ಮುಖ್ಯ ಸುದ್ದಿ
ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಮಾಧ್ಯಮಗಳ ಸಹಕಾರ ಅಗತ್ಯ| ಜಿಲ್ಲಾಧಿಕಾರಿ ಟಿ.ವೆಂಕಟೇಶ್


CHITRADURGA NEWS | 23 FEBRUARY 2024
ಚಿತ್ರದುರ್ಗ: ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಮಾಧ್ಯಮಗಳ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣೆ ಅಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮಾದರಿ ನೀತಿ ಸಂಹಿತೆ ಹಾಗೂ ಮಾಧ್ಯಮಗಳ ಹೊಣೆಗಾರಿಕೆ ಕುರಿತಂತೆ ಮಾಧ್ಯಮ ಪ್ರತಿನಿಧಿಗಳಿಗೆ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಇದನ್ನೂ ಓದಿ: ಗ್ರಾನೈಟ್ ತುಂಬಿದ್ದ ಲಾರಿಗೆ ಈಚರ್ ಡಿಕ್ಕಿ| ಗಂಭೀರ ಗಾಯಗೊಂಡಿದ್ದ ಚಾಲಕ ಸಾವು
ಚುನಾವಣೆ ಕಾರ್ಯವನ್ನು ಸುಗಮವಾಗಿ ನಿರ್ವಹಿಸಲು ಹಾಗೂ ಮಾಧ್ಯಮಗಳೊಂದಿಗೆ ಸಮನ್ವಯಕ್ಕಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತ್ಯೇಕ ಘಟಕ ತೆರೆಯಲಾಗುವುದು. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಭೌಗೋಳಿಕ ವ್ಯಾಪ್ತಿ ದೊಡ್ಡದಿದೆ. ತುಮಕೂರು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳು ಚಿತ್ರದುರ್ಗ ಲೋಕಸಭಾ ಕ್ಷೇತಕ್ಕೆ ಸೇರುತ್ತವೆ.
ಮಾಧ್ಯಮಗಳು ತಮ್ಮ ಹೊಣೆಗಾರಿಕೆ ಅರಿತು ಯಶಸ್ವಿಯಾಗಿ ಚುನಾವಣೆ ನಡೆಸಲು ಸಹಕಾರ ನೀಡಬೇಕು. ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಚುನಾವಣೆ ಜಾಹೀರಾತುಗಳನ್ನು ಪ್ರಕಟಿಸುವ ಮುನ್ನ ಪ್ರಮಾಣೀಕರಣ ಪಡೆದುಕೊಳ್ಳಬೇಕು.
ಇದನ್ನೂ ಓದಿ: ಚಿತ್ರದುರ್ಗ ಎಬಿವಿಪಿಯ ಬಾಲಪ್ಪ| ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ
ಮಾಧ್ಯಮಗಳು ಸುಳ್ಳು, ದ್ವೇಷ ಬಿತ್ತುವ ಹಾಗೂ ಪೇಯ್ಡ್ ನ್ಯೂಸ್ ಪ್ರಕಟಿಸಬಾರದು. ಇವುಗಳು ಮಾದರಿ ನೀತಿಯ ಸ್ಪಷ್ಟ ಉಲಂಘನೆಯಾಗುತ್ತವೆ. ಇದನ್ನು ಚುನಾವಣೆ ಆಯೋಗ ಗಂಭೀರವಾಗಿ ಪರಿಗಣಿಸುತ್ತದೆ. ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಿಗೆ ಪ್ರಜಾಪ್ರಾತಿನಿಧ್ಯ ಕಾಯ್ದೆ ಅನ್ವಯ ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಜಿಲ್ಲಾ ಮಾಸ್ಟರ್ ತರಬೇತುದಾರ ಹಾಗೂ ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ಚುನಾವಣೆ ಮಾಧ್ಯಮ ಘಟಕ, ಮಾಧ್ಯಮ ಪ್ರಮಾಣೀಕರಣ ಹಾಗೂ ನಿಗಾ ಸಮಿತಿ, ಪೇಯ್ಡ್ ನ್ಯೂಸ್, ಸಾಮಾಜಿಕ ಮಾಧ್ಯಮಗಳ ಪಾತ್ರ ಸೇರಿದಂತೆ ಹಲವು ವಿಚಾರಗಳ ಕುರಿತು ಪ್ರಾತ್ಯಕ್ಷತೆಯೊಂದಿಗೆ ತರಬೇತಿ ನೀಡಿದರು.
ಇದನ್ನೂ ಓದಿ: ಪಕ್ಕದ ತೀರ್ಮಾನಕ್ಕೆ ನಾನು ಬದ್ಧ| ಕಾರ್ಯಕರ್ತನಾಗಿರು ಎಂದರೆ ಅದಕ್ಕೂ ಸಿದ್ಧನಿದ್ದೇನೆ| ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಇಓ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ಹೆಚ್.ಜೆ.ಕುಮಾರಸ್ವಾಮಿ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಹಾಗೂ ಜಿಲ್ಲಾ ವೆಚ್ಚ ಉಸ್ತುವಾರು ಕೋಶದ ನೋಡಲ್ ಅಧಿಕಾರಿ ಡಿ.ಆರ್.ಮಧು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಸೇರಿದಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳು ಇದ್ದರು.
