By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
    2 hours ago
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    10 hours ago
    New office bearers elected for Chitradurga Taluk Contractors Association
    ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
    10 hours ago
    ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪತ್ರಿಕಾಗೋಷ್ಠಿ
    ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ | ರೈತ ಸಂಘ
    10 hours ago
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    21 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    5 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    10 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    2 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    9 hours ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    10 hours ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    1 day ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
Reading: ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರಸ್ವಾಮಿ ಜಾತ್ರಾ ಮಹೋತ್ಸವ | 24 ರಂದು ಬ್ರಹ್ಮ ರಥೋತ್ಸವ | ರಥವನ್ನು ಎಳೆದು ತಂದಿದ್ದೇ ಒಂದು ರೋಚಕ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರಸ್ವಾಮಿ ಜಾತ್ರಾ ಮಹೋತ್ಸವ | 24 ರಂದು ಬ್ರಹ್ಮ ರಥೋತ್ಸವ | ರಥವನ್ನು ಎಳೆದು ತಂದಿದ್ದೇ ಒಂದು ರೋಚಕ

News Desk Chitradurga News
Last updated: 9 February 2024 04:31
News Desk Chitradurga News
3 years ago
Share
SHARE

CHITRADURGA NEWS | 09 FEBRUARY 2024
ಚಿತ್ರದುರ್ಗ: ದಕ್ಷಿಣ ಕಾಶಿಯೆಂದೆ ಖ್ಯಾತಿಗಳಿಸಿರುವ ಹಿರಿಯೂರು ಪಟ್ಟಣದ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದೆ. ಫೆ.13 ರಿಂದ 28 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ.

ಫೆ.13 ರ ರಾತ್ರಿ 8ಕ್ಕೆ ಕಂಕಣ ಕಲ್ಯಾಣೋತ್ಸವ, ಕಂಕಣಧಾರಣೆ ಮೂಲಕ ಜಾತ್ರೆಗೆ ವಿದ್ಯುಕ್ತ ಚಾಲನೆ ದೊರೆಯಲಿದೆ. 14ರಂದು ರಾತ್ರಿ 8ಕ್ಕೆ ಮಂಟಪೋತ್ಸವ,15ರಂದು ರಾತ್ರಿ 8ಕ್ಕೆ ಗಿಳಿ ವಾಹನೋತ್ಸವ, ಫೆ.16ರಂದು ರಾತ್ರಿ 8ಕ್ಕೆ ಗಂಡುಭೇರುಂಡ ವಾಹನೋತ್ಸವ.

17ರಂದು ರಾತ್ರಿ 8ಗಂಟೆಗೆ ನವಿಲು ವಾಹನೋತ್ಸವ,18ರಂದು ರಂದು ರಾತ್ರಿ 8ಕ್ಕೆ ಸಿಂಹ ವಾಹನೋತ್ಸವ, 19ರಂದು ರಾತ್ರಿ 8ಕ್ಕೆ ನಂದಿ ವಾಹನೋತ್ಸವ, 20ರಂದು ರಾತ್ರಿ 8ಕ್ಕೆ ಸರ್ಪ ವಾಹನೋತ್ಸವ, 21ರಂದು ರಾತ್ರಿ 8 ಕ್ಕೆ ಅಶ್ವ ವಾಹನೋತ್ಸವ, 22ರಂದು ರಾತ್ರಿ 8ಕ್ಕೆ ಗಜ ವಾಹನೋತ್ಸವ (ಮೂರು ಕಳಸ ಸ್ಥಾಪನೆ) ಫೆ.23ರಂದು ಬೆಳಿಗ್ಗೆಯಿಂದ ರಾತ್ರಿಯವರೆಗೆ ಬಸವ ವಾಹನೋತ್ಸವ (ದೊಡ್ಡ ಉತ್ಸವ) ಅಕ್ಕಿ ತಂಬಿಟ್ಟಿನ ಆರತಿ ನಡೆಯಲಿದೆ.

