By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲು

ಅಡಕೆ ಧಾರಣೆ

ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲು

chitradurganews.com
Last updated: 14 February 2024 17:11
chitradurganews.com
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 14 FEBRUARY 2024

ಚಿತ್ರದುರ್ಗ: ನಮ್ಮ ದೇಶದಲ್ಲಿ ಕರ್ನಾಟಕದಲ್ಲಿ ಶೇ.79ರಷ್ಟು ಅಡಿಕೆ ಬೆಳೆ ಬೆಳೆಯುತ್ತಿದ್ದು, ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಶಿವಮೊಗ್ಗ ಅಡಿಕೆ ಸಂಶೋಧನಾ ಕೇಂದ್ರ ಮುಖ್ಯಸ್ಥ ಡಾ. ನಾಗರಾಜ್ ಅಡಿವಪ್ಪರ್ ಹೇಳಿದರು.

ಹಿರಿಯೂರಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಈಚೆಗೆ ಜಿಲ್ಲೆಯ ರೈತರಿಗೆ ‘ಅಡಿಕೆ ಬೆಳೆಯ ಸುಧಾರಿತ ಬೇಸಾಯ ತಾಂತ್ರಿಕತೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ಗೊಬ್ಬರ ತಯಾರಿಕೆ’ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: 106 ಜನರಿಗೆ 4.80 ಕೋಟಿ ರೂ. ವಂಚನೆ | ಚಿತ್ರದುರ್ಗ ಜಿಲ್ಲೆಯಲ್ಲಿ ಬಯಲಿಗೆ ಬಂತು ದೊಡ್ಡ ಹಗರಣ

ಅಡಿಕೆ ಬೆಳೆಯನ್ನು ಬೆಳೆಯಲು ನೀರು ಬಸಿದು ಹೋಗುವ ಕೆಂಪು ಮಣ್ಣು ಸೂಕ್ತವಾಗಿದ್ದು, ನೀರು ನಿಲ್ಲುವ ಜೌಗು ಮತ್ತು ಸವಳು ಮಣ್ಣಿನ ಪ್ರದೇಶಗಳು ಅಡಿಕೆಗೆ ಸೂಕ್ತವಲ್ಲ. ಮಣ್ಣಿನ ರಸಸಾರ 6 ರಿಂದ 7 ಸೂಕ್ತ. ಅಡಿಕೆಯನ್ನು 9*9 ಅಡಿ ಅಂತರದಲ್ಲಿ 2*2*2 ಅಡಿ ಅಳತೆಯ ಗುಂಡಿಯಲ್ಲಿ ನಾಟಿ ಮಾಡುವುದು ಸೂಕ್ತ ಎಂದು ತಿಳಿಸಿದ ಅವರು, ಅಡಿಕೆಯಲ್ಲಿ ಅಂತರ ಬೆಳೆಯಾಗಿ ಬಾಳೆ, ವೀಳ್ಯೆದೆಳೆ, ಜಾಯಿಕಾಯಿ ಮತ್ತು ಕರಿಮೆಣಸು ಚಿತ್ರದುರ್ಗ ಜಿಲ್ಲೆಗೆ ಸೂಕ್ತವಾಗಿದೆ ಎಂದು ಹೇಳಿದರು.

ತರಬೇತಿಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ 75 ಕ್ಕೂ ಹೆಚ್ಚು ಆಸಕ್ತ ರೈತರು ಭಾಗವಹಿಸಿದ್ದು
ತರಬೇತಿಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ 75 ಕ್ಕೂ ಹೆಚ್ಚು ಆಸಕ್ತ ರೈತರು ಭಾಗವಹಿಸಿದ್ದು

ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ರೈತರು ಅಡಿಕೆಯನ್ನು ಪ್ರಮುಖ ತೋಟಗಾರಿಕೆ ವಾಣಿಜ್ಯ ಬೆಳೆಯಾಗಿ ಬೆಳೆಯಲು ಆಸಕ್ತಿ ತೋರುತ್ತಿದ್ದು, ಬೆಳೆಯಲ್ಲಿ ಹೆಚ್ಚಿನ ಇಳುವರಿ ಪಡೆಯಲು ಉತ್ತಮ ತಳಿಗಳ ಆಯ್ಕೆ, ಬೇಸಾಯ ಕ್ರಮ, ಪೋಷಕಾಂಶಗಳ ನಿರ್ವಹಣೆ, ರೋಗ ಮತ್ತು ಕೀಟಗಳ ನಿರ್ವಹಣೆಯ ತಾಂತ್ರಿಕ ಮಾಹಿತಿ ಅಗತ್ಯವಿದೆ.

