By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮೇ.8 ರಿಂದ 10ರವರೆಗೆ ಮುರುಘಾ ಮಠದಲ್ಲಿ ಬಸವ ಜಯಂತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮೇ.8 ರಿಂದ 10ರವರೆಗೆ ಮುರುಘಾ ಮಠದಲ್ಲಿ ಬಸವ ಜಯಂತಿ

ಮುಖ್ಯ ಸುದ್ದಿ

ಮೇ.8 ರಿಂದ 10ರವರೆಗೆ ಮುರುಘಾ ಮಠದಲ್ಲಿ ಬಸವ ಜಯಂತಿ

News Desk Chitradurga News
Last updated: 7 May 2024 09:54
News Desk Chitradurga News
1 year ago
Share
ಬಸವಣ್ಣ
ಬಸವಣ್ಣ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 07 MAY 2024

ಚಿತ್ರದುರ್ಗ: ನಗರದ ಶ್ರೀ ಮುರುಘಾ ರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಶ್ರೀ ಬಸವೇಶ್ವರ ಜಯಂತಿ ಆಚರಣೆ.

ಇದನ್ನೂ ಓದಿ: ರಾಶಿ ಅಡಿಕೆ ಬೆಲೆಯಲ್ಲಿ ಮತ್ತೆ ಚೇತರಿಕೆ | ಚನ್ನಗಿರ, ಶಿವಮೊಗ್ಗ ಮಾರುಕಟ್ಟೆಗಳಲ್ಲಿ ಏರಿಕೆ

ಮೇ.8ರಂದು ಸಂಜೆ 6 ಗಂಟೆಗೆ ವಚನಕಾರರ ದೃಷ್ಟಿಯಲ್ಲಿ ಬಸವಣ್ಣ ವಿಷಯ ಕುರಿತು ಚಿಂತನಗೋಷ್ಠಿ ನಡೆಯಲಿದೆ. ಬೆಂಗಳೂರು ಬಸವ ಸಮಿತಿಯ ಅಧ್ಯಕ್ಷ ಅರವಿಂದ ಜತ್ತಿ ವಿಷಯಾವಲೋಕನ ಮಾಡಲಿದ್ದು, ಸಿಂಧನೂರು ಬಸವಕೇಂದ್ರ ಅಧ್ಯಕ್ಷ ವೀರಭದ್ರಪ್ಪ ಕುರಕುಂದಿ ಭಾಗವಹಿಸುವರು.

ಮೇ. 9ರಂದು ಬೆಳಿಗ್ಗೆ ವಚನ ಕಂಠಪಾಠ ಸ್ಪರ್ಧೆ, 12ನೇ ಶತಮಾನದ ಬಸವಾದಿ ಶರಣರ ವೇಷಭೂಷಣ ಸ್ಪರ್ಧೆ, ರಂಗೋಲಿ ಸ್ಪರ್ಧೆ ಮತ್ತು ಬಸವಾದಿ ಶಿವಶರಣರ ಕುರಿತಾದ ಭಜನಾ ಸ್ಪರ್ಧೆಗಳು ನಡೆಯಲಿವೆ. ಅದೇದಿನ ಸಂಜೆ 6 ಗಂಟೆಗೆ ಶರಣ ಸ್ಥಳದ ನೆಲೆಯಲ್ಲಿ ಬಸವಣ್ಣ ವಿಷಯ ಕುರಿತು ಚಿಂತನ ಗೋಷ್ಠಿ ನಡೆಯಲಿದ್ದು, ಅಶೋಕ ಬರಗುಂಡಿ ಗದಗ ಇವರು ವಿಷಯಾವಲೋಕನ ಮಾಡುವರು. ಬೆಂಗಳೂರು ಬಸವ ಟಿವಿ ಅಧ್ಯಕ್ಷ ಕೃಷ್ಣಪ್ಪ ಮುಖ್ಯಅತಿಥಿಯಾಗಿ ಭಾಗವಹಿಸುವರು.

ಇದನ್ನೂ ಓದಿ: ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ | 16 ಜೋಡಿ ದಾಂಪತ್ಯಕ್ಕೆ ಪಾದರ್ಪಣೆ

ಮೇ.10 ರಂದು ಬೆಳಿಗ್ಗೆ 9.45 ಗಂಟೆಗೆ ಬಸವತತ್ತ್ವ ಧ್ವಜಾರೋಹಣ ಹಾಗೂ ಬಸವಣ್ಣನವರ ಜಯಂತ್ಯೋತ್ಸವ ನಡೆಯಲಿದೆ. ಶ್ರೀ ಮುರುಘರಾಜೇಂದ್ರ ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ, ಅಧ್ಯಕ್ಷತೆ ವಹಿಸುವರು. ಆಡಳಿತ ಮಂಡಳಿಯ ಸದಸ್ಯರುಗಳಾದ ಡಾ. ಪಿ.ಎಸ್. ಶಂಕರ್, ಚಂದ್ರಶೇಖರ್ ಎಸ್.ಎನ್., ಡಾ. ಬಸವಕುಮಾರ ಸ್ವಾಮಿಗಳು ಭಾಗವಹಿಸುವರು.

