CHITRADURGA NEWS | 07 DECEMBER 2024
ಚಿತ್ರದುರ್ಗ: ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಡಿ ಅಡಿಕೆ ಸಾಗಿಸುತ್ತಿದ್ದ 8 ಲಾರಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಚಿತ್ರದುರ್ಗ ಕಡೆಯಿಂದ ಹೊಸಪೇಟೆ ರಸ್ತೆಯಲ್ಲಿ ಹೋಗುತ್ತಿದ್ದ ಲಾರಿಗಳನ್ನು ದೊಣೇಹಳ್ಳಿ ಬಳಿಯಿರುವ ಟೋಲ್ ಬಳಿ ವಿಜುಲೆನ್ಸ್ ಟೀಮ್ ಅಧಿಕಾರಿಗಳು ತಡೆದು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ವಿವಿ ಸಾಗರಕ್ಕೆ ಮತ್ತೆ ನೀರು | ಎಷ್ಟಾಯ್ತು ಜಲಾಶಯ ಮಟ್ಟ
8 ಲಾರಿಗಳನ್ನು ಚಿತ್ರದುರ್ಗ ನಗರದಲ್ಲಿರುವ ಪೊಲೀಸ್ ಪೆರೇಡ್ ಮೈದಾನಕ್ಕೆ ತಂದು ನಿಲ್ಲಿಸಲಾಗಿದೆ.
ಲಾರಿಗಳು ಹಾಗೂ ಅಡಿಕೆಯ ಕುರಿತಾದ ಎಲ್ಲ ದಾಖಲೆಗಳನ್ನು ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗಕ್ಕೆ ಗುಡ್ನ್ಯೂಸ್ಕೊಟ್ಟ ನರೇಂದ್ರ ಮೋದಿ | ದಶಕಗಳ ಕಾಯುವಿಕೆಗೆ ಸಿಕ್ಕ ಕೆವಿ
ದೆಹಲಿಗೆ ಅಕ್ರಮವಾಗಿ ಸಾಗಾಣೆ ಮಾಡುತ್ತಿರುವ ಅನುಮಾನವಿದ್ದು, ಸೂಕ್ತ ತನಿಖೆಯಿಂದ ಯಾರಿಗೆ ಸೇರಿದ ಮಾಲು ಎನ್ನುವುದು ಸೇರಿದಂತೆ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
