ಚಿತ್ರದುರ್ಗ ನ್ಯೂಸ್.ಕಾಂ
ಚಿತ್ರದುರ್ಗ: ಇಂದಿಗೂ ಸಮಾನತೆಯ ಬದುಕು, ಆರ್ಥಿಕ ಸ್ವಾವಲಂಬನೆಗೆ ಹೋರಾಟ ಮಾಡುತ್ತಿದ್ದೇವೆ. ಧರ್ಮದ ಹೆಸರಿನಲ್ಲಿ ನಮ್ಮ ಶೋಷಣೆ ನಡೆದಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಹೇಳಿದರು.
ನಗರದ ತರಾಸು ರಂಗಮಂದಿರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ನಿಂದ ಆಯೋಜಿಸಿದ್ದ ಎಸ್ಸಿ, ಎಸ್ಟಿ ಶೈಕ್ಷಣಿಕ ಸಮಾವೇಶ ಹಾಗೂ ಅಂಬೇಡ್ಕರ್ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಸ್ಪøಶ್ಯ ಸಮುದಾಯ ಹೊರಗಿಟ್ಟು ದೇಶ ಕಟ್ಟಲು ಸಾಧ್ಯವಿಲ್ಲ ಎನ್ನುವುದು ಅನೇಕರಿಗೆ ತಡವಾಗಿ ಅರ್ಥವಾಗಿದೆ. ಈ ಕಾರಣಕ್ಕಾಗಿ ಅನೇಕರು ಈಗ ಅಂಬೇಡ್ಕರ್ ಧ್ಯಾನ ಮಾಡುತ್ತಿದ್ದಾರೆ ಎಂದರು.
ಒಂದು ದೇಶ, ಒಂದು ಚುನಾವಣೆ ಎಂಬ ನೀತಿ ಜಾರಿ ಮಾಡುವ ಪ್ರಯತ್ನ ನಡೆಯುತ್ತಿದೆ. ಇದು ಸಂವಿಧಾನ ವಿರೋಧಿ ನಡೆ. ಸಂವಿಧಾನ ವಿರೋಧಿ ಶಕ್ತಿಗಳು ಬಲಗೊಳ್ಳಲು ಬಿಡಬಾರದು. ಪ್ರಜಾಪ್ರಭುತ್ವ, ಸಂವಿಧಾನದ ಆಶಯ ಉಳಿಸಲು ಪ್ರತಿಯೊಬ್ಬರೂ ಪಣತೊಡಬೇಕು. ಈ ಹಿನ್ನೆಲೆಯಲ್ಲಿ ಗಟ್ಟಿ ಧ್ವನಿಯ ಹೋರಾಟ ಆಗಬೇಕು ಎಂದು ತಿಳಿಸಿದರು.
ಹಿಂದೆ ನಾವೆಲ್ಲಾ ಸಂಸ್ಕøತದಿಂದ ವಂಚಿತರಾಗಿದ್ದೆವು. ಶ್ರೇಣಿಕೃತ ಸಮಾಜ ನೋಡಿದಾಗ ಆಳವಾದ ಅಧ್ಯಯನ ಇಲ್ಲದೇ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ. ಬ್ರಿಟಿμï ಆಡಳಿತದಲ್ಲಿ ಎμÉ್ಟೀ ತೊಂದರೆಯಾದರೂ, ಶಿಕ್ಷಣದ ವಿಷಯದಲ್ಲಿ ಸಡಿಲತೆ ಸಿಕ್ಕಿದೆ. ಅವರು ಭಾರತಕ್ಕೆ ಬಾರದೇ ಇದ್ದರೆ ಶಿಕ್ಷಣ ಅಷ್ಟು ಸುಲಭವಾಗಿ ಎಲ್ಲರಿಗೂ ಸಿಗುತ್ತಿರಲಿಲ್ಲ. ಅಂಬೇಡ್ಕರ್ ವ್ಯಾಸಂಗ ಮಾಡದಿದ್ದರೆ ಎಂದು ಉತ್ಸವ ಮಾಡಲು ಸಾಧ್ಯವಿರಲಿಲ್ಲ ಎಂದರು.