ಇದನ್ನೂ ಓದಿ: ಫೆ.11ರಂದು ಶ್ರೀ ಗಂಗಾಂಬಿಕಾ ಸಮುದಾಯ ಭವನ ಉದ್ಘಾಟನೆ ‌| ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಸಾನಿಧ್ಯ

ಹಿರಿಯೂರು ತಾಲ್ಲೂಕು ಐಮಂಗಲ ಹೋಬಳಿ ಬೀರೇನಹಳ್ಳಿ ಮಜುರೆ ಕರಿಯಣ್ಣಹಟ್ಟಿ ಗ್ರಾಮದ ವೀರಕರಿಯಣ್ಣ ದೇವರ ನೇತೃತ್ವದಲ್ಲಿ ಫೆ.24ರಂದು ಬೆಳಿಗ್ಗೆ 9ಕ್ಕೆ ಶಿವಧನಸ್ಸಿನ ಗಂಗಾ ಸ್ನಾನದ ಉತ್ಸವ ನಂತರ ಮಧ್ಯಾಹ್ನ 12ಕ್ಕೆ ಮಘಾ ನಕ್ಷತ್ರದಲ್ಲಿ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ನಡೆಯಲಿದ್ದು, ಮಧ್ಯಾಹ್ನ 1.30ಕ್ಕೆ ಪ್ರಸಾದ ವಿನಿಯೋಗ, ಸಂಜೆ 5ಕ್ಕೆ ಚಂದ್ರಮೌಳೇಶ್ವರ ಮತ್ತು ಉಮಾಮಹೇಶ್ವರ ರಥೋತ್ಸವ ನಡೆಯಲಿದೆ.

25 ರಂದು ಸಂಜೆ 4ಕ್ಕೆ ಸಿದ್ಧನಾಯಕ ವೃತ್ತದಲ್ಲಿ ಶ್ರೀ ಮದಕರಿ ಯುವಕ ಸಂಘದಿಂದ ಜಂಗೀ ಕುಸ್ತಿಯನ್ನು ಏರ್ಪಡಿಸಲಾಗಿದೆ.
ತ26ರಂದು ರಾತ್ರಿ 8ಕ್ಕೆ ಸುಮಂಗಲೆಯರಿಂದ ಕರ್ಪೂರದಾರತಿ, 27ರಂದು ರಾತ್ರಿ 8ಕ್ಕೆ ಚಿಟುಗ ಮಲ್ಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಅಭಿಷೇಕ ಹಾಗೂ ಉಯ್ಯಾಲೋತ್ಸವ, ವಸಂತೋತ್ಸವ, ಓಕಳಿ ಪಾರ್ವಟೋತ್ಸವ ನಡೆಯಲ್ಲಿದೆ. ಫೆ.28ರಂದು ಸಂಜೆ 4ಕ್ಕೆ ಕಂಕಣ ವಿಸರ್ಜನೆಯೊಂದಿಗೆ ಜಾತ್ರಾ ಮಹೋತ್ಸವ ಮುಕ್ತಾಯಗೊಳ್ಳಲಿದೆ.

ಫೆ.24ರಂದು ಮಧ್ಯಾಹ್ನ ಸ್ವಾಮಿಯ ಮುಕ್ತಿ ಬಾವುಟದ ಹರಾಜು ಪ್ರಕ್ರಿಯೆ ನಡೆಯಲಿದೆ. ಬಳಿಕ ಸಾವಿರಾರು ಭಕ್ತರು ರಥವನ್ನು ಸಿದ್ದನಾಯಕ ವೃತ್ತದವರೆಗೂ ಎಳೆಯುವ ಮೂಲಕ ಭಕ್ತಿ ಭಾವವನ್ನು ಅರ್ಪಿಸುತ್ತಾರೆ.

ಬುಡಕಟ್ಟು ಕಾಡುಗೊಲ್ಲರ ಆರಾಧ್ಯದೈವನಾದ ಪಶುಪಾಲಕ ವೀರಕರಿಯಣ್ಣ ದೇವರು ಬರುವವರೆಗೂ ಶ್ರೀ ತೇರು ತೆರುಮಲ್ಲೇಶ್ವರನ ರಥ ಮುಂದಕ್ಕೆ ಚಲಿಸುವುದಿಲ್ಲ. ಹಿರಿಯೂರು ತಾಲೂಕಿನ ಬೀರನಹಳ್ಳಿ ಮುಜರೆ ಗ್ರಾಮದ ಕರಿಯ್ಯನಹಟ್ಟಿ ಗ್ರಾಮದ ವೀರ ಕರಿಯಣ್ಣ ದೇವರು ತೇರುಮಲ್ಲೇಶ್ವರ ಆಸ್ಥಾನಕ್ಕೆ ಬಂದಾಗ ರಥೋತ್ಸವ ವಿಜೃಂಭಣೆಯಿಂದ ಜರುಗುವುದು ಜಾತ್ರೆಯ ವಿಶೇಷವಾಗಿದೆ.

