By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಒನಕೆ ಓಬವ್ವ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಭೇಟಿ | 2 ದಿನಗಳಲ್ಲಿ ವಿದ್ಯುತ್ ದೀಪ ಸರಿಪಡಿಸಲು ತಾಕೀತು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಒನಕೆ ಓಬವ್ವ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಭೇಟಿ | 2 ದಿನಗಳಲ್ಲಿ ವಿದ್ಯುತ್ ದೀಪ ಸರಿಪಡಿಸಲು ತಾಕೀತು

ಮುಖ್ಯ ಸುದ್ದಿ

ಒನಕೆ ಓಬವ್ವ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಭೇಟಿ | 2 ದಿನಗಳಲ್ಲಿ ವಿದ್ಯುತ್ ದೀಪ ಸರಿಪಡಿಸಲು ತಾಕೀತು

chitradurganews.com
Last updated: 6 January 2024 17:01
chitradurganews.com
1 year ago
Share
ವೀರವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಭೇಟಿ
ವೀರವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಭೇಟಿ
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ: ನಗರದ ವೀರವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಭೇಟಿ ನೀಡಿ ಪರಿಶೀಲನೆ ನಡೆಸಿ ಕುಂದುಕೊರತೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು.

ಶುಕ್ರವಾರ ಸಂಜೆ ವೇಳೆಗೆ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿಗಳು, ವಾಯು ವಿಹಾರಕ್ಕೆ, ಕ್ರೀಡಾ ಅಭ್ಯಾಸಕ್ಕೆ, ಆಟೋಟಕ್ಕೆ ಬಂದವರನ್ನು ಮಾತನಾಡಿಸಿ ಸಮಸ್ಯೆಗಳನ್ನು ಆಲಿಸಿದರು.

ವೀರವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಭೇಟಿ
ವೀರವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಭೇಟಿ

ಕ್ರೀಡಾಂಗಣದಲ್ಲಿನ ಎಲ್ಲ ಕುಂದುಕೊರತೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಕ್ರೀಡಾಂಗಣದಲ್ಲಿ ವಿದ್ಯುತ್ ದೀಪದ ಕೊರತೆ ಹಾಗೂ ಕುಡಿಯುವ ನೀರಿನ ಕೊರತೆ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಎರಡು ದಿನಗಳ ಒಳಗೆ ವಿದ್ಯುತ್ ದೀಪದ ವ್ಯವಸ್ಥೆ ಕೈಗೊಳ್ಳಲು ಸೂಚಿಸಿದರು.

ಅಲ್ಲದೆ ಕ್ರೀಡಾಂಗಣದಲ್ಲಿ ಶುದ್ಧ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮಕ್ಕಾಗಿ ತಾಕೀತು ಮಾಡಿದರು. ಕ್ರೀಡಾಂಗಣದಲ್ಲಿ ಬೆಳಗಿನ ಜಾವ ಹಾಗೂ ಸಂಜೆಯ ಹೊತ್ತಿನಲ್ಲಿ ವಾಯುವಿಹಾರಕ್ಕೆ ಬರುವವರ ಸಂಖ್ಯೆ ಹೆಚ್ಚಿದೆ.

ಇದನ್ನೂ ಓದಿ: ತಿಂಗಳ ಅಂತ್ಯಕ್ಕೆ ದುರ್ಗಕ್ಕೆ ಕಾದಿದೆ ನೀರಿನ ಗಂಡಾಂತರ

ಹೀಗಾಗಿ ವಾಕಿಂಗ್ ಮಾಡುವವರಿಗಾಗಿ ಪ್ರತ್ಯೇಕವಾಗಿ ವಾಕಿಂಗ್ ಪಥ ನಿರ್ಮಿಸಲು ಸೂಚನೆ ನೀಡಿದರು.

