By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಅಪ್ಪಾಜಿ ನಡೆದಾಡಿದ ಚಿತ್ರದುರ್ಗ ನನ್ನೂರು | ಕೋಟೆನಾಡಲ್ಲಿ ಸೆಂಚುರಿ ಸ್ಟಾರ್‌ ಸಂಚಲನ | ಅಭಿಮಾನಿಗಳ ನಡುವೆ ಜತೆ ಹಾಡಿ, ಕುಣಿದ ಶಿವಣ್ಣ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಅಪ್ಪಾಜಿ ನಡೆದಾಡಿದ ಚಿತ್ರದುರ್ಗ ನನ್ನೂರು | ಕೋಟೆನಾಡಲ್ಲಿ ಸೆಂಚುರಿ ಸ್ಟಾರ್‌ ಸಂಚಲನ | ಅಭಿಮಾನಿಗಳ ನಡುವೆ ಜತೆ ಹಾಡಿ, ಕುಣಿದ ಶಿವಣ್ಣ

ಮುಖ್ಯ ಸುದ್ದಿ

ಅಪ್ಪಾಜಿ ನಡೆದಾಡಿದ ಚಿತ್ರದುರ್ಗ ನನ್ನೂರು | ಕೋಟೆನಾಡಲ್ಲಿ ಸೆಂಚುರಿ ಸ್ಟಾರ್‌ ಸಂಚಲನ | ಅಭಿಮಾನಿಗಳ ನಡುವೆ ಜತೆ ಹಾಡಿ, ಕುಣಿದ ಶಿವಣ್ಣ

News Desk Chitradurga News
Last updated: 12 March 2024 13:04
News Desk Chitradurga News
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 12 MARCH 2024
ಚಿತ್ರದುರ್ಗ: ಸೆಂಚುರಿ ಸ್ಟಾರ್‌, ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್‌ ಕೋಟೆನಾಡಿನಲ್ಲಿ ಅಭಿಮಾನಿಗಳ ಜತೆ ಹಾಡುತ್ತಾ, ಕುಣಿದು ಕುಪ್ಪಳಿಸಿದರು. ಮೈಕ್‌ ಹಿಡಿದು ವೇದಿಕೆ ಶಿವಣ್ಣ ಬರುತ್ತಿದ್ದಂತೆ ಚಿತ್ರದುರ್ಗದ ಬಸವೇಶ್ವರ ಚಿತ್ರ ಮಂದಿರದ ಆವರಣದಲ್ಲಿ ಜಮಾಯಿಸಿದ್ದ ಅಭಿಮಾನಿಗಳು ಜೈಕಾರ ಹಾಕಿದರು.

ಯಶಸ್ವಿಯಾಗಿ ಮುನ್ನುಗುತ್ತಿರುವ ‘ಕರಟಕ ದಮನಕ’ ಚಿತ್ರದ ವಿಜಯ ಯಾತ್ರೆಗೆ ಚಿತ್ರದುರ್ಗಕ್ಕೆ ಆಗಮಿಸಿದ್ದ ನಟ ಶಿವರಾಜಕುಮಾರ್‌ ಹಾಗೂ ನಿರ್ದೇಶಕ ಯೋಗರಾಜ್‌ ಭಟ್ ಅವರನ್ನು ಕಣ್ತುಂಬಿಕೊಳ್ಳಲು ಹಾಗೂ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು.

ಚಿತ್ರದ ಟೈಟಲ್‌ ಸಾಂಗ್‌ ಹಾಡುತ್ತಲೆ ಸೂಪರ್‌ ಆಗಿ ಸ್ಟೇಪ್ ಹಾಕಿದ ಶಿವಣ್ಣ ಅಭಿಮಾನಿಗಳ ಉತ್ಸಾಹವನ್ನು ಇಮ್ಮಡಿಗೊಳಿಸಿದರು. ನೀವು ಎಲ್ಲೇ ಇರಿ ಆದರೆ ಊರಿನ ನಂಟು ಮಾತ್ರ ಬಿಡಬೇಡಿ. ನಾನು ನಮ್ಮೂರು ಗಾಜನೂರಿಗೆ ಹೋಗುವಂತೆ ನೀವು ಸಹ ನಿಮ್ಮೂರಿಗೆ ಹೋಗಿ ಅಲ್ಲಿನ ಹಬ್ಬ, ಜಾತ್ರೆಗಳಲ್ಲಿ ಸಂಭ್ರಮಿಸಿ ಎಂಬ ಸಂದೇಶವನ್ನು ಅಭಿಮಾನಿಗಳಿಗೆ ತಿಳಿಸಿದರು.