ಇದನ್ನೂ ಓದಿ: ರೈತರ ಖಾತೆಗೆ ಬೆಳೆವಿಮೆ | ವಿಮಾ ಕಂಪನಿಗೆ 21 ದಿನ ಡೆಡ್‌ಲೈನ್‌

ಈ ಹಿಂದೆ ಹೊಸದುರ್ಗ ತಾಲೂಕಿನ ಯಗಟಿ ಎಂಬಲ್ಲಿ ಮಲ್ಲೇಶ್ವರಸ್ವಾಮಿ ರಥೋತ್ಸವ ನಡೆಯುತ್ತಿದ್ದಾಗ ಭೀಕರ ಗಾಳಿ, ಮಳೆ ಆರಂಭವಾಗಿ ವೇದಾವತಿ ನದಿಯ ಪ್ರವಾಹದಲ್ಲಿ ರಥ ಕೊಚ್ಚಿ ಬರುತ್ತದೆ. ನದಿಯಲ್ಲಿ ಕೊಚ್ಚಿ ಬಂದಂತಹ ರಥ ಇಲ್ಲಿನ ರಾಜರ ಗಮನಕ್ಕೆ ಬರುತ್ತದೆ. ಆನೆ, ಕುದುರೆ ಮೂಲಕ ರಥವನ್ನು ಮೇಲೆತ್ತುವ ಕಾರ್ಯ ನಡೆಯುತ್ತದೆ. ಆದರೆ ರಥ ಮೇಲಕ್ಕೆ ಬರುವುದಿಲ್ಲ. ರಥವನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾಗ ಪಶುಪಾಲಕನಾಗಿದ್ದ ವೀರ ಕರಿಯಣ್ಣ ನೋಡಿ ಅಪ್ಪಣೆ ಕೊಟ್ಟರೆ ನಾನು ರಥವನ್ನು ದಡಕ್ಕೆ ಎಳೆಯುತ್ತೇನೆಂದು ಕೇಳಿದಾಗ ರಾಜರು ಅಪ್ಪಣೆ ಕೊಡುತ್ತಾರೆ. ನಂತರ ವೀರ ಕರಿಯಣ್ಣನು ಎರಡು ಹೋರಿಗಳ ಮೂಲಕ ಹೆಗಲ ಮೇಲೆ ಕಂಬಳಿಯನ್ನು ತೆಗೆದು ಹಗ್ಗವನ್ನಾಗಿ ಮಾಡಿ ರಥಕ್ಕೆ ಕಟ್ಟಿ ಯಾರು ನೋಡದ ಮಧ್ಯರಾತ್ರಿ ಸಮಯದಲ್ಲಿ ದೇವಸ್ಥಾನದ ಮುಂದಕ್ಕೆ ರಥವನ್ನು ಎಳೆದು ತಂದು ನಿಲ್ಲಿಸುತ್ತಾನೆ ಎನ್ನುವ ಪ್ರತೀತಿ ಇದೆ.

ಬೆಳಗ್ಗೆ ರಥವನ್ನು ನೋಡಿದ ಭಕ್ತರು ಅಚ್ಚರಿ ಪಡುತ್ತಾರೆ. ಈ ಹಿಂದೆ ತೇರುಮಲ್ಲೇಶ್ವರ ದೇವಸ್ಥಾನವನ್ನು ಕಟ್ಟುವ ಸಂದರ್ಭದಲ್ಲಿ ತಳಪಾಯ ಹಾಕುವಾಗ ಪೂಜಾ ಕಾರ್ಯಕ್ರಮದಲ್ಲಿ ಹಾಲುತುಪ್ಪ ಬಿಡುವ ಸಂಪ್ರದಾಯವಿರುತ್ತು. ಬುಡಕಟ್ಟು ಕಾಡುಗೊಲ್ಲರ ವೀರಗಾರನಾದ ಕರಿಯಣ್ಣ ಒಬ್ಬ ಪೂಜಾರಿ ಹಾಗೂ ಅಪಾರ ದೈವ ಭಕ್ತ ಉಳ್ಳವನಾಗಿದ್ದನು. ಪಶುಪಾಲಕನಾದ ವೀರ ಕರಿಯಣ್ಣ ದೇಗುಲದ ಅಡಿಪಾಯಕ್ಕೆ ಹಾಲನ್ನ ಮೀಸಲಾಗಿ ತಂದು ದೇವಸ್ಥಾನದ ಅಡಿಪಾಯಕ್ಕೆ ಹಾಕುತ್ತಾನೆ. ಅಂದಿನಿಂದ ಇಂದಿನವರೆಗೂ ಕರಿಯಣ್ಣ ಮುಂದಾಳತ್ವದಲ್ಲಿ ರಥೋತ್ಸವ ನಡೆಯುತ್ತದೆ ಎನ್ನುತ್ತಾರೆ ಹಿರಿಯರು.

