ಚಿತ್ರದುರ್ಗ ನ್ಯೂಸ್.ಕಾಂ: ಚಳ್ಳಕೆರೆ ತಾಲೂಕು ಕಂಚಾಯ ಇಲಾಖೆ ನೌಕರನ ಆತ್ಮಹತ್ಯೆ ಪ್ರಕರಣ ಸರ್ಕಾರಿ ನೌಕರರ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ.
ಇಲ್ಲಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 52 ವರ್ಷದ ಗುರುಲಿಂಗಣ್ಣ, ಭಾನುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಗುರುಲಿಂಗಣ್ಣ ಬರೆದಿರುವ ಡೆತ್ನೋಟ್ ಪತ್ತೆಯಾಗಿದೆ.
ಡೆತ್ನೋಟ್ನಲ್ಲಿ ಗುರುಲಿಂಗಣ್ಣ ಉಲ್ಲೇಖಿಸಿರುವ ಅಂಶಗಳು ಮಹತ್ವ ಪಡೆದುಕೊಂಡಿವೆ.

‘ಕಚೇರಿಯಲ್ಲಿನ ಕೆಲಸದ ಒತ್ತಡ ಹಾಗೂ ಅವಮಾನದ ಕಾರಣಕ್ಕೆ ಬೇರೆ ದಾರಿ ಕಾಣದೆ ಈ ನಿರ್ಧಾರಕ್ಕೆ ಬಂದಿದ್ದೇನೆ, ನನ್ನನ್ನು ಕ್ಷಮಿಸಿ ವಿಜಯ ಮತ್ತು ಮಕ್ಕಳೇ,’ ಎಂದು ಪತ್ನಿ ಹಾಗೂ ಮಕ್ಕಳನ್ನು ಉದ್ದೇಶಿಸಿ ಡೆತ್ನೋಟ್ ಬರೆದಿಟ್ಟಿದ್ದಾರೆ.
ಇದನ್ನೂ ಓದಿ: ಕಂದಾಯ ಇಲಾಖೆ ನೌಕರ ಆತ್ಮಹತ್ಯೆ
ಮೂಲತಃ ಚಿತ್ರದುರ್ಗ ತಾಲೂಕು ತುರುವನೂರು ಪಕ್ಕದ ದೊಡ್ಡಘಟ್ಟ ಗ್ರಾಮದ ಗುರುಲಿಂಗಣ್ಣ, 6 ವರ್ಷಗಳಿಂದ ಕಚೇರಿಯಲ್ಲಿ ವಿವಿಧ ಹಂತದ ಕೆಲಸಗಳನ್ನು ಮಾಡಿಕೊಂಡು ಬಂದವರು.
ಭೂಮಿ ಕೇಂದ್ರದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿದ್ದ ಗುರುಲಿಂಗಣ್ಣ, ಆನಂತರ ಪ್ರಥಮ ದರ್ಜೆ ಸಹಾಯಕರಾಗಿ ಬಡ್ತಿ ಪಡೆದಿದ್ದರು.
ಮೇ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮತಗಟ್ಟೆಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿ ನಿಭಾಯಿಸಿದ್ದರು. ಚುನಾವಣೆ ಕೆಲಸಕ್ಕೆ ನೇಮಕವಾಗಿದ್ದ ಸಿಬ್ಬಂದಿಗಳ ವೇತನದ ಜವಾಬ್ದಾರಿಯನ್ನೂ ನಿಭಾಯಿಸಿದ್ದರು.
ಆದರೆ, ಈಗ ಡೆತ್ನೋಟ್ನಲ್ಲಿ ಕೆಲಸದ ಒತ್ತಡ ಹಾಗೂ ಅವಮಾನ ಎಂದು ಉಲ್ಲೇಖ ಮಾಡಿರುವುದು ಮುಖ್ಯವಾಗಿದ್ದು, ಪೊಲೀಸರ ತನಿಖೆಯಿಂದ ಅವಮಾನ ಮತ್ತು ಒತ್ತಡಕ್ಕೆ ಕಾರಣವಾದ ಅಂಶಗಳು ಪತ್ತೆಯಾಗಬೇಕಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
