CHITRADURGA NEWS | 02 JANUARY 2025
ಚಿತ್ರದುರ್ಗ: ನಗರದ ಶ್ರೀ ಸದ್ಗುರು ಕಬೀರಾನಂದಾಶ್ರಮದಲ್ಲಿ 2025ರ ಫೆಬ್ರವರಿಯಲ್ಲಿ ನಡೆಯಲಿರುವ 95ನೇ ಶಿವನಾಮ ಸಪ್ತಾಹದ ಅಂಗವಾಗಿ ಜ.4 ರಂದು ಪೂರ್ವಬಾವಿ ಸಭೆ ಕರೆಯಲಾಗಿದೆ ಎಂದು ಶ್ರೀ ಗುರು ಕಬೀರಾನಂದಾಶ್ರಮದ ಕಾರ್ಯದರ್ಶಿ ವಿ.ಎಲ್ ಪ್ರಶಾಂತ್ ತಿಳಿಸಿದ್ದಾರೆ.
ಫೆ.20 ರಿಂದ 26ರವರೆಗೆ ಶ್ರೀ ಸದ್ಗುರು ಕಬೀರಾನಂದಾಶ್ರಮದಲ್ಲಿ 95ನೇ ಶಿವನಾಮ ಸಪ್ತಾಹ ಕಾರ್ಯಕ್ರಮ ನಡೆಯಲಿದೆ.
ಕ್ಲಿಕ್ ಮಾಡಿ ಓದಿ: ಮಕ್ಕಳ ಕಳ್ಳತನಕ್ಕೆ ಯತ್ನ | ಓಮಿನಿಯಲ್ಲಿ ಬಂದ ನಾಲ್ವರಿಂದ ಕೃತ್ಯ | ನಡು ದಾರಿಯಲ್ಲೇ ಮಕ್ಕಳನ್ನು ಬಿಟ್ಟು ಎಸ್ಕೇಪ್
ಇದರ ರೂಪು ರೇಷೇಗಳನ್ನು ಸಿದ್ದ ಪಡಿಸುವ ಹಿನ್ನಲೆಯಲ್ಲಿ ಶ್ರೀ ಸದ್ಗುರು ಕಬೀರಾನಂದಾಶ್ರಮದ ಪೀಠಾಧ್ಯಕ್ಷರಾದ ಶ್ರೀ ಶಿವಲಿಂಗಾನಂದ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಜ.4ರಂದು ಮಧ್ಯಾಹ್ನ 4.30ಕ್ಕೆ ಪೂರ್ವಭಾವಿ ಸಭೆ ಕರೆಯಲಾಗಿದೆ.
ಈ ಸಭೆಗೆ ಸರ್ವ ಭಕ್ತಾಧಿಗಳು ಆಗಮಿಸುವುದರ ಮೂಲಕ ಶಿವನಾಮ ಸಪ್ತಾಹ ಯಶಸ್ವಿಗೆ ಸಲಹೆ ಸಹಕಾರವನ್ನು ನೀಡುವಂತೆ ಪ್ರಶಾಂತ್ ಮನವಿ ಮಾಡಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

