
CHITRADURGA NEWS | 24 MAY 2024
ಚಿತ್ರದುರ್ಗ: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಬಣಕಲ್ ಮತ್ತು ಕೊಟ್ಟಿಗೆಹಾರ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ ಚಿತ್ರದುರ್ಗ ಜಿಲ್ಲೆಯ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿದ್ದಾರೆ.
ಧರ್ಮಸ್ಥಳಕ್ಕೆ ಹೋಗಿ ದೇವರ ದರ್ಶನ ಪಡೆದು ವಾಪಾಸಾಗುವಾಗ ಮೆಸ್ಕಾಂ ಲಾರಿ ಹಾಗೂ ಓಮಿನಿ ನಡುವೆ ಅಪಘಾತವಾಗಿದ್ದು, ಓಮಿನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಇದನ್ನೂ ಓದಿ: ಪೈ ಶೋ ರೂಂ ಬಳಿ ಕಾಣಿಸಿಕೊಂಡ ಪೈಥಾನ್ | ಮಾರುಕಟ್ಟೆಗೆ ಬಂದ 8 ಅಡಿ ಉದ್ದದ ಹೆಬ್ಬಾವು
ಮೃತರನ್ನು ಹೊಳಲ್ಕೆರೆ ತಾಲೂಕು ಚಿಕ್ಕಜಾಜೂರು ಸಮೀಪದ ಚನ್ನಪಟ್ಟಣ ಗ್ರಾಮದ 65 ವರ್ಷದ ಹಂಪಯ್ಯ, 58 ವರ್ಷದ ಪ್ರೇಮ, 60 ವರ್ಷದ ಮಂಜಯ್ಯ, 45 ವರ್ಷದ ಪ್ರಭಾಕರ್ ಎಂದು ಗುರುತಿಸಲಾಗಿದೆ.
ಇದೇ ಕುಟುಂಬಕ್ಕೆ ಸೇರಿದ ಆಲ್ಟೋ ಕಾರು ಓಮಿನಿಯ ಹಿಂದೆಯೇ ಬರುತ್ತಿದ್ದು, ಓಮಿನಿಗೆ ಆಲ್ಟೋ ಡಿಕ್ಕಿಯಾಗಿದೆ. ಇದೇ ಕುಟುಂಬದ ಒಟ್ಟು 17 ಮಂದಿ ಪ್ರವಾಸಕ್ಕೆ ಬಂದಿದ್ದು, 12 ಮಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

