By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಶಿವರಾತ್ರಿಗೆ ಕಬೀರಾನಂದ ಮಠ | ನವರಾತ್ರಿಗೆ ಮುರುಘಾ ಮಠ | ಶ್ರೀ ಶಿವಲಿಂಗಾನಂದ ಸ್ವಾಮೀಜಿ ಬಣ್ಣನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಶಿವರಾತ್ರಿಗೆ ಕಬೀರಾನಂದ ಮಠ | ನವರಾತ್ರಿಗೆ ಮುರುಘಾ ಮಠ | ಶ್ರೀ ಶಿವಲಿಂಗಾನಂದ ಸ್ವಾಮೀಜಿ ಬಣ್ಣನೆ

ಮುಖ್ಯ ಸುದ್ದಿ

ಶಿವರಾತ್ರಿಗೆ ಕಬೀರಾನಂದ ಮಠ | ನವರಾತ್ರಿಗೆ ಮುರುಘಾ ಮಠ | ಶ್ರೀ ಶಿವಲಿಂಗಾನಂದ ಸ್ವಾಮೀಜಿ ಬಣ್ಣನೆ

chitradurganews.com
Last updated: 2 March 2024 17:43
chitradurganews.com
1 year ago
Share
ಕಬೀರಾನಂದ ಮಠದಲ್ಲಿ ಮಾರ್ಚ್ 4 ರಿಂದ 9 ರವರೆಗೆ 94ನೇ ವರ್ಷದ ಶಿವರಾತ್ರಿ ಮಹೋತ್ಸವ ಹಾಗೂ ಶಿವನಾಮ ಸಪ್ತಾಹ
ಕಬೀರಾನಂದ ಮಠದಲ್ಲಿ ಮಾರ್ಚ್ 4 ರಿಂದ 9 ರವರೆಗೆ 94ನೇ ವರ್ಷದ ಶಿವರಾತ್ರಿ ಮಹೋತ್ಸವ ಹಾಗೂ ಶಿವನಾಮ ಸಪ್ತಾಹ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 2 FEBRUARY 2024

ಚಿತ್ರದುರ್ಗ: ನಗರದ ಕಬೀರಾನಂದ ಮಠದಲ್ಲಿ ಮಾರ್ಚ್ 4 ರಿಂದ 9 ರವರೆಗೆ 94ನೇ ವರ್ಷದ ಶಿವರಾತ್ರಿ ಮಹೋತ್ಸವ ಹಾಗೂ ಶಿವನಾಮ ಸಪ್ತಾಹ ನಡೆಯಲಿದೆ ಎಂದು ಕಬೀರಾನಂದ ಮಠದ ಶ್ರೀ ಶಿವಲಿಂಗಾನಂದ ಸ್ವಾಮೀಜಿ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಶಿವನನ್ನು ರಾತ್ರಿಯಿಡಿ ಧ್ಯಾನಿಸುವುದೇ ಮಹಾಶಿವರಾತ್ರಿಯ ಮಹತ್ವ. 1924 ರಿಂದಲೂ ಕಬೀರಾನಂದಾಶ್ರಮದಲ್ಲಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.

ಇದನ್ನೂ ಓದಿ: ತೀವ್ರ ವಿರೋಧದ ನಡುವೆಯೂ ಚಿತ್ರದುರ್ಗದಿಂದ ಕಚೇರಿ ಎತ್ತಂಗಡಿ

ಶಿವರಾತ್ರಿ ಎಂದರೆ ಕಬೀರಾನಂದಶ್ರಮ, ನವರಾತ್ರಿ ಎಂದರೆ ಮುರುಘಾಮಠ ಎನ್ನುವಂತಾಗಿದೆ. ಜಿಲ್ಲೆಯಲ್ಲಿ ಎರಡು ಮಠಗಳು ಪ್ರಸಿದ್ದಿ ಪಡೆದಿವೆ. ಈ ಬಾರಿಯ ಮಹಾಶಿವರಾತ್ರಿ ಮಹೋತ್ಸವಕ್ಕೆ ಬಹಳಷ್ಟು ಜನರ ಸಹಕಾರವಿದೆ. ಯುವ ಬಳಗ ಹೆಚ್ಚಿನ ಸಂಖ್ಯೆಯಲ್ಲಿದೆ. ಹೊಸ ಹೊಸ ಮಠಾಧೀಶರನ್ನು ಶಿವರಾತ್ರಿ ಮಹೋತ್ಸವಕ್ಕೆ ಆಹ್ವಾನಿಸಿದ್ದೇವೆ. ಮನರಂಜನೆ, ಸಾಂಸ್ಕøತಿಕ ಕಾರ್ಯಕ್ರಮಗಳು ಪ್ರತಿ ವರ್ಷದಂತೆ ಇರುತ್ತದೆ ಎಂದು ತಿಳಿಸಿದರು.