ಕೆಂಚಪ್ಪ ನಾಯಕ ಮಾಯಸಂದ್ರ ಗ್ರಾಮದವರಾಗಿದ್ದು, ವೀರ ಕರಿಯಣ್ಣ ಪಕ್ಕದ ಬೀರೆನಹಳ್ಳಿ ಕರಿಯ್ಯನಹಟ್ಟಿ ಗ್ರಾಮದವರು ಆಗಿದ್ದರು. ಇವರಿಬ್ಬರಿಗೂ ಅವಿನಾಭಾವ ಸಂಬಂಧ ಇತ್ತು ಎನ್ನಲಾಗಿದೆ. ಪಾಳೇಗಾರ ವಂಶಸ್ಥ ರಾಜ ಕೆಂಚಪ್ಪ ನಾಯಕ 1446ರಲ್ಲಿ ತೇರುಮಲ್ಲೇಶ್ವರ ಸ್ವಾಮಿ ದೇಗುಲವನ್ನು ನಿರ್ಮಿಸಲಾಗಿತ್ತು. ಇದರ ಮೂಲವಿಗ್ರಹ ಕಾಶಿಯಲ್ಲಿ ಇರುವಂತೆ ದಕ್ಷಿಣ ದಿಕ್ಕಿಗೆ ಮುಖ ಮಾಡಿದ ಕಾರಣಕ್ಕೆ ದೇಗುಲವನ್ನು ದಕ್ಷಿಣ ಕಾಶಿ ಎಂದು ಕರೆಯಲಾಗುತ್ತದೆ.

ಶ್ರೀ ಶೈಲ ಮಲ್ಲಿಕಾರ್ಜುನ ಪರಮ ಭಕ್ತೆಯಾಗಿದ್ದ ಹೇಮರೆಡ್ಡಿ ಮಲ್ಲಮ್ಮ ತನ್ನ ಇಳಿ ವಯಸ್ಸಿನಲ್ಲಿ ಶ್ರೀ ಶೈಲಕ್ಕೆ ನಡೆದುಕೊಂಡು ಹೋಗಿ ದರ್ಶನ ಮಾಡಿ ಬರುವುದು ಕಷ್ಟವಾಗಿತ್ತು. ಈ ಕಾರಣಕ್ಕೆ ಆಕೆಯ ಕನಸಿನಲ್ಲಿ ಮಲ್ಲಿಕಾರ್ಜುನ ಸ್ವಾಮಿ ಮಾತು ಕೊಟ್ಟಿದ್ದರ ಪರಿಣಾಮವಾಗಿ ಮಲ್ಲೇಶ್ವರ ಸ್ವಾಮಿ ದೇಗುಲ ನಿರ್ಮಾಣವಾಗಿದೆ ಎಂಬುದು ಇಲ್ಲಿನ ಜನರ ನಂಬಿಕೆಯಾಗಿದೆ.

ಇದನ್ನೂ ಓದಿ: ತೀವ್ರ ಸ್ವರೂಪಕ್ಕೆ ಬಯಲುಸೀಮೆ ‘ಭದ್ರಾ’ ಹೋರಾಟ | ಸರತಿಯಲ್ಲಿ ಬಂದ್‌ | ಜನರಿಂದ ಸ್ವಯಂ ಪ್ರೇರಿತ ಬೆಂಬಲ

