By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಸಾಣೇಹಳ್ಳಿ ಶಿವಕುಮಾರ ವನದಲ್ಲಿ ಪೇರಲ, ಸಂಪಿಗೆ ಘಮ | ವಿದ್ಯಾರ್ಥಿಗಳ ಶ್ರಮದಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಸಾಣೇಹಳ್ಳಿ ಶಿವಕುಮಾರ ವನದಲ್ಲಿ ಪೇರಲ, ಸಂಪಿಗೆ ಘಮ | ವಿದ್ಯಾರ್ಥಿಗಳ ಶ್ರಮದಾನ

ಮುಖ್ಯ ಸುದ್ದಿ

ಸಾಣೇಹಳ್ಳಿ ಶಿವಕುಮಾರ ವನದಲ್ಲಿ ಪೇರಲ, ಸಂಪಿಗೆ ಘಮ | ವಿದ್ಯಾರ್ಥಿಗಳ ಶ್ರಮದಾನ

News Desk Chitradurga News
Last updated: 6 June 2024 07:18
News Desk Chitradurga News
1 year ago
Share
shivakumara vana
ಕಣ್ಮನ ಸೆಳೆಯುತ್ತಿರುವ ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶಿವಕುಮಾರ ವನ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 06 JUNE 2024
ಚಿತ್ರದುರ್ಗ:‌ ಆಂತರಿಕ ಪರಿಸರದಲ್ಲಿ ಒಳ್ಳೆಯ ಆಲೋಚನೆಗಳಿದ್ದರೆ ಬಾಹ್ಯ ಪರಿಸರ ಸ್ವಚ್ಛಗೊಳ್ಳಲು ಸಾಧ್ಯ. ಆಂತರಿಕ ಪರಿಸರದ ಶುದ್ಧಿಯೇ ಬಾಹ್ಯ ಪರಿಸರದ ಶುದ್ಧಿಗೆ ಸಹಕಾರಿಯಾಗುತ್ತದೆ. ಮನುಷ್ಯ ಮೊದಲು ಕೊಳಕು ಜೀವನ ಕಳೆದುಕೊಳ್ಳಬೇಕು ಎಂದು ಸಾಣೇಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶಿವಕುಮಾರ ವನದಲ್ಲಿ ಗಿಡ ನೆಟ್ಟು ವಿಶ್ವ ಪರಿಸರ ದಿನಾಚರಣೆ ಆಚರಿಸಿ ಮಾತನಾಡಿದ ಅವರು, ನಮ್ಮ ಆಲೋಚನೆ, ಭಾವನೆ, ನಮ್ಮ ಬದುಕಿನ ವಿಧಾನ ಚೆನ್ನಾಗಿದ್ದರೆ ಬಾಹ್ಯ ಪರಿಸರ ಚೆನ್ನಾಗಿರುತ್ತದೆ. ನಮ್ಮ ಆಂತರಿಕ ಮತ್ತು ಬಾಹ್ಯ ಪರಿಸರ ಚೆನ್ನಾಗಿದ್ದರೆ ಆರೋಗ್ಯ ಚೆನ್ನಾಗಿರುತ್ತದೆ. ಆರೋಗ್ಯ ಚೆನ್ನಾಗಿದ್ದರೆ ಆಯಸ್ಸು ಹೆಚ್ಚಾಗುತ್ತದೆ. ಆಯಸ್ಸು ಹೆಚ್ಚಾದರೆ ಆಗ ಉತ್ತಮ ಕೆಲಸ ಕಾರ್ಯಗಳನ್ನು ಮಾಡಲು ಸ್ಪೂರ್ತಿ ದೊರೆಯುತ್ತದೆ ಎಂದರು.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗಕ್ಕೆ ಮುಂಗಾರು ಮಳೆ ಸಂಭ್ರಮ | ತುಂಬಿ ಹರಿದ ಹಳ್ಳಕೊಳ್ಳ

ವಿದ್ಯಾರ್ಥಿಗಳು ಪ್ಯಾಕೇಟ್‍ಗಳಲ್ಲಿ ದೊರೆಯುವ ಪದಾರ್ಥಗಳನ್ನು ತಿನ್ನುವುದನ್ನು ಕಡಿಮೆ ಮಾಡಿದರೆ ಆರೋಗ್ಯ ಹಾಗೂ ಪರಿಸರ ಎರಡೂ ಕಾಪಾಡಿಕೊಂಡಂತೆ. ಮಕ್ಕಳ ಸ್ವಭಾವ ಪ್ಯಾಕೇಟ್‌ ಆಕರ್ಷಣೆಗೆ ಒಳಗಾಗಿ ಅದರಲ್ಲಿರುವ ಪದಾರ್ಥಗಳನ್ನು ತಿನ್ನುವುದನ್ನು ಅಭ್ಯಾಸ ಮಾಡಿಕೊಂಡು ಆರೋಗ್ಯ ಕೆಡಿಸಿಕೊಳ್ಳುತ್ತಿದ್ದಾರೆ. ಆದ್ದರಿಂದ ಇನ್ನು ಮುಂದೆ ಪ್ಯಾಕೇಟ್‍ನಲ್ಲಿರುವ ಆಹಾರ ಪದಾರ್ಥಗಳನ್ನು ಸಂಪೂರ್ಣವಾಗಿ ನಿಷೇಧ ಮಾಡುವ ಸಂಕಲ್ಪ ಮಾಡಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕ್ಲಿಕ್ ಮಾಡಿ ಓದಿ: ಚನ್ನಗಿರಿಯಲ್ಲಿ ರಾಶಿ ಅಡಿಕೆ ಬೆಲೆ ಮತ್ತಷ್ಟು ಹೆಚ್ಚಳ

shiva kumara vana
ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶಿವಕುಮಾರ ವನದಲ್ಲಿ ಗಿಡ ನೆಟ್ಟು ಪರಿಸರ ದಿನ ಆಚರಣೆ

