
ಚಿತ್ರದುರ್ಗ ನ್ಯೂಸ್.ಕಾಂ: ಮುರುಘಾ ಮಠದಲ್ಲಿ ನಡೆಯುವ ಶರಣ ಸಂಸ್ಕøತಿ ಉತ್ಸವ-2023 ಕುರಿತು ಮಠದ ಅನುಭವ ಮಂಟಪದಲ್ಲಿ ಬುಧವಾರ ಸಂಜೆ ಪೂರ್ವಭಾವಿ ಸಭೆ ನಡೆಯಿತು. ಈ ವೇಳೆ ಮಠದ ಭಕ್ತರು, ಅಭಿಮಾನಿಗಳು, ವಿವಿಧ ಮಠಾಧೀಶರು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು.
ಈ ವರ್ಷದ ಶರಣ ಸಂಸ್ಕøತಿ ಉತ್ಸವದ ಗೌರವಾಧ್ಯಕ್ಷರಾಗಿ ಆಯ್ಕೆಯಾಗಿರುವ ಅಥಣಿ ಗಚ್ಚಿನ ಮಠದ ಶ್ರೀ ಶಿವಬಸವ ಸ್ವಾಮೀಜಿ ಮಾತನಾಡಿ, ಈ ಹಿಂದೆ ದೇಶದಲ್ಲಿ ಆಡಳಿತ ನಡೆಸುತ್ತಿದ್ದ ಬ್ರಿಟೀಷ್ ಸರ್ಕಾರ ಶೃಂಗೇರಿ ಹಾಗೂ ಮುರುಘಾ ಮಠಕ್ಕೆ ಜಗದ್ಗುರು ಪದವಿ ನೀಡಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಮುರುಘಾ ಮಠ ಅಂಧ ಸಂಪ್ರದಾಯಗಳನ್ನು ತೊಡೆದು ಹಾಕಲು ಅವಿರತವಾಗಿ ಶ್ರಮಿಸಿದೆ. 12 ಶತಮಾನದ ವೈಚಾರಿಕ ಚಿಂತನೆಗಳನ್ನು ಮುಂದುವರೆಸಿಕೊಂಡು ಬಂದಿದೆ. ಈ ಪರಂಪರೆ ಮುಂದುವರೆದುಕೊಂಡು ಹೋಗಬೇಕು. ಈ ವರ್ಷದ ಉತ್ಸವವನ್ನು ಹೆಚ್ಚು ಹೊರೆಯಾಗದಂತೆ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಶ್ರೀಗಳು ಅಭಿಪ್ರಾಯಪಟ್ಟರು.
ಇದನ್ನೂ ಓದಿ: ಶರಣ ಸಂಸ್ಕøತಿ ಉತ್ಸವ ಸಮಿತಿ ಕಾರ್ಯಾಧ್ಯಕ್ಷರಾಗಿ ಕೆ.ಸಿ.ನಾಗರಾಜ್ ಆಯ್ಕೆ
ಡಾ.ಬಸವಕುಮಾರ ಸ್ವಾಮಿಗಳು ಮಾತನಾಡಿ, ಶರಣಸಂಸ್ಕøತಿ ಉತ್ಸವವನ್ನು ಚಿತ್ರದುರ್ಗದ ವಿವಿಧ ಭಾಗಗಳಲ್ಲಿ ಆಚರಿಸಲಾಗುತ್ತದೆ. ಅದೇ ರೀತಿಯಲ್ಲಿ ಶ್ರೀಮಠದಲ್ಲಿ ಅದ್ಧೂರಿಯಾಗಿ ನಡೆಯುತ್ತಿದೆ. ಈ ವೇದಿಕೆ ಅನೇಕ ಸಾಧಕರಿಗೆ ಅವಕಾಶ ಕಲ್ಪಿಸಿದೆ. ಈ ಪರಂಪರೆ ಹಾಗೆಯೇ ಮುಂದುವರಿಯಬೇಕು. ನಮ್ಮಂತಹ ಎಲ್ಲ ಸ್ವಾಮಿಗಳು ಇಲ್ಲಿಯ ತ್ರಿವಿಧ ದಾಸೋಹಕ್ಕೆ ಭಾಜನರಾಗಿದ್ದು, ನಮಗೆ ಯಾವೊತ್ತು ಶ್ರೀಮಠದ ಮೇಲೆ ಕೃತಜ್ಞತಾ ಭಾವ ಇದೆ ಎಂದರು.