ಹಿರಿಯೂರಿನಲ್ಲಿ ನೆಲೆಸಿದ್ದ ಮಲ್ಲಮ್ಮ ಆಗಾಗ ಕಾಲ್ನಡಿಗೆಯಲ್ಲಿ ಶ್ರೀಶೈಲಕ್ಕೆ ಹೋಗಿ ತನ್ನ ಇಷ್ಟದೈವ ಚೆನ್ನಮಲ್ಲಿಕಾರ್ಜುನನ ದರ್ಶನ ಮಾಡಿ ಬರುತ್ತಿದ್ದಳು. ಒಮ್ಮೆ ಹೀಗೆಯೇ ಶ್ರೀಶೈಲಕ್ಕೆ ಪ್ರಯಾಣಿಸುವಾಗ ದಣಿವಾಗಿ ಎಲೆ, ಅಡಿಕೆ ಹಾಕಿಕೊಳ್ಳಲು ಬಯಸಿದಳು. ಅಡಿಕೆ ಪುಡಿ ಮಾಡಿಕೊಳ್ಳಲು ಕಲ್ಲೊಂದನ್ನು ಎತ್ತಿಕೊಂಡು ಪುಡಿಮಾಡಿ ನಂತರ ಬಿಸಾಡುತ್ತಾರೆ. ಮುಂದೆ ದಾರಿಯಲ್ಲಿ ಎರಡು ಮೂರು ಬಾರಿ ಅಡಿಕೆ ಪುಡಿ ಮಾಡುವಾಗಲೂ ಅದೇ ಕಲ್ಲು ಸಿಕ್ಕಿದ್ದಲ್ಲದೆ, ಮನೆಗೆ ಮರಳಿ ಬಂದಾಗಲೂ ತನ್ನ ಅಡಿಕೆ ಚೀಲದಲ್ಲಿ ಆ ಕಲ್ಲು ಗೋಚರಿಸುತ್ತದೆ. ಅಚ್ಚರಿಗೊಂಡ ಮಲ್ಲಮ್ಮ ಅದನ್ನು ಹೊರಗೆ ಬಿಸಾಡುತ್ತಾರೆ. ನಂತರ ಅದು ಮನೆಯ ಒಳಗಿದ್ದ ಒಳ ಕಲ್ಲಿನಲ್ಲಿ ಬಂದು ಕುಳಿತುಕೊಳ್ಳುತ್ತದೆ.

Terumalleswaraswamy Jatra Mahotsava
ತೇರುಮಲ್ಲೇಶ್ವರಸ್ವಾಮಿ ಬ್ರಹ್ಮ ರಥೋತ್ಸವ. (Image used for representational purpose only)

ಚೆನ್ನಮಲ್ಲಿಕಾರ್ಜುನನ ಸ್ಮರಣೆಯಲ್ಲಿ ಮಲಗಿದ್ದ ಮಲ್ಲಮ್ಮನಿಗೆ ರಾತ್ರಿ ಕನಸಿನಲ್ಲಿ ಕಾಣಿಸಿಕೊಂಡ ದೇವರು ‘ಇನ್ನು ನಿನಗೆ ವಯಸ್ಸಾಯಿತು. ಶ್ರೀಶೈಲಕ್ಕೆ ಬರುವ ತೊಂದರೆ ತೆಗೆದುಕೊಳ್ಳಬೇಡ. ಕಲ್ಲಿನ ರೂಪದಲ್ಲಿ ಬಂದವನು ನಾನೇ ಇಲ್ಲಿ ನನ್ನನ್ನು ಪೂಜಿಸು’ ಎಂದು ಹೇಳಿ ಮಾಯವಾದಂತೆ. ಕನಸಿನಿಂದ ಎಚ್ಚರಗೊಂಡು ನೋಡಿದಾಗ ಒಳಕಲ್ಲಿನಲ್ಲಿ ಇದ್ದ ಕಲ್ಲು ಲಿಂಗ ವಾಗಿತ್ತು. ಈ ಘಟನೆ ನಂತರ ಮಲ್ಲಮ್ಮನ ಮನೆಯೇ ಮಲ್ಲೇಶ್ವರ ದೇಗುಲ ವಾಯಿತು ಎಂಬ ಪ್ರತೀತಿ ಇದೆ.