ನಮ್ಮ ಪರಿಸರ ಒಂದು ದಿನಕ್ಕೆ ಸ್ವಚ್ಛಗೊಳ್ಳುವಂಥದ್ದಲ್ಲ. ಅದು ವರ್ಷದುದ್ದಕ್ಕೂ ಮಾಡಬೇಕಾದ ಕಾರ್ಯ. ಪ್ರತಿಕ್ಷಣವೂ ಪರಿಸರದ ಪ್ರಜ್ಞೆ ನಮಗಿದ್ದರೆ ಶುಚಿತ್ವವನ್ನು ಕಾಪಾಡಿಕೊಳ್ಳಲಿಕ್ಕೆ ಸಾಧ್ಯ. ಮಳೆ, ಬೆಳೆ ಚೆನ್ನಾಗಿ ಆಗಬೇಕೆಂದರೆ ಪ್ರತಿಯೊಬ್ಬರೂ ವರ್ಷಕ್ಕೆ ಒಂದು ಗಿಡವನ್ನಾದರೂ ನೆಟ್ಟು ಬೆಳೆಸಲು ಮುಂದಾಗಬೇಕು ಎಂದರು.

ಸಾಣೇಹಳ್ಳಿಯ ಶಿವಕುಮಾರ ವನದಲ್ಲಿ ನಮ್ಮ ಸಮ್ಮುಖದಲ್ಲಿಯೇ ಕಳೆದ ನಾಲ್ಕಾರು ದಿನಗಳಿಂದ ಮಹಾಘನಿ, ಮಾವು, ತೇಗ, ನೇರಳೆ, ಹತ್ತಿ, ಪೇರಲ, ಸಂಪಿಗೆ, ಹಲಸು ವಿವಿಧ ಜಾತಿಯ ಸುಮಾರು 1,500 ಗಿಡಗಳನ್ನು ನಮ್ಮ ಶಾಲಾ ಮಕ್ಕಳು ಶ್ರಮದಾನದ ಮೂಲಕ ನೆಟ್ಟಿದ್ದಾರೆ.

ಕ್ಲಿಕ್ ಮಾಡಿ ಓದಿ: ಗಿಡಮೂಲಿಕೆ ಔಷಧಿ‌ ಸೇವಿಸುವಾಗ ಎಚ್ಚರ

ಕಳೆದ ವರ್ಷ ನೆಡಿಸಿದ್ದ ಸಾವಿರಾರು ಗಿಡ-ಮರಗಳಿಗೆ ಸೂಕ್ತ ಮಣ್ಣು, ನೀರು, ಗೊಬ್ಬರ ಮುಂತಾದ ಪೋಷಕಾಂಶಗಳನ್ನು ಒದಗಿಸಿದ್ದಾರೆ. ಈ ಎಲ್ಲ ಗಿಡಗಳು ನಳನಳಿಸುತ್ತಿದ್ದು ನಿರೀಕ್ಷೆಗೂ ಮೀರಿದ ಬೆಳವಣಿಗೆ ಹೊಂದಿ ನೋಡುಗರ ಕಣ್ಮನ ಸೆಳೆಯುತ್ತಿವೆ. ನಮ್ಮ ಶಾಲಾ ಮಕ್ಕಳು ಸ್ವಯಂಪ್ರೇರಿತರಾಗಿ ಕಳೆದ ಒಂದು ವಾರದಿಂದ ಸತತವಾಗಿ ಪರಿಶ್ರಮಪಟ್ಟಿರುವುದು ನಮಗೆ ಅತ್ಯಂತ ಖುಷಿ ತಂದಿದೆ ಎಂದರು.

ಇದೇ ವೇಳೆ ಶಿವಕುಮಾರ ವನದಲ್ಲಿ ಮಹಾಗನಿ, ಹಲಸು, ನೇರಲ, ಹೊಂಗೆ ಮುಂತಾದ 4,400 ಗಿಡಗಳನ್ನು ನೆಡಲಾಯಿತು. ಅಧ್ಯಾಪಕರಾದ ಶಿವಕುಮಾರ್, ವಿ.ಬಿ.ಚಳಗೆರೆ, ಬಿ.ಎಸ್‌.ಮಲ್ಲಿಕಾರ್ಜುನ, ಎಂ.ಸುಧಾ, ತೋರಣ, ಮುಖ್ಯೋಪಾಧ್ಯಾಯ ಬಸವರಾಜ್, ಶಿಲ್ಪ ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:EnvironmentPanditaradyasanehalliShivakumar VanaShramdanaಪಂಡಿತರಾದ್ಯಪರಿಸರಶಿವಕುಮಾರ ವನಶ್ರಮದಾನಸಾಣೇಹಳ್ಳಿ
Share This Article
Facebook Email Print
Previous Article arecanut price list ಚನ್ನಗಿರಿಯಲ್ಲಿ ರಾಶಿ ಅಡಿಕೆ ಬೆಲೆ ಮತ್ತಷ್ಟು ಹೆಚ್ಚಳ
Next Article ಹೆಚ್.ಡಿ.ಪುರದಲ್ಲಿ ಪರಿಸರ ದಿನಾಚರಣೆ ಹೆಚ್.ಡಿ.ಪುರದಲ್ಲಿ ಪರಿಸರ ದಿನಾಚರಣೆ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up