By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಸಿರಿಗೆರೆಗೆ ಬಿ.ವೈ.ವಿಜಯೇಂದ್ರ, ಬಸವರಾಜ ಬೊಮ್ಮಾಯಿ | ಸದ್ಧರ್ಮ ಸಿಂಹಾಸನಾರೋಹಣಕ್ಕೆ ಕ್ಷಣಗಣನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಸಿರಿಗೆರೆಗೆ ಬಿ.ವೈ.ವಿಜಯೇಂದ್ರ, ಬಸವರಾಜ ಬೊಮ್ಮಾಯಿ | ಸದ್ಧರ್ಮ ಸಿಂಹಾಸನಾರೋಹಣಕ್ಕೆ ಕ್ಷಣಗಣನೆ

ಮುಖ್ಯ ಸುದ್ದಿ

ಸಿರಿಗೆರೆಗೆ ಬಿ.ವೈ.ವಿಜಯೇಂದ್ರ, ಬಸವರಾಜ ಬೊಮ್ಮಾಯಿ | ಸದ್ಧರ್ಮ ಸಿಂಹಾಸನಾರೋಹಣಕ್ಕೆ ಕ್ಷಣಗಣನೆ

News Desk Chitradurga News
Last updated: 24 February 2024 12:09
News Desk Chitradurga News
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 24 FEBRUARY 2024
ಚಿತ್ರದುರ್ಗ: ತರಳಬಾಳು ಹುಣ್ಣಿಮೆ ಮಹೋತ್ಸವದ ಸದ್ಧರ್ಮ ಸಿಂಹಾಸನಾರೋಹಣಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಗಣ್ಯತಿಗಣ್ಯರು, ಸಹಸ್ರಾರು ಭಕ್ತರು ಈ ಭವ್ಯ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಸಿರಿಗೆರೆಯಲ್ಲಿ ತೆರೆದ ವಾಹನದಲ್ಲಿ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಗ್ರಾಮ ಸಂಚಾರ ನಡೆಸಲಿದ್ದಾರೆ. ಸಂಜೆ 6 ಗಂಟೆಗೆ ವೇದಿಕೆ ಕಾರ್ಯಕ್ರಮದಲ್ಲಿ ತರಳಬಾಳು ಶ್ರೀ ಸದ್ಧರ್ಮ ಸಿಂಹಾಸನಾರೋಹಣ ನಡೆಯಲಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ | 600 ಜನರ ಮೇಲೆ ದೂರು ದಾಖಲಿಸಿದ ಪೊಲೀಸ್ ಇಲಾಖೆ

ಮುಖ್ಯ ಅತಿಥಿಗಳಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಜಿ.ಎಂ.ಸಿದ್ದೇಶ್ವರ, ಸಾಧು ಸದ್ಧರ್ಮ ಸಂಘದ ಅಧ್ಯಕ್ಷ ಎಚ್.‌ಆರ್‌.ಬಸವರಾಜಪ್ಪ ಭಾಗವಹಿಸಲಿದ್ದಾರೆ.

ಅತಿಥಿಗಳಾಗಿ ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ, ಗುಂಡ್ಲುಪೇಟೆ ಶಾಸಕ ಎಚ್‌.ಎಂ.ಗಣೇಶ್‌ ಪ್ರಸಾದ್‌, ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್‌,ದಿವಾಕರ್‌, ಇಸ್ರೇಲ್‌ನ ಪ್ರೊ.ಗಿಲ್‌ಬೆನ್‌ ಹೆರುಟ್‌ ಉಪಸ್ಥಿತಿವಹಿಸಲಿದ್ದಾರೆ. ಮೈಸೂರು ವಿವಿ ವಿಶ್ರಾಂತ ಕುಲಪತಿ ಕೆ. ಚಿದಾನಂದಗೌಡ, ಹಿರೇಮಗಳೂರು ಕಣ್ಣನ್‌ ಉಪನ್ಯಾಸ ನೀಡಲಿದ್ದಾರೆ.

ಪದ್ಮಶ್ರೀ ಪುರಸ್ಕೃತ ಪಿಯರ್‌ ಸಿಲ್ವನ್‌ ಫಿಲಿಯೋಜಾ ಮತ್ತು ವಸುಂಧರಾ ಫಿಲಿಯೋಜಾ, ಪ್ಯಾರಿಸ್‌, ಹುತಾತ್ಮ ಯೋಧ ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌ ಪಾಲಕರಾದ ಕೆ.ಪಿ.ಅನುರಾಧ ಮತ್ತು ಎಂ. ವೆಂಕಟೇಶ್‌ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ.

ಇದನ್ನೂ ಓದಿ: ರಾಜ್ಯಕ್ಕೆ ‘ಬರ’ ತಂದ ಕಾಂಗ್ರೆಸ್‌ | ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ

ಸಿರಿಗೆರೆ ಅಕ್ಕನ ಬಳಗದಿಂದ ವಚನ ಗೀತೆ, ತರಳಬಾಳು ಕಲಾ ಸಂಘದಿಂದ ಯಕ್ಷಗಾನ, ಮಲ್ಲಕಂಬ, ಭರತನಾಟ್ಯ ಹಾಗೂ ತರಳಬಾಳು ಸಿಬಿಎಸ್‌ಇ ಶಾಲೆ ಮಕ್ಕಳು ವಚನ ನೃತ್ಯ ಪ್ರಸ್ತುತಪಡಿಸಲಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:MahotsavaSirigereSwamijiTaralbaluvijayendraತರಳಬಾಳುಮಹೋತ್ಸವವಿಜಯೇಂದ್ರಸಿರಿಗೆರೆಸ್ವಾಮೀಜಿ
Share This Article
Facebook Email Print
Previous Article ಜಿಯೋ ರೈನ್ ವಾಟರ್ ಬೋರ್ಡ್ ಜಲ ರಕ್ಷಕರು ಪ್ರಾಯೋಜಿತ ಸರಣಿಯ ಬಹುಮಾನ ವಿತರಣಾ ಕಾರ್ಯಕ್ರಮ ನೀರಿನ ಅಸಮರ್ಪಕ ಬಳಕೆಯಿಂದ ಬರ| ಪ್ರತಿಯೊಬ್ಬರು ಜಲಸಂರಕ್ಷಣೆಗೆ ಒತ್ತು ನೀಡಿ| ಮುಖ್ಯಸ್ಥ ಎಂ.ರೇಣುಕಾ ಪ್ರಕಾಶ್
Next Article ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪತ್ನಿ ಮೇಲೆ ಬಿತ್ತು ಸ್ವಾಮಿ ಕಣ್ಣು | ಹಾರಿತು ಪ್ರಾಣ ಪಕ್ಷಿ | ಇಬ್ಬರಿಗೆ ಜೀವಾವಧಿ ಶಿಕ್ಷೆ
Leave a Comment

Leave a Reply Cancel reply

Your email address will not be published. Required fields are marked *

APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಕಡಲೆಕಾಳು, ಶೇಂಗಾ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
ಹೆರಿಗೆಯ ನಂತರ ಬೇಗ ಚೇತರಿಸಿಕೊಳ್ಳಲು ಈ ಲಡ್ಡುಗಳನ್ನು ತಿನ್ನಿರಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up