By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಕೋಟೆನಾಡಿನಲ್ಲಿ ಅರಳಿದ ಕಮಲ | ಗೆಲುವಿನ ಜಯಭೇರಿ ಬಾರಿಸಿದ ಗೋವಿಂದ ಕಾರಜೋಳ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಕೋಟೆನಾಡಿನಲ್ಲಿ ಅರಳಿದ ಕಮಲ | ಗೆಲುವಿನ ಜಯಭೇರಿ ಬಾರಿಸಿದ ಗೋವಿಂದ ಕಾರಜೋಳ

ಮುಖ್ಯ ಸುದ್ದಿ

ಕೋಟೆನಾಡಿನಲ್ಲಿ ಅರಳಿದ ಕಮಲ | ಗೆಲುವಿನ ಜಯಭೇರಿ ಬಾರಿಸಿದ ಗೋವಿಂದ ಕಾರಜೋಳ

News Desk Chitradurga News
Last updated: 4 June 2024 13:35
News Desk Chitradurga News
1 year ago
Share
ಚಿತ್ರದುರ್ಗದಲ್ಲಿ ಬಿಜೆಪಿಗೆ ರೋಚಕ ಗೆಲುವು
ಚಿತ್ರದುರ್ಗದಲ್ಲಿ ಬಿಜೆಪಿಗೆ ರೋಚಕ ಗೆಲುವು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 04 JUNE 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ವಿರುದ್ಧ ಕಾರಜೋಳ ಜಯಭೇರಿ ಬಾರಿಸಿದ್ದಾರೆ.

ತೀವ್ರ ಉತ್ಸಾಹದಲ್ಲಿ ಮಂಗಳವಾರ ಬೆಳಿಗ್ಗೆ ಮತ ಎಣಿಕೆ ಕೇಂದ್ರಕ್ಕೆ ಬಿ.ಎನ್.ಚಂದ್ರಪ್ಪ ಆಗಮಿಸಿದ್ದರು. ಮೊದಲ ಸುತ್ತಿನಲ್ಲಿ 75 ಮತಗಳ ಮುನ್ನಡೆ ಸಾಧಿಸಿದ್ದರು. ಕಾಂಗ್ರೆಸ್ ಪಕ್ಷದ ಬಿ.ಎನ್.ಚಂದ್ರಪ್ಪ 32,239 ಹಾಗೂ ಬಿಜೆಪಿಯ ಗೋವಿಂದ ಕಾರಜೋಳ ಅವರು 32,164 ಮತ ಪಡೆದಿದ್ದರು. ಎರಡನೇ ಸುತ್ತಿನಿಂದ ಸತತವಾಗಿ ಹಿನ್ನಡೆ ಸಾಧಿಸಿದ ಕಾರಣ ಬೇಸರಗೊಂಡು ಮತ ಎಣಿಕೆ ಕೇಂದ್ರದಿಂದ ಹೆಜ್ಜೆ ಹಾಕಿದ್ದಾರೆ.

ಎರಡನೇ ಸುತ್ತಿನಿಂದಲೂ ತೀವ್ರ ಅಂತರ ಕಾಯ್ದುಕೊಂಡ ಗೋವಿಂದ ಕಾರಜೋಳ ಗೆಲುವಿನ ನಗೆ ಬೀರಿದ್ದಾರೆ. 6,77041 ಮತ ಪಡೆದಿದ್ದು, ಕೊನೆ ಹಂತದ ಎಣಿಕೆ ನಡೆಯುತ್ತಿದೆ. ಕಾಂಗ್ರೆಸ್‌ ಅಭ್ಯರ್ಥಿ ಬಿ.ಎನ್‌.ಚಂದ್ರಪ್ಪ 6,30.451 ಪಡೆ ಪಡೆದು ಸೋಲು ಅನುಭವಿಸಿದ್ದಾರೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತದಾರರು ವಲಸಿಗರಿಗೆ ಮತ್ತು ಹೊಸ ಮುಖಗಳಿಗೆ ಮಣೆ ಹಾಕುತ್ತ ಬಂದಿರುವುದು ಈ ಚುನಾವಣೆಯಲ್ಲೂ ಮುಂದುವರೆದಿದೆ.

ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ಕ್ಷೇತ್ರದಲ್ಲಿ ಕಮಲ ಪಡೆ 2009 ಮತ್ತು 2019ರಲ್ಲಿ ಗೆದ್ದಿದೆ. 1996ರಲ್ಲಿ ಜೆಡಿಯು, 1999ರಲ್ಲಿ ಜೆಡಿಎಸ್ ಗೆದ್ದಿದ್ದು ಬಿಟ್ಟರೆ ಉಳಿದಂತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಇಲ್ಲಿ ಗೆದ್ದಿದ್ದಾರೆ. 1952ರಲ್ಲಿ ಕಾಂಗ್ರೆಸ್ ಪಕ್ಷದಿಂದ ಎಸ್ ನಿಜಲಿಂಗಪ್ಪ ಚಿತ್ರದುರ್ಗ ಕ್ಷೇತ್ರದ ಸಂಸದರಾಗಿದ್ದರು.

ಕಾಂಗ್ರೆಸ್ ನಿಂದ 1971ರಲ್ಲಿ ಕೊಂಡಜ್ಜಿ ಬಸ್ಸಪ್ಪ, 1977 ಮತ್ತು 1980ರಲ್ಲಿ ಕೆ. ಮಲ್ಲಣ್ಣ, 1984ರಲ್ಲಿ ಕೆ ಹೆಚ್ ರಂಗನಾಥ್ ಗೆಲವು ಸಾಧಿಸಿದ್ದರೆ 1989, 1991ರಲ್ಲಿ ಸಿ ಪಿ ಮೂಡಲಗಿರಿಯಪ್ಪ ಗೆದ್ದು ಬೀಗಿದ್ದರು. 1996ರಲ್ಲಿ ಜನತಾದಳದಿಂದ ನಿವೃತ್ತ ಐಪಿಎಸ್ ಅಧಿಕಾರಿ ಪಿ.ಕೋದಂಡರಾಮಯ್ಯ ಗೆದ್ದಿದ್ದರು. 1998ರಲ್ಲಿ ಕಾಂಗ್ರೆಸ್ ನಿಂದ ಸಿ ಪಿ ಮೂಡಲಗಿರಿಯಪ್ಪ ಮೂರನೇ ಬಾರಿ ಸಂಸದರಾಗಿದ್ದರು.

ಚಿತ್ರದುರ್ಗ ಎಸ್ಟಿ ಮೀಸಲು ಕ್ಷೇತ್ರದಲ್ಲಿ 1999ರಲ್ಲಿ ನಟ ಶಶಿಕುಮಾರ್ ಜೆಡಿಎಸ್ ನಿಂದ ಸಂಸದರಾಗಿ ಆಯ್ಕೆ ಆಗಿದ್ದರು. 2004ರಲ್ಲಿ ಕಾಂಗ್ರೆಸ್ ನಿಂದ ನಿವೃತ್ತ ನ್ಯಾ. ಎನ್ ವೈ ಹನುಮಂತಪ್ಪ ಸಂಸದರಾಗಿದ್ದರು. ಚಿತ್ರದುರ್ಗ ಎಸ್ಸಿ ಮೀಸಲು ಕ್ಷೇತ್ರದಲ್ಲಿ ವಿದೇಶದಿಂದ ಮರಳಿದ್ದ ಜನಾರ್ಧನಸ್ವಾಮಿ 2009ರಲ್ಲಿ ಬಿಜೆಪಿ ಸಂಸದರಾಗಿ ಗೆದ್ದು ಬೀಗಿದ್ದರು. 2014ರಲ್ಲಿ ಚಿಕ್ಕಮಗಳೂರು ಮೂಲದ ಬಿ ಎನ್ ಚಂದ್ರಪ್ಪ ಕಾಂಗ್ರೆಸ್ ನಿಂದ ಸಂಸದರಾಗಿದ್ದರು. 2019ರಲ್ಲಿ ಆನೇಕಲ್ ಮೂಲದ ಎ. ನಾರಾಯಣಸ್ವಾಮಿ ಬಿಜೆಪಿ ಸಂಸದರಾಗಿ ಆಯ್ಕೆ ಆಗಿದ್ದರು.