ವಿವಿಧ ಕ್ರೀಡೆಗಳ ಅಭ್ಯಾಸಕ್ಕಾಗಿ ಕ್ರೀಡಾಂಗಣಕ್ಕೆ ಬಂದಿದ್ದ ಯುವಜನರೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ವಿದ್ಯಾರ್ಥಿಗಳ ಅಭ್ಯಾಸಕ್ಕಾಗಿ ಹಾಗೂ ಕ್ರೀಡೆಗಳ ಅಭಿವೃದ್ದಿಗೆ ಅಗತ್ಯವಿರುವ ಕ್ರೀಡಾ ಪರಿಕರಗಳ ಬಗ್ಗೆಯೂ ಅವರಿಂದ ಮಾಹಿತಿ ಪಡೆದುಕೊಂಡು, ಕ್ರೀಡಾಂಗಣಕ್ಕೆ ಅಗತ್ಯವಿರುವ ಪರಿಕರಗಳನ್ನು ಖರೀದಿಸುವಂತೆ ಹಾಗೂ ಅಗತ್ಯವಿರುವ ಅನುದಾನದ ಬಗ್ಗೆ ವರದ ಸಲ್ಲಿಸಲು ಸೂಚನೆ ನೀಡಿದರು.

ಬಳಿಕ ಕ್ರೀಡಾಂಗಣದ ಆವರಣದಲ್ಲಿರುವ ಒಳಾಂಗಣ ಈಜುಕೊಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಈಜುಕೊಳ ಸಾರ್ವಜನಿಕರ ಸೇವೆಗೆ ಶೀಘ್ರ ಲಭ್ಯವಾಗುವಂತೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ವಿನಾಕಾರಣ ನೆಪಗಳನ್ನು ಹೇಳಿಕೊಂಡು ತಡ ಮಾಡದಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ವೀರವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಭೇಟಿ
ವೀರವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಭೇಟಿ

ಜಿ.ಪಂ ಸಿಇಒ ಸೋಮಶೇಖರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತನ ನೆಲವಿಗಿ ಸೇರಿದಂತೆ ಕ್ರೀಡಾಂಗಣದ ವಿವಿಧ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕೆಲ ದಿನಗಳ ಹಿಂದೆ ಕ್ರೀಡಾಪಟುಗಳು ಹಾಗೂ ವಾಯು ವಿಹಾರ ಮಾಡುವವರು ಒನಕೆ ಓಬವ್ವ ಕ್ರೀಡಾಂಗಣದ ಅವ್ಯವಸ್ಥೆಗಳ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಮಾಧ್ಯಮಗಳ ಗಮನ ಸೆಳೆದಿದ್ದರು.

ಮಾಧ್ಯಮಗಳ ವರದಿ ಆಧರಿಸಿ ಲೋಕಾಯುಕ್ತರು ಸುಮೋಟೊ ಪ್ರಕರಣ ದಾಖಲಿಸಿ, ಅಧಿಕಾರಿಗಳಿಗೆ ನೋಟೀಸ್ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಖುದ್ದು ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದು ಮಹತ್ವ ಪಡೆದುಕೊಂಡಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaCollector Divya PrabhuOnake Obavva Stadiumಒನಕೆ ಓಬವ್ವ ಕ್ರೀಡಾಂಗಣಚಿತ್ರದುರ್ಗಜಿಲ್ಲಾಧಿಕಾರಿ ದಿವ್ಯಪ್ರಭು
Share This Article
Facebook Email Print
Previous Article ಅಸ್ಥಿಪಂಜರ ಸಿಕ್ಕ ಮನೆ ಐವರ ಅಸ್ಥಿಪಂಜರ ಪತ್ತೆ ಪ್ರಕರಣ | ವಿಳಂಬವಾಯ್ತಾ ಮರಣೋತ್ತರ ಪರೀಕ್ಷೆ ವರದಿ
Next Article ಮಡಿವಾಳ ಮಾಚಿದೇವ ಮಠದ ಬಸವ ಶ್ರೀ ಮಾಚಿದೇವ ಸ್ವಾಮೀಜಿ ಭಕ್ತರು ಇಚ್ಚಿಸುವವರೆಗೆ ಮಾತ್ರ ನಾನು ಸ್ವಾಮೀಜಿ ಆಗಿರುತ್ತೇನೆ | ಮಾಚಿದೇವ ಶ್ರೀ
Leave a Comment

Leave a Reply Cancel reply

Your email address will not be published. Required fields are marked *

ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
ಹೆರಿಗೆಯ ನಂತರ ಬೇಗ ಚೇತರಿಸಿಕೊಳ್ಳಲು ಈ ಲಡ್ಡುಗಳನ್ನು ತಿನ್ನಿರಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 30 | ಉದ್ಯೋಗಗಳಲ್ಲಿ ಬಡ್ತಿ, ದೂರದ ಪ್ರಯಾಣ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up