ಶಿವಮೊಗ್ಗದ ಪ್ರಭುದೇವ ಜ್ಞಾನಕೇಂದ್ರದ ಶ್ರೀ ಬಸವ ನವಲಿಂಗ ಶರಣರು ಸಾಂಸ್ಕøತಿಕ ನಾಯಕ ಬಸವಣ್ಣ ಕುರಿತು ವಿಷಯಾವಲೋಕನ ಮಾಡುವರು.

ಇದನ್ನೂ ಓದಿ: ಸಂಶೋಧಕ ಡಾ.ಬಿ ರಾಜಶೇಖರಪ್ಪ ಅವರಿಗೆ ಪ್ರೊ.ಶಿ.ಚೆ.ನಂದೀಮಠ ಪ್ರಶಸ್ತಿ

ಮೇ.7 ರಂದು ಬೆಳಗ್ಗೆ 8.30 ರಿಂದ 9.30ರವರೆಗೆ ಆಕಾಶವಾಣಿಯಲ್ಲಿ ಬಸವಣ್ಣನವರ ಧಾರ್ಮಿಕ ಪರಿಕಲ್ಪನೆಗಳು ಮತ್ತು ಪ್ರಯೋಗಶೀಲತೆ ಕುರಿತು ಡಾ. ಲೋಕೇಶ್ ಅಗಸನಕಟ್ಟೆ, ಮೇ.8ರಂದು ಬೆಳಗ್ಗೆ 8.30ರಿಂದ 9.30ರವರೆಗೆ ಬಸವಣ್ಣನವರ ಸಾಮಾಜಿಕ ಚಿಂತನೆಗಳು ಕುರಿತು ಡಾ.ಎನ್.ಮಮತ, ಮೇ 9ರಂದು ಬೆಳಗ್ಗೆ 8.30ರಿಂದ 9.30ರವರೆಗೆ ಬಸವಾದಿ ಶರಣರ ಆರ್ಥಿಕ ಚಿಂತನೆಗಳು ಕುರಿತು ಡಾ.ಟಿ.ಆರ್.ಚಂದ್ರಶೇಖರ್ ಮತ್ತು ಮೇ 10ರಂದು ಬೆಳಗ್ಗೆ 8.30ರಿಂದ 9.30ರವರೆಗೆ ಬಸವಣ್ಣನವರ ಚಿಂತನೆಯ ಪ್ರಸ್ತುತತೆ ಕುರಿತು ಚಂದ್ರಶೇಖರ ತಾಳ್ಯ ಅವರು ಚಿಂತನೆ ನೀಡಲಿದ್ದಾರೆ.

ಇದನ್ನೂ ಓದಿ: ಈರುಳ್ಳಿ ಬೆಳೆಗಾರರ ಮುಖದಲ್ಲಿ ಮಂದಹಾಸ | ರಫ್ತಿಗೆ ಕೇಂದ್ರ ಸರ್ಕಾರದ ಸಮ್ಮತಿ

ಕಾರ್ಯಕ್ರಮದಲ್ಲಿ ಶ್ರೀ ಬಸವನವಲಿಂಗ ಶರಣರು ಬರೆದಿರುವ ಜಗಜ್ಯೋತಿ ಬಸವಧರ್ಮ ಗ್ರಂಥ ಬಿಡುಗಡೆಯಾಗಲಿದೆ. ನಾಡಿನ ವಿವಿಧ ಭಾಗಗಳ ಧಾರ್ಮಿಕ ಮುಖಂಡರುಗಳು ಭಾಗವಹಿಸುವರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಶ್ರೀ ಮಠ ಪ್ರಕಟಣೆಯಲ್ಲಿ ತಿಳಿಸಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Basava JayanticelebrationChitradurgaMuruga Mathಆಚರಣೆಚಿತ್ರದುರ್ಗಬಸವ ಜಯಂತಿಮುರುಘಾ ಮಠ
Share This Article
Facebook Email Print
Previous Article ಬಯಲು ಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಯಲು ಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ | ಲಂಚದ ಹಣದ ಸಮೇತ ಎಸ್.ವೈ.ಬಸವರಾಜಪ್ಪ ಬಂಧನ
Next Article ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up