ಮಲ್ಲೇಶ್ವರ ದೇಗುಲ ಉದ್ಭವವಾದ ಕೆಲವು ವರ್ಷಗಳ ಬಳಿಕ ನೆರೆಯ ಹೊಸದುರ್ಗ ತಾಲೂಕಿನ ಯಗಟಿ ಎಂಬಲ್ಲಿ ಮಲ್ಲೇಶ್ವರ ಸ್ವಾಮಿ ರಥೋತ್ಸವ ನಡೆಯುತ್ತಿತ್ತು. ಆಗ ಭೀಕರ ಗಾಳಿ, ಮಳೆ ಆರಂಭವಾಗಿ ವೇದಾವತಿ ನದಿಯ ಪ್ರವಾಹದಲ್ಲಿ ರಥ ಕೊಚ್ಚಿಹೋಗಿತ್ತು. ಕೊಚ್ಚಿಹೋಹ ಮಲ್ಲೇಶ್ವರನ ರಥ ಹಿರಿಯೂರಿನ ಮಲ್ಲೇಶ್ವರ ದೇವಸ್ಥಾನದ ಹತ್ತಿರ ಬಂದು ನಿಂತಿತ್ತು. ಆಗ ಭಕ್ತರು ರಥವನ್ನು ಎತ್ತಿ ದೇವಸ್ಥಾನ ಹತ್ತಿರಕ್ಕೆ ತಂದಿದ್ದರು. ಅಂದಿನಿಂದ ಮಲ್ಲೇಶ್ವರನನ್ನು ತೇರುಮಲ್ಲೇಶ್ವರ ಎಂದು ಕರೆಯಲಾಗುತ್ತಿದೆ. ಆಗಿನಿಂದಲೂ ಪ್ರತಿವರ್ಷ ಮಾಘ ಮಾಸದ ಮಾಘ ನಕ್ಷತ್ರದಲ್ಲಿ ಸ್ವಾಮಿಯ ರಥೋತ್ಸವ ನಡೆಯುತ್ತದೆ. ಅಲ್ಲದೆ ಅಂದೇ ಚಂದ್ರಮೌಳೇಶ್ವರ ಉಮಾಮಹೇಶ್ವರ ಸ್ವಾಮಿಗಳ ರಥೋತ್ಸವವೂ ನಡೆಯುತ್ತದೆ.

ತೇರುಮಲ್ಲೇಶ್ವರ ರಥೋತ್ಸವ ನಡೆದು ಎರಡು ದಿನಗಳ ನಂತರ ಕರ್ಪೂರದ ಆರತಿ ಪೂಜಾ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯುತ್ತದೆ. ಈ ಕಾರ್ಯಕ್ರಮದ ಮೈಜುಮ್ಮೆನ್ನಿಸುವ ದೃಶ್ಯ ನೋಡುಗರ ಮನಸೂರೆಗೊಳ್ಳುತ್ತದೆ. ಕರ್ಪೂರದಾರತಿ ಕಾರ್ಯಕ್ರಮ ಮಹಿಳೆಯರಿಗೆ ವಿಶೇಷವಾದ ಹಬ್ಬವಾಗಿದೆ. ದೇಗುಲದ ಒಳ ಆವರಣದಲ್ಲಿ ಗರ್ಭಗುಡಿಯ ಮುಂಭಾಗದ 48 ಅಡಿಯ ಕಲ್ಲುಕಂಬವಿದ್ದು, ಕಂಬದ ಮೇಲೆ 8 ಅಡಿ ಎತ್ತರದ ಬಸವ ಮಂಟಪದಲ್ಲಿ ಚಿಕ್ಕ ನಂದಿ ವಿಗ್ರಹವಿದೆ. ಇದಕ್ಕೆ ಆರು ಅಡಿ ಉದ್ದವಿರುವ ಕಬ್ಬಿಣದ ಸೌಟುಗಳನ್ನು ಜೋಡಿಸಲಾಗಿದೆ.

ಕರ್ಪೂರದಾರತಿಯ ದಿನ ಒಟ್ಟಾರೆ 56 ನುಣುಪಾದ ಕೆತ್ತನೆಯಿಂದ ಕೂಡಿರುವ ದೀಪಸ್ತಂಭದ ಮೇಲೆ ಏರಿ ಬತ್ತಿ ಎಣ್ಣೆ ಹಾಕಿ ಕರ್ಪೂರ ಬಳಸಿ ದೀಪ ಹಚ್ಚಲಾಗುತ್ತದೆ. ಆಂಧ್ರದಿಂದ ತರಿಸಿದ ದೀಪಸ್ತಂಭ ಸುಮಾರು 56 ಅಡಿ ಎತ್ತರವಿದ್ದು, ಇದನ್ನು ಆಂಧ್ರಪ್ರದೇಶದಿಂದ ಹಿರಿಯೂರಿಗೆ ತರುವಾಗ ಅಂಬಲಗೆರೆ ಗ್ರಾಮದ ಬಳಿ ಬಿದ್ದಿತ್ತು. ಆಗ ಈ ಸ್ತಂಭ ಎರಡು ಹೊಳಾಯಿತು ಎಂದು ಹಿರಿಯರು ಹೇಳುತ್ತಿದ್ದಾರೆ. ಅದರಲ್ಲಿ ಉದ್ದವಿದ್ದ ಕಂಬವನ್ನು ಹಿರಿಯೂರಿಗೆ ತಂದು ಮತ್ತೊಂದು ಭಾಗವನ್ನು ಅದೇ ಗ್ರಾಮದ ರಂಗನಾಥಸ್ವಾಮಿ ದೇಗುಲದ ಮುಂದೆ ಸ್ಥಾಪಿಸಲಾಯಿತು ಎಂದು ಹಿರಿಯರು ಹೇಳುತ್ತಿದ್ದಾರೆ.