ಶ್ರೀ ಬಸವಪ್ರಭು ಸ್ವಾಮಿಗಳು ಮಾತನಾಡಿ, ಕೆ.ಸಿ.ನಾಗರಾಜು ಅವರನ್ನು ಈ ಬಾರಿಯ ಶರಣಸಂಸ್ಕøತಿ ಉತ್ಸವದ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಅಕ್ಟೋಬರ್ 21 ರಿಂದ 25ರವರೆಗೆ ಐದುದಿನಗಳ ಕಾಲ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್ ಮಾತನಾಡಿ, ಶ್ರೀಮಠಕ್ಕೆ ಎಲ್ಲ ಧರ್ಮೀಯರು ಭಕ್ತಿಯಿಂದ ಭೇಟಿ ನೀಡುತ್ತಾರೆ. ನಮ್ಮಂಥವರಿಗೆ ಶ್ರೀಮಠವು ಅವಕಾಶ ಮಾಡಿಕೊಟ್ಟಿದೆ. ನಾವು ಶರಣಸಂಸ್ಕøತಿ ಉತ್ಸವದಿಂದ ದೂರ ಉಳಿಯಬಾರದು. ಯುವಕರಿಗೆ ರೈತರಿಗೆ ಅನುಕೂಲವಾಗುವ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಶ್ರೀಮಠವು ಯಾವುದೇ ಸಮಾಜಕ್ಕೆ ಸೀಮಿತವಾದುದಲ್ಲ. ಇದು ಸರ್ವ ಜನಾಂಗದ ಶಾಂತಿಯ ತೋಟವಾಗಿದೆ ಎಂದು ಹೇಳಿದರು.
ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಗಳು, ಡಾ. ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಗಳು, ಶ್ರೀ ಬಸವ ಮಾಚಿದೇವ ಸ್ವಾಮಿಗಳು, ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ಶ್ರೀ ಬಸವ ಶಾಂತಲಿಂಗ ಸ್ವಾಮಿಗಳು ಹೊಸಮಠ ಹಾವೇರಿ, ಶ್ರೀ ಚೆನ್ನಬಸವ ಸ್ವಾಮಿಗಳು ಶಿಕಾರಿಪುರ, ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ನಿಪ್ಪಾಣಿ, ಶ್ರೀ ಬಸವ ಹರಳಯ್ಯ ಸ್ವಾಮಿಗಳು, ಐಮಂಗಲ, ಶ್ರೀ ಅನ್ನದಾನಿಭಾರತಿ ಬಸವಪ್ರಿಯ ಹಪ್ಪಣ್ಣ ಸ್ವಾಮಿಗಳು ತಂಗಡಗಿ, ಶ್ರೀ ಬಸವಪ್ರಸಾದ ಸ್ವಾಮಿಗಳು ಶಿವಶಕ್ತಿಪೀಠ ಇರಕಲ್, ಶ್ರೀ ಪ್ರಭುಲಿಂಗ ಸ್ವಾಮಿಗಳು ಜಗಳೂರು, ಶ್ರೀ ತಿಪ್ಪೇರುದ್ರಸ್ವಾಮಿಗಳು ಹೊಳವನಹಳ್ಳಿ, ಶ್ರೀ ಮುರುಘೇಂದ್ರ ಸ್ವಾಮಿಗಳು, ಎನ್.ಬಿ. ವಿಶ್ವನಾಥಯ್ಯ, ಕೆ.ಎಂ.ವೀರೇಶ್, ನಿರಂಜನಮೂರ್ತಿ, ಎ.ಎನ್.ಮೂರ್ತಿ, ಖಾಸಿಂ ಅಲಿ, ಫಾತ್ಯರಾಜನ್, ಜಿತೇಂದ್ರ ಎನ್ ಹುಲಿಕುಂಟೆ ಮತ್ತಿತರರು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
