CHITRADURGA NEWS | 30 JULY 2024
ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯಕ್ಕೆ ಸತತ ಎರಡನೇ ದಿನವೂ ವೇದಾವತಿ ನದಿ ಮೂಲಕ ನೀರು ಹರಿದು ಬಂದಿದೆ.
ಜುಲೈ 30 ರಂದು ಬರೋಬ್ಬರಿ 4737 ಕ್ಯೂಸೆಕ್ ನೀರು ವಿವಿ ಸಾಗರ ಜಲಾಶಯ ಸೇರಿದೆ.

130 ಅಡಿ ಎತ್ತರದ ವಿವಿ ಸಾಗರ ಜಲಾಶಯದಲ್ಲಿ 30 ಟಿಎಂಸಿ ಅಡಿ ನೀರು ಸಂಗ್ರಹಿಸಿಡಬಹುದು. ಸದ್ಯ 4737 ಕ್ಯೂಸೆಕ್ ಒಳಹರಿವು ಬಂದಿದ್ದು, ಹೊರ ಹರಿವು ಇಲ್ಲ.
ಇದನ್ನೂ ಓದಿ: ವಿವಿ ಸಾಗರ ತಲುಪಿದ ನೀರು | ಮದಗದ, ಅಯ್ಯಣ್ಣನ ಕೆರೆ ಕೋಡಿ | ವೇದಾವತಿ ನದಿಗೆ ಜೀವಕಳೆ
ಇದರಲ್ಲಿ ಕುಡಿಯುವ ಉದ್ದೇಶಕ್ಕಾಗಿ 13 ಕ್ಯೂಸೆಕ್ ಬಳಕೆಯಾಗುತ್ತಿದೆ. 134 ಕ್ಯೂಸೆಕ್ ಆವಿಯಾ ಪ್ರಮಾಣವಿದೆ.
ಸದ್ಯ ಜಲಾಶಯದ ನೀರಿನ ಸಂಗ್ರಹ 123.25 ಅಡಿಯಷ್ಟಿದೆ. 24.75 ಟಿಎಂಸಿ ಅಡಿ ನೀರಿದೆ ಎಂದು ಮಂಗಳವಾರ ಬೆಳಗ್ಗೆ 8 ಗಂಟೆಗೆ ನಡೆಸಿದ ಪರೀಕ್ಷೆಯಲ್ಲಿ ಗೊತ್ತಾಗಿದೆ.
ಇದನ್ನೂ ಓದಿ: ಜಿಲ್ಲಾ ಆಸ್ಪತ್ರೆ ವೈದ್ಯ ಡಾ. ಸಾಲಿ ಮಂಜಪ್ಪ ಅಮಾನತು
ವೇದಾವತಿ ನದಿಗೆ ಜೀವಕಳೆ:
ಚಿಕ್ಕಮಗಳೂರು ಜಿಲ್ಲೆಯಲ್ಲಿ ವ್ಯಾಪಕ ಮಳೆ ಆಗುತ್ತಿರುವ ಪರಿಣಾಮ ಕಡೂರು ತಾಲೂಕಿನ ಸಖರಾಯಪಟ್ಟಣದ ಬಳಿಯಿರುವ ಮದಗದ ಕೆರೆ ಹಾಗೂ ಅಯ್ಯನಕೆರೆಗಳು ಕೋಡಿ ಬಿದ್ದು ನೀರು ಹರಿಯುತ್ತಿದ್ದು, ವೇದಾವತಿ ನದಿಗೆ ಜೀವಕಳೆ ಬಂದಿದೆ.

ವೇದಾವತಿ ನದಿ ಕೆಲ್ಲೋಡು ಬಳಿ ಮೈದುಂಬಿ ಹರಿಯುತ್ತಿರುವ ದೃಶ್ಯವನ್ನು ನೋಡಲು ಪ್ರವಾಸಿಗರು ಆಗಮಿಸುತ್ತಿದ್ದಾರೆ.
ಇದನ್ನೂ ಓದಿ: ಶೀಘ್ರ 8 ಕೆರೆಗಳಿಗೆ ಭದ್ರಾ ನೀರು | ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ
ವೇದಾವತಿ ಮೂಲಕ ಹರಿದು ಬರುತ್ತಿರುವ ನೀರು ವಾಣಿವಿಲಾಸ ಸಾಗರ ಜಲಾಶಯದ ಒಡಲು ಸೇರುತ್ತಿರುವುದರಿಂದ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ.
ಬಯಲು ಸೀಮೆ ಚಿತ್ರದುರ್ಗ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಇಲ್ಲದಿದ್ದರೂ, ಚಿಕ್ಕಮಗಳೂರು ಭಾಗದ ಮಳೆಯಿಂದಾಗಿ ವಿವಿ ಸಾಗರಕ್ಕೆ ನೀರು ಹರಿದು ಬರುತ್ತಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
