
ಚಿತ್ರದುರ್ಗ ನ್ಯೂಸ್.ಕಾಂ: ಬೈಕಿಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಹಿರಿಯೂರು ತಾಲೂಕಿನ ಆನೆಸಿದ್ರಿ ಬಳಿ ನಡೆದಿದೆ.
ಯಾವುದೇ ಮುನ್ಸೂಚನೆ ನೀಡದೆ ಕಾರು ಯೂ-ಟರ್ನ್ ತೆಗೆದುಕೊಳ್ಳುವಾಗ ರಸ್ತೆಯಲ್ಲಿ ಬಂದ ಬೈಕಿಗೆ ಡಿಕ್ಕಿಯಾಗಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ.
ಚಳ್ಳಕೆರೆ ತಾಲ್ಲೂಕು ಹನುಮಂತನಹಳ್ಳಿ-ಗೊಲ್ಲರಹಟ್ಟಿ ಗ್ರಾಮದ 24 ವರ್ಷದ ಸುಧಾಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬೈಕಿನ ಹಿಂಬದಿಯಲ್ಲಿದ್ದ ಮತ್ತೋರ್ವ ವ್ಯಕ್ತಿ ಕಲಬುರಗಿ ಜಿಲ್ಲೆ, ಚಿತ್ತಾಪುರ ತಾಲೂಕು ಬೆನ್ನೂರು ಗ್ರಾಮದ ಅಂಬರೀಶ್ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಬಂಗಾರದ ನಾಣ್ಯದ ಆಸೆ ತೋರಿಸಿ 8 ಲಕ್ಷ ದೋಚಿದ್ದ ಕಳ್ಳ ಅಂದರ್
ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಗೋವಿಂದರಾಜು ಎಂಬುವವರು ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಶೆಟ್ಟಿ ಲಂಚ್ ಹೋಮ್ ಹೋಟೆಲ್ ಸಮೀಪದ ಆನೆಸಿದ್ರಿ ಸರ್ವಿಸ್ ರಸ್ತೆಯಿಂದ ತಮ್ಮ ಕಾರನ್ನು ಬೆಂಗಳೂರು ಕಡೆಗೆ ಹೋಗಲು ಯಾವುದೇ ಮುನ್ಸೂಚನೆ ನೀಡದೆ ಯೂ-ಟರ್ನ್ ತೆಗೆದುಕೊಂಡ ಪರಿಣಾಮ ಬೆಂಗಳೂರು ಕಡೆಯಿಂದ ಹಿರಿಯೂರಿಗೆ ಹೋಗಲು ಬರುತ್ತಿದ್ದ ಬೈಕಿಗೆ ಡಿಕ್ಕಿಯಾಗಿದೆ.
ಡಿಕ್ಕಿಯ ಪರಿಣಾಮ ಬೈಕ್ ಜಖಂ ಆಗಿದ್ದು, ಬೈಕ್ ಚಾಲಕ ಮೃತಪಟ್ಟು, ಹಿಂಬದಿ ಕುಳಿತಿದ್ದ ಸವಾರ ಗಾಯಗೊಂಡಿದ್ದಾರೆ.
ಈ ಬಗ್ಗೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