ಚಿತ್ರದುರ್ಗ ಲೋಕಸಭೆ ಕ್ಷೇತ್ರ ತುಮಕೂರು ಜಿಲ್ಲೆಯ ಶಿರಾ ಮತ್ತು ಪಾವಗಡ ವಿಧಾನಸಭೆ ಕ್ಷೇತ್ರಗಳನ್ನೊಳಗೊಂಡಿದೆ. ಚಿತ್ರದುರ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಒಟ್ಟು 8 ವಿಧಾನಸಭೆ ಕ್ಷೇತ್ರಗಳ ಪೈಕಿ 2013ರಲ್ಲಿ 5 ಕಾಂಗ್ರೆಸ್ , 1 ಜೆಡಿಎಸ್, 1 ಬಿಜೆಪಿ, 1 ಬಿಎಸ್ ಆರ್ ಪಕ್ಷ ಗೆದ್ದಿತ್ತು.

2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅನಾಯಾಸವಾಗಿ ಗೆಲುವು ಸಾಧಿಸಿತ್ತು. 2019ರ ಲೋಕಸಭೆ ಚುನಾವಣೆ ವೇಳೆಗೆ ಪರಿಸ್ಥಿತಿ ಬದಲಾಗಿತ್ತು. 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 5, ಕಾಂಗ್ರೆಸ್ 2, ಜೆಡಿಎಸ್ 1 ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು.
2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಇದ್ದರೂ ಸಹ ಬಿಜೆಪಿ ಸುಲಭ ಗೆಲುವು ಸಾಧಿಸಿತ್ತು. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 7ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರೆ ಬಿಜೆಪಿ ಕೇವಲ 1ಸ್ಥಾನದಲ್ಲಿ ಗೆದ್ದಿದೆ.

ಎಸ್ಸಿ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 18,41,937 ಮತದಾರರಿದ್ದು ಏಪ್ರಿಲ್ 26 ಶುಕ್ರವಾರದಂದು ನಡೆದಿದ್ದ ಮೊದಲ ಹಂತದ ಮತದಾನದಲ್ಲಿ ಶೇಕಡಾ 72.74 ಪ್ರಮಾಣದ ಮತದಾನವಾಗಿತ್ತು. 2024ರಲ್ಲಿ ಕಾಂಗ್ರೆಸ್ ಮೂರನೇ ಬಾರಿಗೆ ಬಿ.ಎನ್‌.ಚಂದ್ರಪ್ಪ ಅವರನ್ನು ಕಣಕ್ಕಿಳಿಸಿತ್ತು. ಆದರೆ ಮಾಜಿ ಉಪ ಮುಖ್ಯಮಂತ್ರಿ ಬಾಗಲಕೋಟೆಯ ಮುಧೋಳ ಮೂಲದ ಗೋವಿಂದ ಕಾರಜೋಳ ಕೋಟೆನಾಡಿನಲ್ಲಿ ಪುನಃ ಕಮಲ ಅರಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Govinda KarajolaKannada NewsLok Sabharesultvictoryಕನ್ನಡ ನ್ಯೂಸ್ಗೆಲುವುಗೋವಿಂದ ಕಾರಜೋಳಫಲಿತಾಂಶಲೋಕಸಭೆ
Share This Article
Facebook Email Print
Previous Article ಚಿತ್ರದುರ್ಗದಲ್ಲಿ ಬಿಜೆಪಿಗೆ ರೋಚಕ ಗೆಲುವು BREAKING NEWS ಚಿತ್ರದುರ್ಗದಲ್ಲಿ ಬಿಜೆಪಿಗೆ ರೋಚಕ ಗೆಲುವು | ಗೋವಿಂದ ಕಾರಜೋಳ ಕೈ ಹಿಡಿದ ದುರ್ಗದ ಮತದಾರ
Next Article ಗೋವಿಂದ ಕಾರಜೋಳ ಕೊರಳಿಗೆ ವಿಜಯಮಾಲೆ | ಪೈಪೋಟಿಯಿಲ್ಲದೆ ಗೆದ್ದು ಬೀಗಿದ ಬಿಜೆಪಿ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up