
ಚಿತ್ರದುರ್ಗ ನ್ಯೂಸ್.ಕಾಂ: ಚಳ್ಳಕೆರೆ ನಗರದ SRS ಹೆರಿಟೇಜ್ ಶಾಲೆಯಲ್ಲಿ ಸಂಭ್ರಮದ ದೀಪಾವಳಿ ಆಚರಿಸಲಾಯಿತು.
ಸುಮಾರು 5-6 ಸಾವಿರ ದೀಪಗಳನ್ನು ಬೆಳಗಿಸಿ, ಕರ್ನಾಟಕ ರಾಜ್ಯದ ನಕ್ಷೆ ಹಾಗೂ ಎಸ್ ಆರ್ ಎಸ್ ಶಾಲೆಯ ಲೋಗೋವನ್ನು ದೀಪಗಳ ಬೆಳಕಿನಲ್ಲಿ ಮೂಡಿಸಲಾಯಿತು. ಈ ಅದ್ಬುತ ದೃಶ್ಯ ಕಣ್ಮನ ಸೆಳೆಯಿತು.
ಹೂವು ಹಾಗೂ ಮಣ್ಣಿನ ದೀಪಗಳ ಅಲಂಕಾರ ವಿಶೇಷ ಗಮನ ಸೆಳೆಯಿತು. ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಾಲಾ ಸಂಘಟಕರು ಸೇರಿ ದೀಪಗಳನ್ನು ಬೆಳಗಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಜರುಗಿದವು.

ಇದನ್ನೂ ಓದಿ: ಚಿತ್ರಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ
ಎಸ್ ಆರ್ ಎಸ್ ಸಂಸ್ಥೆಯ ನಿರ್ದೇಶಕಿ ಲಿಖಿತಾ ಅಮೋಘ್ ದೀಪಾವಳಿ ಹಬ್ಬದ ಶುಭಾಷಯ ಕೋರುತ್ತಾ, ದೀಪಾವಳಿಯನ್ನು ದೀಪಗಳನ್ನು ಬೆಳಗಿಸಿ ಆಚರಣೆ ಮಾಡಬೇಕು. ಪಟಾಕಿ ಸಿಡಿಸುವುದರಿಂದ ಆಗುವ ಅನಾಹುತಗಳನ್ನು ವಿವರಿಸಿದರು.
ಎಸ್ ಆರ್ ಎಸ್ ಸಂಸ್ಥೆಯ ಅಧ್ಯಕ್ಷರಾದ ಬಿ.ಎ. ಲಿಂಗಾರೆಡ್ಡಿ, ಶಾಲೆಯ ಪ್ರಾಂಶುಪಾಲರಾದ ಬಿ.ಎಸ್. ವಿಜಯ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