ಕ್ಲಿಕ್ ಮಾಡಿ ಓದಿ: https://chitradurganews.com/rescheduling-of-charges-against-muruga-sharanru/

‘ನನಗೆ ಚಿತ್ರದುರ್ಗ ಸಹ ಸ್ವಂತ ಊರಿನಂತೆ. ಅಪ್ಪಾಜಿ ಕಂಪನಿ ನಾಟಕಗಳಲ್ಲಿ ಅಭಿನಯಿಸಿದ್ದು ಸಹ ಇದೇ ಊರಿನಲ್ಲಿ. ಅಪ್ಪಾಜಿ ನಡೆದಾಡಿದ ಊರು ನಮ್ಮೂರು ಅಲ್ವಾ…ವೇದ ಚಿತ್ರದ ಹಾಡೊಂದನ್ನು ಚಿತ್ರದುರ್ಗದಲ್ಲಿ ಬಿಡುಗಡೆ ಮಾಡಲಾಗಿತ್ತು. ಜೋಗಿ, ಮೈಲಾರಿ, ಶಿವ ಸೇರಿ ಹಲವು ಚಿತ್ರಗಳಿಗೆ ಇಲ್ಲಿ ಕಾರ್ಯಕ್ರಮ ಮಾಡಲಾಗಿದೆ. ಪುಟ್ಟಣ್ಣ ಕಣಗಾಲ್‌ ಅವರು ಚಿತ್ರದುರ್ಗವನ್ನು ಸಿನಿಮಾಗಳಲ್ಲಿ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ’ ಎಂದು ಹೇಳಿದರು.

‘ಪ್ರತಿಯೊಬ್ಬರೂ ಹುಟ್ಟಿದ ಊರುಗಳನ್ನು ಮರೆಯಬಾರದು. ಊರಿನೊಂದಿಗೆ ನಿಕಟ ಸಂಪರ್ಕ ಇಟ್ಟುಕೊಳ್ಳಬೇಕು. ಊರಿನಲ್ಲಿರುವ ಬೇರುಗಳನ್ನು ಕಾಪಾಡಿಕೊಳ್ಳಬೇಕು. ಕೃಷಿ, ನೀರು ಕಾಪಾಡಿಕೊಳ್ಳಬೇಕು. ಈ ಸಿನಿಮಾ ಮಾಡುವಾಗ ಗಾಜನೂರು ತುಂಬಾ ಕಾಡಿತು’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕ್ಲಿಕ್ ಮಾಡಿ ಓದಿ: https://chitradurganews.com/pr-thippeswamy-memorial-and-putthali-unveiling-minister-d-sudhakar/

‘ನಟ ಪ್ರಭುದೇವ ಅವರೊಂದಿಗೆ ಸಿನಿಮಾದಲ್ಲಿ ಅಭಿನಯಿಸಿದ್ದು ಖುಷಿ ಕೊಟ್ಟಿದೆ. ಇದೊಂದು ಅದ್ಭುತ ಜೋಡಿ ಎಂಬುದನ್ನು ಸಿನಿಮಾ ನೋಡಿದ ಪ್ರತಿಯೊಬ್ಬರೂ ಹೇಳುತ್ತಿದ್ದಾರೆ. ಅತ್ಯುತ್ತಮ ಡಾನ್ಸರ್ ಹಾಗೂ ಕೊರಿಯೊಗ್ರಾಫರ್‌ ಪ್ರಭುದೇವ ಅವರೊಂದಿಗೆ ಹಲವು ಬಾರಿ ಚರ್ಚಿಸಿ ಚಿತ್ರ ರೂಪಿಸಿದ್ದೇವೆ. ನಿರ್ದೇಶಕ ಯೋಗರಾಜ್‌ ಭಟ್‌ ಅದ್ಭುತವಾದ ಕಥೆಯೊಂದನ್ನು ಪ್ರೇಕ್ಷಕರ ಎದುರು ಇಟ್ಟಿದ್ದಾರೆ’ ಎಂದರು.

ಕ್ಲಿಕ್ ಮಾಡಿ ಓದಿ: https://chitradurganews.com/application-invited-for-filling-9144-posts-in-railway-department/

‘ಹುಟ್ಟಿದ ಊರು, ಕುಡಿದ ನೀರು, ಅಲ್ಲಿನ ತೇರನ್ನು ಯಾರೂ ಮರೆಯಬಾರದು ಎನ್ನುವ ಸಂದೇಶ ಚಿತ್ರದಲ್ಲಿದೆ. ಚಿತ್ರದುರ್ಗ ಜನರು ಸಹೃದಯತೆ, ಪ್ರೀತಿಯಿಂದ ಕಾಣುತ್ತಾರೆ’ ಎಂದು ನಿರ್ದೇಶಕ ಯೋಗರಾಜ ಭಟ್ ಹೇಳಿದರು.

ಜೆಡಿಎಸ್‌ ಮುಖಂಡ ಬಿ.ಕಾಂತರಾಜ್‌, ಬಸವೇಶ್ವರ ಚಿತ್ರಮಂದಿರ ಮಾಲೀಕ ಮಧು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Karataka DamanakaMovieShivraj KumarVijay YatraYogaraja Bhattಕರಟಕ ದಮನಕಚಲನಚಿತ್ರಯೋಗರಾಜ ಭಟ್ವಿಜಯ ಯಾತ್ರೆಶಿವರಾಜ್ ಕುಮಾರ್
Share This Article
Facebook Email Print
Previous Article ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಮುರುಘಾ ಶರಣರ ವಿರುದ್ಧದ ಆರೋಪಗಳ ಮರು ನಿಗಧಿ | ಹೈಕೋರ್ಟ್ ಸೂಚನೆ
Next Article ಹಟ್ಟಿ ತಿಪ್ಪೇಶನ ಸನ್ನಿಧಿಯಲ್ಲಿ ಗುಗ್ಗರಿ ಹಬ್ಬ ಸಂಭ್ರಮ | ಜಾತ್ರಾ ಮಹೋತ್ಸವದ ಸಿದ್ಧತೆ ಶುರು
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up