರೀ ಭರತನಾಟ್ಯ ಶಾಲೆ, ಬೆಂಗಳೂರು ಇವರಿಂದ ಆ. 21 ನೇ ಬುಧವಾರ ಬೆಳಿಗ್ಗೆ 11.00 ರಿಂದ ಭಜನೆ, ಶ್ರೀ ಸಪ್ತಗಿರಿ ಭಜನಾ ಮಂಡಳಿಯವರಿಂದ ಸಾಯಂಕಾಲ 5.30 ರಿಂದ 7.30 ರವರೆಗೆ ದಾಸವಾಣಿ ಕಾರ್ಯಕ್ರಮ (ಹಿಂದುಸ್ತಾನಿ), ಶ್ರೀ ಸುಜೀತ್ ಕುಲಕರ್ಣಿ ಇವರಿಂದ ಆ. 22 ನೇ ಗುರುವಾರ ಸಂಜೆ 5.30 ರಿಂದ ಶ್ರೀ ರಾಘವೇಂದ್ರ ಸ್ವಾಮಿಗಳವರ ಸ್ಮರಣೆ ರೂಪಕ, ಚಿತ್ರದುರ್ಗದ ಶ್ರೀ ಗುರುರಾಜರ ಭಕ್ತರಿಂದ ಆ.23 ನೇ ಶುಕ್ರವಾರ ಬೆಳಿಗ್ಗೆ 11.00 ರಿಂದ ಭಜನೆ, ಶ್ರೀ ಬ್ರಹ್ಮಚೈತನ್ಯ ಮಹಿಳಾ ಭಜನಾ ಮಂಡಳಿಯವರಿಂದ ಸಂಜೆ 5.30 ರಿಂದ 7.30ರವರೆಗೆ ಚಂಪಕ, ಶ್ರೀಧರ್ ಮತ್ತು ಶಿಷ್ಯವೃಂದದವರಿಂದ ಕರ್ನಾಟಕ ಸಂಗೀತ ಕಾರ್ಯಕ್ರಮ ನಡೆಯಲಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:353rd Aradhana353ನೇ ಆರಾಧನಾChitradurgaChitradurga newsKannada Latest NewsPancharatrotsavaShri Raghavendra Swamyಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಪಂಚರಾತ್ರೋತ್ಸವಶ್ರೀ ರಾಘವೇಂದ್ರ ಸ್ವಾಮಿ
Share This Article
Facebook Email Print
Previous Article PADIGATE CHECK DAM; ಪಾಡಿಗಟ್ಟೆ ಗ್ರಾಮದ ನೂತನ ಚೆಕ್‍ ಡ್ಯಾಂಗೆ ಶಾಸಕ ಎಂ. ಚಂದ್ರಪ್ಪ ಭೂಮಿ ಪೂಜೆ 
Next Article ಚಳ್ಳಕೆರೆ ನಗರದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಗ್ಯಾರಂಟಿ ಸಮಿತಿ ಸದಸ್ಯರನ್ನು ಶಾಸಕ ಟಿ.ರಘುಮೂರ್ತಿ ಸನ್ಮಾನಿಸಿದರು T.Raghumurthy; ತಾಲೂಕು ಮಟ್ಟದಲ್ಲಿ ಗ್ಯಾರೆಂಟಿ ಅನುಷ್ಠಾನ ಯೋಜನಾ ಸಮಿತಿ | ಟಿ.ರಘುಮೂರ್ತಿ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up