ಮಹಾಶಿವರಾತ್ರಿ ಮಹೋತ್ಸವದ ಮೊದಲ ದಿನ ಸಂಜೆ 6.30 ಕ್ಕೆ ಆರಂಭವಾಗುವ ಕಾರ್ಯಕ್ರಮದ ಸಾನಿಧ್ಯವನ್ನು ಹುಬ್ಬಳ್ಳಿ ವಿಜಯಪುರ ಶಾಂತಾಶ್ರಮದ ಷಣ್ಮುಖಾರೂಢ ಮಠದ ಅಭಿನವ ಸಿದ್ದಾರೂಢ ಮಹಾಸ್ವಾಮಿಗಳು, ಜಡೇಶ್ವರ ಮಠದ ರಾಮಾನಂದ ಭಾರತಿ ಸ್ವಾಮಿಗಳು, ಬಾಗಲಕೋಟೆ ಅರಿಕೆರೆಯ ಕೌಧೀಶ್ವರ ಮಹಾಸಂಸ್ಥಾನದ ಮಾಧವಾನಂದ ಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಮೆಡಿಕಲ್ ಕಾಲೇಜಿಗೆ ಡೀನ್ ನೇಮಕಕ್ಕೆ ವಿರೋಧ

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಭಾ ಮಂಟಪ ಉದ್ಘಾಟಿಸುವರು. ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಮಹಾ ಶಿವರಾತ್ರಿ ಮಹೋತ್ಸವ ಉದ್ಗಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಕೆ.ಎಸ್.ನವೀನ್, ಜಿಲ್ಲಾ ರಕ್ಷಣಾಧಿಕಾರಿ ಧಮೇರ್ಂದ್ರಕುಮಾರ್ ಮೀನಾ, ನಿವೃತ್ತ ಐ.ಎ.ಎಸ್.ಅಧಿಕಾರಿ ಬಿ.ಭೀಮಯ್ಯ, ಬಿಜೆಪಿ ಮುಖಂಡ ಎಸ್.ಲಿಂಗಮೂರ್ತಿ, ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನಯ್ ಆರ್ ತಿಮ್ಮಾಪುರ. ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಬದರೀನಾಥ್, ಜಿ.ಟಿ.ಸುರೇಶ್ ಸಿದ್ದಾಪುರ, ಎಂ.ಎ.ಸೇತುರಾಂ, ವಾಣಿಜ್ಯೋದ್ಯಮಿ ರೇವಣ್ಣ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಾದ ಸೋಮಶೇಖರ್, ಮಚೆರ್ಂಟ್ ಬ್ಯಾಂಕ್ ಅಧ್ಯಕ್ಷ ಎಸ್.ಆರ್.ಲಕ್ಷ್ಮಿಕಾಂತರೆಡ್ಡಿ, ಜಿಪಂ ಮಾಜಿ ಉಪಾಧ್ಯಕ್ಷರಾದ ಎಸ್.ಎಂ.ಎಲ್.ತಿಪ್ಪೇಸ್ವಾಮಿ, ದ್ಯಾಮೇಗೌಡರು ಆಗಮಿಸಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಮುರುಘಾ ಮಠದ ಆಡಳಿತ ನಿರ್ವಹಣೆಗೆ ನಿವೃತ್ತ ಐಎಎಸ್ ಅಧಿಕಾರಿ

ಸುದ್ದಿಗೋಷ್ಠಿಯಲ್ಲಿ ಮಹಾಶಿವರಾತ್ರಿ ಮಹೋತ್ಸವದ ಅಧ್ಯಕ್ಷ ಕೆ.ಸಿ.ನಾಗರಾಜ್, ಪರಮೇಶ್, ವಿ.ಎಲ್.ಪ್ರಶಾಂತ್, ಡಿ.ಗೋಪಾಲಸ್ವಾಮಿ ನಾಯಕ, ನಾಗರಾಜ್ ಸಂಗಂ, ನ್ಯಾಯವಾದಿ ಪ್ರತಾಪ್ ಜೋಗಿ, ಓಂಕಾರ್ ಮತ್ತಿತರರಿದ್ದರು.

ಇದನ್ನೂ ಓದಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಬೆಲೆಯಲ್ಲಿ 459 ರೂ. ಹೆಚ್ಚಳ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaKabirananda MathShivanama SaptahaShivaratriSri Shivalingananda Swamijiಕಬೀರಾನಂದ ಮಠಚಿತ್ರದುರ್ಗಶಿವನಾಮ ಸಪ್ತಾಹಶಿವರಾತ್ರಿಶ್ರೀ ಶಿವಲಿಂಗಾನಂದ ಸ್ವಾಮೀಜಿ
Share This Article
Facebook Email Print
Previous Article ಡಾ ಶ್ರೀ ಬಸವ ರಾಮನಂದ ಸ್ವಾಮೀಜಿ ವನಕಲ್ಲು ಮಲ್ಲೇಶ್ವರ ಜಾತ್ರೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿದರು. ಮಾ.8 ರಿಂದ 17ರ ವರೆಗೆ ಶ್ರೀ ವನಕಲ್ಲು ಮಲ್ಲೇಶ್ವರ ಜಾತ್ರಾ ಮಹೋತ್ಸವ | ಡಾ. ಶ್ರೀ ಬಸವ ರಮಾನಂದ ಸ್ವಾಮೀಜಿ
Next Article arecanut price list ಅಡಿಕೆ ಧಾರಣೆ | ಮಾರ್ಚ್ 2 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ರೇಟ್
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up