ಶಾಲೆ ಕಾಲೇಜು ಆರಂಭವಾದಾಗ ಸಂವಿಧಾನದ ಪೀಠಿಕೆ ಓದಬೆಕು ಎನ್ನುವುದನ್ನು ಕಡ್ಡಾಯ ಮಾಡಲಾಗುತ್ತಿದೆ. ಅಂಬೇಡ್ಕರ್ ನೀಡಿದ ಸಂವಿಧಾನ ಎಲ್ಲರಿಗೂ ಸೇರಿದ್ದು. ಎಲ್ಲ ಧರ್ಮ ಸಮಾನತೆ ಹೇಳಿದೆ. ನ್ಯಾಯ ಮತ್ತು ಸಮಾನತೆ ಗೌರವಿಸುವ ಧರ್ಮವನ್ನು ಒಪ್ಪಬಹುದು. ಬೌದ್ಧ ಧರ್ಮವನ್ನು ಕೆಲವರು ವ್ಯವಸ್ಥಿತವಾಗಿ ನಾಶ ಮಾಡಿದರು. ಇಂದು ಅಂಬೇಡ್ಕರ್ ವಾದ ಉಳಿದರೆ ದೇಶ, ಶೂದ್ರರು ಉಳಿಯುತ್ತೇವೆ. ಇಲ್ಲದಿದ್ದರೆ ನಾಶ ಮಾಡುತ್ತಾರೆ. ಅಸ್ಪøಶ್ಯ ಸಮುದಾಯ ಒಗ್ಗೂಡದಿದ್ದರೆ ಭವಿಷ್ಯವಿಲ್ಲ ಎಂದು ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದರು.
ಮುಖಂಡರಾದ ಮಾವಳ್ಳಿ ಶಂಕರ್ ಮಾತನಾಡಿ, ಇಂದು ಶೋಷಿತರನ್ನು ಉನ್ನತ ಶಿಕ್ಷಣದ ಕಡೆಗೆ ಬಾರದಂತೆ ತಡೆಯುವ ಹುನ್ನಾರ ನಡೆಯುತ್ತಿದೆ. ಶಿಕ್ಷಣದಿಂದ ವಂಚಿತರಾದವರು ಈ ಬಗ್ಗೆ ಆಲೋಚನೆ ಮಾಡಬೇಕು. ಸನಾತನ ಧರ್ಮವೇ ವರ್ಣಾಶ್ರಮ ಪ್ರತಿಪಾದನೆ ಮಾಡುತ್ತಿದೆ. ನೂತನ ಶಿಕ್ಷಣ ನೀತಿಯಿಂದ ತೊಂದರೆ ಆಗುತ್ತಿದೆ ಎಂದರು.
ಇಂದು ದೇಶ ಸಂಕಟದಲ್ಲಿದೆ. ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಘೋಷಣೆಗೆ ಮಾತ್ರ ಸೀಮಿತವಾಗಿದೆ. 8ನೇ ತರಗತಿ ವರೆಗಿನ ವಿದ್ಯಾರ್ಥಿ ವೇತನ ಸ್ಥಗಿತ ಮಾಡಲಾಗಿದೆ. ಉನ್ನತ ಶಿಕ್ಷಣದಲ್ಲಿರುವ ಅವಕಾಶ ಕಡಿಮೆ ಆಗುತ್ತಿದೆ. ಈಗಿರುವ ಶಿಕ್ಷಣ ವ್ಯವಸ್ಥೆ ಹಾಳು ಮಾಡುವ ಹುನ್ನಾರ ನಡೆಯುತ್ತಿದೆ. ವೇಮುಲಾ ಆತ್ಮಹತ್ಯೆ ಪ್ರಕರಣ ಇದಕ್ಕೊಂದು ನಿದರ್ಶನ ಉದಾಹರಣೆ ಎಂದು ವಿವರಿಸಿದರು.
ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದೆ. ಇದು ಹಾಸ್ಟೆಲ್ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಸಿಬ್ಬಂದಿ ನಿಯೋಜನೆ ಮಾಡುವ ಮೂಲಕ ಸಮಸ್ಯೆಬಗೆಹರಿಸಿದರೆ ಅನುಕೂಲ ಎಂದು ಸಚಿವರಿಗೆ ಮನವಿ ಮಾಡಿದರು.
ಚಾಮರಾಜ ನಗರ ನಳಂದ ಭೋದಿ ವಿಹಾರದ ಬೋದಿದತ್ತ ಬಂತೇಜಿ ಮಾತನಾಡಿ, ಗ್ರಾಮೀಣ ಭಾಗದ ಸರ್ಕಾರಿ ಶಾಲೆ ಮಕ್ಕಳಲ್ಲಿ ವಿಜ್ಞಾನಿಗಳಾಗುವ ಸಾಮಥ್ರ್ಯವಿದೆ. ಕನ್ನಡ ಮಾಧ್ಯಮ ಶಾಲಾ ಮಕ್ಕಳಿಗೆ ಕಂಪ್ಯೂಟರ್ ಸೇರಿದಂತೆ ಹೊಸ ತಂತ್ರಜ್ಞಾನ ಪರಿಚಯಿಸುವ ಕೆಲಸ ಆಗಬೇಕು ಎಂದರು.
ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಮುಖ್ಯಸ್ಥ ಬಿ.ಪಿ.ತಿಪ್ಪೇಸ್ವಾಮಿ ಮಾತನಾಡಿ, ಶಿಕ್ಷಣ ಪಡೆಯದಂತೆ ದೂರ ಇಡುವ ಹುನ್ನಾರ ನಡೆಯುತ್ತಿದೆ. ಸುಸೂತ್ರವಾಗಿ ಶಿಕ್ಷಣ ಸಿಗದಿದ್ದರೆ ತೊಂದರೆಯಾಗುತ್ತದೆ ಎಂದರು.
ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಎಸ್ಎಸ್ಪಿ ಜಾಲತಾಣ ರೂಪಿಸಲಾಗಿದೆ. ಆದರೆ, ಇದರಿಂದ ಫಲಾನುಭವಿ ಅಭ್ಯರ್ಥಿಗೆ ಸಮಸ್ಯೆ ಎದುರಾಗಿದೆ. ಪ್ರವೇಶದ ಸಂದರ್ಭದಲ್ಲಿ ಶುಲ್ಕ ಪಾವತಿ ಮಾಡಬೇಕಿದೆ. ಇದರ ನಿರ್ವಹಣೆ ಕೂಡ ಖಾಸಗಿ ಸಂಸ್ಥೆಗಳಿಗೆ ನೀಡಲಾಗಿದೆ. ಬಡ ಕೌಟುಂಬಿಕ ಹಿನ್ನೆಲೆ ಹೊಂದಿದ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಸಿದ್ದಯ್ಯನಕೋಟೆ ಶ್ರೀ ಬಸವಲಿಂಗ ಸ್ವಾಮೀಜಿ, ಶಾಸಕರಾದ ಟಿ.ರಘುಮೂರ್ತಿ, ಬಸವಂತಪ್ಪ, ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ, ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಜಿಪಂ ಮಾಜಿ ಸದಸ್ಯ ಬಿ.ಪಿ.ಪ್ರಕಾಶ್ಮೂರ್ತಿ ಇದ್ದರು, ಟಿ.ಡಿ.ರಾಜಗಿರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್ ಮತ್ತಿತರರಿದ್ದರು.
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ https://www.facebook.com/chitradurganews?mibextid=ZbWKwL)
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ.
https://chat.whatsapp.com/EQUQpKalYFT1fVcJDTDjCk)
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
