
CHITRADURGA NEWS | 29 FEBRUARY 2024
ಚಿತ್ರದುರ್ಗ: ತೋಟಗಾರಿಕೆ ಇಲಾಖೆಯ ಅಧೀನದ ಚಿತ್ರದುರ್ಗ ತಾಲ್ಲೂಕಿನ ಹಿರೇಗುಂಟನೂರು ಹೋಬಳಿ ವ್ಯಾಪ್ತಿಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 01 ಅರ್ಜಿ ಸಲ್ಲಿಸಲು ಕೊನೆ ದಿನ.
ತರಬೇತಿ ಅರ್ಜಿಗಳನ್ನು ತೋಟಗಾರಿಕೆ ಉಪನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಿತ್ರದುರ್ಗ ಕಚೇರಿಯಲ್ಲಿ ಅಥವಾ ಇಲಾಖೆಯ ವೆಬ್ಸೈಟ್ https://horticulturedir.karnataka.gov.in ನಲ್ಲಿ ಮಾರ್ಚ್ 01 ರಿಂದ ಮಾರ್ಚ್ 30 ರವರೆಗೆ ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದೆ.
ಆಯ್ಕೆಯಾದ ಶಿಬಿರಾರ್ಥಿಗಳಿಗೆ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ವಸತಿ ಸಹಿತ ತರಬೇತಿ ನೀಡಲಾಗುವುದು. ಮಾಜಿ ಸೈನಿಕ ಅಭ್ಯರ್ಥಿಗಳು ಆಯ್ಕೆಗೊಂಡಲ್ಲಿ ಈ ಅಭ್ಯರ್ಥಿಗಳಿಗೆ ಉಚಿತವಾಗಿ ಕಲಿಕೆಯ ಎಲ್ಲಾ ತರಹದ ಅವಕಾಶಗಳನ್ನು ಕಲ್ಪಿಸಲಾಗುವುದು. ಆದರೆ ವಸತಿ ನಿಲಯದಲ್ಲಿ ವಾಸ್ತವ್ಯದ ವ್ಯವಸ್ಥೆ ಕಡ್ಡಾಯ ಇರುವುದಿಲ್ಲ ಹಾಗೂ ಶಿಷ್ಯವೇತನಕ್ಕೆ ಅವಕಾಶವಿರುವುದಿಲ್ಲ.
ಇದನ್ನೂ ಓದಿ: ನಕಲಿ ಐಎಸ್ಐ ಮಾರ್ಕ್ ಬಳಕೆ| ರೋಲ್ ಪೈಪ್ ಉತ್ಪಾಧನಾ ಘಟಕದ ಮೇಲೆ ಬಿಐಎಸ್ ಅಧಿಕಾರಿಗಳ ದಾಳಿ| ಭಾರೀ ಪ್ರಮಾಣದ ಪೈಪ್ ವಶಕ್ಕೆ
ತರಬೇತಿಗೆ ಒಟ್ಟು 15 ಅಭ್ಯರ್ಥಿಗಳ ಆಯ್ಕೆ ಮಾಡುವ ಗುರಿ ನಿಗಧಿಪಡಿಸಲಾಗಿದೆ. ಮೆರಿಟ್ ಆಧಾರದ ಮೇಲೆ ಸರ್ಕಾರದ ಮೀಸಲಾತಿ ನಿಯಮಾನುಸಾರ ಆಯ್ಕೆ ವಿಧಾನ ನಡೆಯಲಿದೆ.
ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣವಾಗಿರಬೇಕು. ತರಬೇತಿ ಬಯಸುವ ಅಭ್ಯರ್ಥಿಯ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಜಮೀನನ್ನು ಸಾಗುವಳಿ ಮಾಡುತ್ತಿರಬೇಕು. ಮಾಜಿ ಸೈನಿಕರ ತರಬೇತಿಯನ್ನು ಪಡೆಯಲು ಇಚ್ಚಿಸಿದ್ದಲ್ಲಿ ಡಿಸ್ಜಾರ್ಜ್ ಬುಕ್, ಪರ್ಸನಲ್ ಪೆನ್ಶೆನ್ ಆರ್ಡರ್ ಕಾಪಿ, ಎಕ್ಸ್ ಸರ್ವಿಸ್ ಮ್ಯಾನ್ ಐಡಿ ಕಾರ್ಡ್ ಕಾಪಿ, ಇತ್ಯಾದಿಗಳನ್ನ ಸಲ್ಲಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 18 ವರ್ಷ ದಿಂದ 33 ವರ್ಷ, ಮಾಜಿ ಸೈನಿಕರಿಗೆ 33 ವರ್ಷ ದಿಂದ 65 ವರ್ಷ ವಯಸ್ಸಿನವರಾಗಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.1750/-ಗಳ ಮಾಸಿಕ ಶಿಷ್ಯ ವೇತನ ನೀಡಲಾಗುವುದು.
ಇದನ್ನೂ ಓದಿ: ಲೋಕಸಭೆ ಚುನಾವಣೆ| ನಿವೃತ್ತ ಡಿಸಿ ಎಂ.ಕೆ. ಶ್ರೀರಂಗಯ್ಯ ಬಿಜೆಪಿ ಟಿಕೇಟ್ ಆಕಾಂಕ್ಷಿ
ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.30, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಮಾಜಿ ಸೈನಿಕ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.15 ಮೌಲ್ಯದ ಇಂಡಿಯನ್ ಪೋಸ್ಟಲ್ ಆರ್ಡರ್ ಅಥವಾ ಡಿಮ್ಯಾಂಡ್ ಡ್ರಾಫ್ಟ್ (DD)/ K-2 Palyment Challan ಅನ್ನು Deputy Director of Horticulture (ZP) Chitradurga ಹೆಸರಿನಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ತೋಟಗಾರಿಕೆ ಉಪನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಚಿತ್ರದುರ್ಗ ಕಚೇರಿಗೆ ಏಪ್ರಿಲ್ 01ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08194-230895, 9980991048 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
