
ಚಿತ್ರದುರ್ಗ ನ್ಯೂಸ್.ಕಾಂ: ಮಧ್ಯ ಕರ್ನಾಟಕದ ದಸರ ಎಂದೇ ಹೆಸರಾಗಿರುವ ಚಿತ್ರದುರ್ಗ ಮುರುಘಾ ಮಠದ ಶರಣ ಸಂಸ್ಕøತಿ ಉತ್ಸವ ನಿಧಾನವಾಗಿ ಕಳೆಗಟ್ಟಿದೆ.
ಮುರುಘಾ ಶರಣರ ಪ್ರಕರಣದ ನಂತರ ಮಠದಲ್ಲಿ ಅಷ್ಟಾಗಿ ಚಟುವಟಿಕೆಗಳು ಕಾಣಿಸುತ್ತಿರಲಿಲ್ಲ. ಶರಣ ಸಂಸ್ಕøತಿ ಉತ್ಸವ ನಡೆದರೂ ಹೇಗೆ ನಡೆಸಲಾಗುತ್ತದೆ ಎಂಬೆಲ್ಲಾ ಪ್ರಶ್ನೆಗಳು ಅನೇಕರನ್ನು ಕಾಡುತ್ತಿದ್ದವು.
ವಿಶೇಷವಾಗಿ ಶೂನ್ಯಪೀಠಾರೋಹಣ ಯಾರು ಮಾಡುತ್ತಾರೆ ಎನ್ನುವ ಪ್ರಶ್ನೆಗಳು ಸಹಜ. ಆದರೆ, ಉತ್ಸವ ಸಮಿತಿ ಇದಕ್ಕೆ ಕಳೆದ ವರ್ಷವೇ ಉತ್ತರ ಕೊಟ್ಟಿದ್ದು, ಮಠದ ಕರ್ತೃಗಳಾದ ಮುರುಗಿ ಶಾಂತವೀರ ಸ್ವಾಮಿಗಳ ಭಾವಚಿತ್ರ ಇಟ್ಟು ಶೂನ್ಯಪೀಠಾರೋಹಣ ನೆರವೇರಿಸಿತ್ತು.

ಇದನ್ನೂ ಓದಿ: ಶರಣ ಸಂಸ್ಕøತಿ ಉತ್ಸವದಲ್ಲಿ ಝಗಮಗಿಸುತ್ತಿದೆ ಮುರುಘಾ ಮಠ
ಈ ವರ್ಷದ ಶೂನ್ಯಪೀಠಾರೋಹಣಕ್ಕಾಗಿ ಶ್ರೀ ಮುರುಗಿ ಶಾಂತವೀರ ಸ್ವಾಮಿಗಳ ವಿಶೇಷ ಕಂಚಿನ ಪ್ರತಿಮೆ ರೂಪಿಸಲಾಗಿದೆ. ಅ.25 ರಂದು ಶೂನ್ಯಪೀಠಾರೋಹಣ ಕಾರ್ಯಕ್ರಮ ನಡೆಯಲಿದೆ.
ಮಠದ ಆಡಳಿತಾಧಿಕಾರಿಗಳು ಹಾಗೂ ಪ್ರಧಾನ ಸತ್ರ ಮತ್ತು ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್.ರೇಖಾ ಭಾನುವಾರ ಶ್ರೀ ಮುರುಗಿ ಶಾಂತವೀರ ಸ್ವಾಮಿಗಳ ಕಂಚಿನ ಪ್ರತಿಮೆಯನ್ನು ಅನಾವರಣ ಮಾಡಿದರು.
ಈ ಸಂದರ್ಭದಲ್ಲಿ ಶರಣ ಸಂಸ್ಕøತಿ ಉತ್ಸವ-2023ರ ಗೌರವಾಧ್ಯಕ್ಷರಾದ ಅಥಣಿ ಗಚ್ಚಿನಮಠದ ಶ್ರೀ ಶಿವಬಸವ ಮಹಾಸ್ವಾಮಿಗಳು, ಡಾ.ಬಸವಕುಮಾರ ಸ್ವಾಮಿಗಳು, ಶ್ರೀ ಬಸವ ಮಾಚಿದೇವ ಸ್ವಾಮಿಗಳು, ಶರಣಸಂಸ್ಕøತಿ ಉತ್ಸವ-2023ರ ಕಾರ್ಯಾಧ್ಯಕ್ಷ ಕೆ.ಸಿ.ನಾಗರಾಜ್, ಬಿಜೆಪಿ ಯುವ ಮುಖಂಡ ಜಿ.ಎಸ್.ಅನಿತ್ ಕುಮಾರ್ ಮತ್ತಿತರರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
