
CHITRADURGA NEWS | 20 FEBRUARY 2024
ಚಿತ್ರದುರ್ಗ: ನಗರದ ತರಾಸು ರಂಗಮಂದಿರದಲ್ಲಿ ಫೆಬ್ರವರಿ 22 ಗುರುವಾರ ಬೆಳಗ್ಗೆ 11 ಗಂಟೆಗೆ ಲೇಖಕ ಬರಗೂರು ರಾಮಚಂದ್ರಪ್ಪ ಅವರು ರಚಿಸಿರುವ ‘ಕಾಗೆ ಕಾರುಣ್ಯದ ಕಣ್ಣು’ ಕೃತಿಯ ಮೂರನೇ ಆವೃತ್ತಿ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಭೂಸೇನಾ ನೇಮಕಾತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗದ ಗೆಳೆಯರ ಬಳಗದಿಂದ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಸಾಹಿತಿ ಡಾ.ರಾಜಪ್ಪ ದಳವಾಯಿ ಕೃತಿಯ ಜನಾರ್ಪಣೆ ಮಾಡುವರು. ಲೇಖಕಿ ಡಾ.ತಾರಿಣಿ ಶುಭದಾಯಿನಿ ಕೃತಿ ಕುರಿತು ಮಾತನಾಡುವರು.
ಅತಿಥಿಗಳಾಗಿ ಎಸ್ಆರ್ಎಸ್ ವಿದ್ಯಾಸಂಸ್ಥೆಯ ಮುಖ್ಯಸ್ಥ ಬಿ.ಎ.ಲಿಂಗಾರೆಡ್ಡಿ, ಬಾಪೂಜಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಕೆ.ಎಂ.ವೀರೇಶ್, ಮಹಾರಾಣಿ ಕಾಲೇಜು ಮುಖ್ಯಸ್ಥರಾದ ಪ್ರೊ.ಸಂದೀಪ್, ಕಾಂಗ್ರೆಸ್ ಮುಖಂಡರಾದ ಮೆಹಬೂಬ್ ಪಾμÁ, ಜಿ.ಎಸ್.ಮಂಜುನಾಥ್, ಪಿ.ರಘು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಓ.ಪರಮೇಶ್ವರಪ್ಪ ಭಾಗವಹಿಸುವರು.
ಇದನ್ನೂ ಓದಿ: ಫೆಬ್ರವರಿ 20 ರಿಂದ 1 ತಿಂಗಳ ಕಾಲ ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನೀರು
ಕೃತಿಯ ಲೇಖಕ ಪ್ರೊ.ಬರಗೂರು ರಾಮಚಂದ್ರಪ್ಪ, ನಾಡೋಜ ಡಾ.ಬರಗೂರು ಪ್ರತಿμÁ್ಠನದ ಪ್ರಧಾನ ಕಾರ್ಯದರ್ಶಿ ಡಾ.ಸುಂದರರಾಜ ಅರಸು ವಿಶೇಷ ಉಪಸ್ಥಿತಿವಹಿಸುವರು.
ಕಾರ್ಯಕ್ರಮದ ಆಯೋಜಕರಾದ ಚಿಕ್ಕಪ್ಪನಹಳ್ಳಿ ಷಣ್ಮುಖ, ಡಾ.ಜೆ.ಕರಿಯಪ್ಪ ಮಾಳಿಗೆ, ಅಹೋಬಲಪತಿ, ಗೋವಿಂದಪ್ಪ ಗೌನಹಳ್ಳಿ, ಗೋಪಾಲಸ್ವಾಮಿ ನಾಯಕ, ವಿನಾಯಕ್ ತೊಡರನಾಳ್, ಸಿ.ರಾಜಶೇಖರ್ ಉಪಸ್ಥಿತರಿರುವರು ಎಂದು ಗೆಳೆಯರ ಬಳಗ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: ಅಡಿಕೆ ಸಿಪ್ಪೆಯಿಂದ ಗೊಬ್ಬರ ತಯಾರಿಸುವುದು ಹೇಗೆ ಗೊತ್ತಾ


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