ಇದನ್ನೂ ಓದಿ: ರಾಗಿ ಖರೀಧಿಗೆ ನೊಂದಣಿ ಪ್ರಾರಂಭ | ಅವಧಿ ವಿಸ್ತರಣೆಗೆ ರೈತರ ಆಗ್ರಹ

ಇದಲ್ಲದೆ ರೈತರಿಗೆ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ಮಾಡುವ ವಿಧಾನದ ಮಾಹಿತಿಯೊಂದಿಗೆ ಪ್ರಾತ್ಯಕ್ಷಿಕೆ ಮಾಡುವುದು ಸಹ ಈ ತರಬೇತಿಯ ಪ್ರಮುಖ ವಿಷಯವಾಗಿದ್ದು, ಇದರಿಂದ ಅಡಿಕೆ ಸಿಪ್ಪೆಯನ್ನು ಎಲ್ಲೆಂದರಲ್ಲೆ ಬಿಸಾಕುವುದು ಹಾಗೂ ಇದರಿಂದಾಗುವ ಅವಘಡಗಳನ್ನು ತಪ್ಪಿಸಲು ಮತ್ತು ರೈತರು ಸ್ವತಃ ತಮ್ಮ ತೋಟಕ್ಕೆ ಬೇಕಾಗುವ ಕಾಂಪೋಸ್ಟ್ ಗೊಬ್ಬರ ಮಾಡಿಕೊಳ್ಳಬಹುದಾಗಿರುವುದರಿಂದ ಈ ತರಬೇತಿಯು ಸಹಕಾರಿಯಾಗಲಿದೆ ಎಂದರು.

ತೋಟಗಾರಿಕೆ ತಜ್ಞ ಡಾ.ಸುದೀಪ್ ಮಾತನಾಡಿ, ಅಡಿಕೆಯ ವಿವಿಧ ತಳಿಗಳು ಮತ್ತು ಅವುಗಳ ವಿಶೇಷ ಗುಣಗಳು, ಸಸ್ಯಾಭಿವೃದ್ದಿಯ ಕ್ರಮಗಳು, ಪೋಷಕಾಂಶಗಳ ನಿರ್ವಹಣೆ, ಹಸಿರೆಲೆ ಗೊಬ್ಬರದ ನಿರ್ವಹಣೆ, ಹಾಗೂ ನೀರು ಮತ್ತು ಬಸಿಗಾಲುವೆಯ ನಿರ್ವಹಣೆ ಕುರಿತು ತಿಳಿಸಿದರು.

ಇದನ್ನೂ ಓದಿ: ಅಡಿಕೆ ಧಾರಣೆ | ಫೆಬ್ರವರಿ 13 | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟಿದೆ

ಕೀಟಶಾಸ್ತ್ರ ತಜ್ಞೆ ಡಾ.ಸ್ವಾತಿ ಮಾತನಾಡಿ, ಅಡಿಕೆಯಲ್ಲಿ ಬರುವ ಪ್ರಮುಖ ರೋಗಗಳಾದ ಸುಳಿ ಕೊಳೆ, ಹಿಂಗಾರು ಒಣಗುವ ರೋಗ, ದುಂಡಾಣು ಎಲೆ ಪಟ್ಟಿ ರೋಗ, ಅಣಬೆ ರೋಗ, ಎಲೆ ಚುಕ್ಕಿ ಮತ್ತು ಹಿಡಿಮುಂಡಿಗೆ ಹಾಗೂ ಪ್ರಮುಖ ಕೀಟಗಳಾದ ನುಸಿ, ರುಗೋಸ್ ಸುರಳಿ ಸುತ್ತುವ ಬಿಳಿನೊಣ, ಸುಳಿ ತಿಗಣೆ, ಹಿಂಗರು ತಿನ್ನುವ ಹುಳುಗಳ ಹಾನಿಯ ಲಕ್ಷಣ ಮತ್ತು ಅವುಗಳ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಆವರಣದಲ್ಲಿ ರೈತರಿಗೆ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ಗೊಬ್ಬರ ತಯಾರಿಕೆಯ ವಿಧಾನವನ್ನು ವಿವರಿಸಲಾಯಿತು.

ತರಬೇತಿಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ 75 ಕ್ಕೂ ಹೆಚ್ಚು ಆಸಕ್ತ ರೈತರು ಭಾಗವಹಿಸಿದ್ದು, ಭಾಗವಹಿಸಿದ ರೈತರಿಗೆ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ಗೊಬ್ಬರ ತಯಾರಿಸಿಕೊಳ್ಳಲು ಉಚಿತವಾಗಿ ಕಾಂಪೋಸ್ಟ್ ಕಲ್ಚರ್‍ನ್ನು ನೀಡಲಾಯಿತು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:arecanut FarmingChitradurgaCompostIndiaKarnatakaಅಡಿಕೆ ಕೃಷಿಕರ್ನಾಟಕಕಾಂಪೋಸ್ಟ್ಚಿತ್ರದುರ್ಗಭಾರತ
Share This Article
Facebook Email Print
Previous Article SP DHARMENDAR KUMAR MEENA 106 ಜನರಿಗೆ 4.80 ಕೋಟಿ ರೂ. ವಂಚನೆ | ಚಿತ್ರದುರ್ಗ ಜಿಲ್ಲೆಯಲ್ಲಿ ಬಯಲಿಗೆ ಬಂತು ದೊಡ್ಡ ವಂಚನೆ ಪ್ರಕರಣ
Next Article arecanut price list ಅಡಿಕೆ ಧಾರಣೆ | ಫೆಬ್ರವರಿ 14 | ಯಾವ ಅಡಿಕೆಯ ಬೆಲೆ ಎಷ್ಟಿತ್ತು ಗೊತ್ತಾ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up