By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮುರುಘಾ ಮಠದ ಪ್ರಕರಣ | ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಾಜಿ ಸಚಿವ ಎಚ್.ಏಕಾಂತಯ್ಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮುರುಘಾ ಮಠದ ಪ್ರಕರಣ | ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಾಜಿ ಸಚಿವ ಎಚ್.ಏಕಾಂತಯ್ಯ

ಮುಖ್ಯ ಸುದ್ದಿ

ಮುರುಘಾ ಮಠದ ಪ್ರಕರಣ | ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಾಜಿ ಸಚಿವ ಎಚ್.ಏಕಾಂತಯ್ಯ

chitradurganews.com
Last updated: 21 October 2023 08:16
chitradurganews.com
2 years ago
Share
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ: ಐತಿಹಾಸಿಕ ಮುರುಘಾ ಮಠದಲ್ಲಿ ಇಂದಿನಿಂದ ಶರಣ ಸಂಸ್ಕøತಿ ಉತ್ಸವಕ್ಕೆ ಸಜ್ಜಾಗುತ್ತಿರುವಾಗಲೇ, ಮಠದ ಆಡಳಿತ ನಿರ್ವಹಣೆ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಅ.19 ರಂದು ಎಚ್.ಏಕಾಂತಯ್ಯ ಅವರ ವಿಶೇಷ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ವಿಕ್ರಮ್‍ನಾಥ್ ಹಾಗೂ ರಾಜೇಶ್ ಬಿಂದಾಲ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ವಿಚಾರಣೆಗೆ ಅಂಗೀಕರಿಸಿದೆ. ಈ ಸಂಬಂಧ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದೆ.

ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ದೂರು ದಾಖಲಾಗುತ್ತಿದ್ದಂತೆ, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ ಅಡಿಯಲ್ಲಿ ಮಠ ಹಾಗೂ ವಿದ್ಯಾ ಸಂಸ್ಥೆಗಳಲ್ಲಿ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿ ಮತ್ತೊಂದು ಪ್ರಕರಣ ದಾಖಲಿಸಲಾಗಿತ್ತು. ಸದರಿ ಪ್ರಕರಣದ ವಿಚಾರಣೆ ನಡೆಸಿದ್ದ ಚಿತ್ರದುರ್ಗ ಸೆಷನ್ಸ್ ಕೋರ್ಟ್ ಮುರುಘಾ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿತ್ತು.

ಇದನ್ನೂ ಓದಿ: ಶಿವಮೂರ್ತಿ ಶರಣರ ವಿರುದ್ಧದ ಪೋಕ್ಸೋ ಕೇಸ್; ಮಂಜೂರಾಯ್ತು ಜಾಮೀನು

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುರುಘಾ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿತ್ತು.

ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಹಾಗೂ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸುವಂತೆ ಮುರುಘಾ ಮಠದ ಉಸ್ತುವಾರಿಗಳಾಗಿರುವ ಶ್ರೀ ಬಸವಪ್ರಭು ಸ್ವಾಮೀಜಿ ಹಾಗು ಭಕ್ತರು ಹೈಕೋರ್ಟ್ ಮೆಟ್ಟಿಲೇರಿದ್ದರು.

ವಿಚಾರಣೆ ನಡೆಸಿದ್ದ ಹೈಕೋರ್ಟ್ ಮಠ ಮಾನ್ಯಗಳಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು ಎಂದು ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿ, ಸರ್ಕಾರದ ನಿರ್ಧಾರವನ್ನು ಖಂಡಿಸಿ, ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಮೇ 22 ರಂದು ರದ್ದುಪಡಿಸಿತ್ತು. ಮುರುಘಾ ಶರಣರ ಅಧಿಕಾರ ಚಲಾವಣೆಗೆ ಸೆಷನ್ಸ್ ಕೋರ್ಟ್ ವಿಧಿಸಿದ್ದ ಆದೇಶವನ್ನೂ ಇದೇ ವೇಳೆ ವಜಾಗೊಳಿಸಲಾಗಿತ್ತು.

ಈಗ ಇದೇ ವಿಚಾರವನ್ನು ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನೆ ಮಾಡಿದ್ದು, ಮುಂದೇನಾಗಲಿದೆ ಎನ್ನುವ ಕುತೂಹಲ ಮನೆ ಮಾಡಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaControversyH. EkantaiahHigh CourtKannada Latest NewsMuruga MathPOCSOPrisonShivamurthy Muruga SharanaruSupreme Courtಎಚ್.ಏಕಾಂತಯ್ಯಕನ್ನಡ ಲೇಟೆಸ್ಟ್ ನ್ಯೂಸ್ಕಾರಾಗೃಹಚಿತ್ರದುರ್ಗಪೋಕ್ಸೋಮುರುಘಾ ಮಠವಿವಾದಶಿವಮೂರ್ತಿ ಮುರುಘಾ ಶರಣರುಸುಪ್ರೀಂ ಕೋರ್ಟ್ಹೈಕೋರ್ಟ್‌
Share This Article
Facebook Email Print
Previous Article ಪೂರ್ಣಿಮಾ-ಶ್ರೀನಿವಾಸ್‍ಗೆ ಅನ್ಯಾಯ ಆಗಲು ಬಿಡಲ್ಲ ಎಂದು ಸಿಎಂ ಬಹಳ ದಿನಗಳಿಂದ ಗಾಳ ಹಾಕಿದ್ದೆ ಎಂದ ಡಿಕೆಶಿ | ಪೂರ್ಣಿಮಾ-ಶ್ರೀನಿವಾಸ್‍ಗೆ ಅನ್ಯಾಯ ಆಗಲು ಬಿಡಲ್ಲ ಎಂದ ಸಿಎಂ
Next Article FIR ಸೇನೆ, ರೈಲ್ವೇಯಲ್ಲಿ ಕೆಲಸ ಕೊಡಿಸುವದಾಗಿ ವಂಚಿಸಿದ್ದ ಮಾಜಿ ಸೈನಿಕನ ಬಂಧನ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up