ಹಿಂದೆ ನಾಡನ್ನು ಆಳುತ್ತಿದ್ದ ದೊರೆಗಳು ಕರ್ಪೂರದ ಆರತಿ ಕಾರ್ಯಕ್ರಮವನ್ನು ಪುರುಷರ ಶೌರ್ಯದ ಪ್ರತೀಕವನ್ನಾಗಿ ಪರಿಗಣಿಸಿದ್ದರು. ಧೀರ ಪುರುಷರು 56 ಅಡಿ ಎತ್ತರದ ದೀಪಸ್ತಂಭವನ್ನು ಜೋರಾಗಿ ಏರಿ ಕರ್ಪೂರ ಹಚ್ಚಿ ನೆರೆದಿದ್ದ ಹೆಂಗಳೆಯರ ಮನ ಗೆಲ್ಲುವುದು ವಾಡಿಕೆಯಾಗಿತ್ತು. ಕಾರ್ತಿಕ ಮಾಸ ಹಾಗೂ ಜಾತ್ರೆಯ ಸಂದರ್ಭದಲ್ಲಿ ಸೌಟುಗಳಲ್ಲಿ ದೀಪ ಹಚ್ಚುವ ಸಂಪ್ರದಾಯ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ದೀಪದ ಬೆಳಕು ರಾತ್ರಿ ವೇಳೆ ಮೂರು ಕಿಲೋ ಮೀಟರ್ ದೂರದವರೆಗೂ ಕಾಣುತ್ತದೆ. ಅಲ್ಲದೇ ಹಿರಿಯೂರು ತಾಲೂಕು ಸೇರಿದಂತೆ ಚಿತ್ರದುರ್ಗ, ಚಳ್ಳಕೆರೆ, ದಾವಣಗೆರೆ, ಹೊಸದುರ್ಗ ಮತ್ತಿತರರ ಭಾಗಗಳಿಂದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ.

ಶ್ರೀ ತೇರುಮಲ್ಲೇಶ್ವರಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ ಭಕ್ತಾಧಿಗಳು ಹಾಗೂ ಸಾರ್ವಜನಿಕರು ತನು, ಮನ, ಧನ, ಧಾನ್ಯರೂಪದಲ್ಲಿ ಸಹಕರಿಸುವುದು, ಸಾರ್ವಜನಿಕರು ಜಾತ್ರಾ ಮಹೋತ್ಸವದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಎಂದು ಹಿರಿಯೂರು ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Brahma RahotsavaDakshina KashiHiriyurTehsildarTeru Malleswarತಹಶೀಲ್ದಾರ್ತೇರು ಮಲ್ಲೇಶ್ವರದಕ್ಷಿಣ ಕಾಶಿಬ್ರಹ್ಮ ರಥೋತ್ಸವಹಿರಿಯೂರು
Share This Article
Facebook Email Print
Previous Article ಫೆ.11ರಂದು ಶ್ರೀ ಗಂಗಾಂಬಿಕಾ ಸಮುದಾಯ ಭವನ ಉದ್ಘಾಟನೆ ‌| ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಸಾನಿಧ್ಯ
Next Article ಭಗೀರಥ ಶ್ರೀಗಳ ರಜತ ಮಹೋತ್ಸವಕ್ಕೆ ಕ್ಷಣಗಣನೆ | ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ
Leave a Comment

Leave a Reply Cancel reply

Your email address will not be published. Required fields are marked *

ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
H1N1
ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
Life Style
hair loss in men
ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
Life Style
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up