By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಜಿಲ್ಲೆಯಲ್ಲಿ ಕೃಷಿ ಖುಷಿ | 25 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ, 35 ಸಾವಿರ ಮೆಟ್ರಿಕ್ ಟನ್ ಬಿತ್ತನೆ ಬೀಜ ಲಭ್ಯ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಜಿಲ್ಲೆಯಲ್ಲಿ ಕೃಷಿ ಖುಷಿ | 25 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ, 35 ಸಾವಿರ ಮೆಟ್ರಿಕ್ ಟನ್ ಬಿತ್ತನೆ ಬೀಜ ಲಭ್ಯ 

ಮುಖ್ಯ ಸುದ್ದಿ

ಜಿಲ್ಲೆಯಲ್ಲಿ ಕೃಷಿ ಖುಷಿ | 25 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ, 35 ಸಾವಿರ ಮೆಟ್ರಿಕ್ ಟನ್ ಬಿತ್ತನೆ ಬೀಜ ಲಭ್ಯ 

News Desk Chitradurga News
Last updated: 12 June 2024 08:56
News Desk Chitradurga News
1 year ago
Share
ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ರೈತ
ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ರೈತ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 12 JUNE 2024

ಚಿತ್ರದುರ್ಗ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆಯು ರೈತರ ಮೊಗದಲ್ಲಿ ನೆಮ್ಮದಿ ಮತ್ತು ಸಂತಸ ಮೂಡಿಸಿದೆ. ಪ್ರಸ್ತುತ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ಅತ್ಯಂತ ಬಿರುಸಿನಿಂದ ನಡೆಯುತ್ತಿದ್ದು, ಜಿಲ್ಲೆಯಲ್ಲಿ 25,045 ಮೆಟ್ರಿಕ್ ಟನ್ ರಸಗೊಬ್ಬರ ಹಾಗೂ 35,000 ಕ್ವಿಂಟಲ್ ಬಿತ್ತನೆ ಬೀಜದ ದಾಸ್ತಾನು ಮಾಡಲಾಗಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆ ಕಾರ್ಯವು ಸುಗಮವಾಗಿ ನಡೆಯುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ | ಹಲವು ಸಂಘಟನೆಗಳು ಭಾಗಿ

ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ: ಜಿಲ್ಲೆಯ ವಾರ್ಷಿಕ ಮಳೆಯು 540 ಮಿ.ಮೀ ಇದೆ. 2024ರ ಜನವರಿಯಿಂದ ಜೂನ್-10 ರವರೆಗೆ 127 ಮಿ.ಮೀ ವಾಡಿಕೆ ಮಳೆಯಾಗಬೇಕಿದ್ದು, ವಾಸ್ತವವಾಗಿ 203 ಮಿ.ಮೀ (ಹೆಚ್ಚುವರಿ ಶೇ.60) ಮಳೆ ಸುರಿದಿತ್ತು. ಬಳಿಕ ಜೂನ್-01 ರಿಂದ ಜೂನ್ 10ರ ವರೆಗಿನ 10 ದಿನಗಳಲ್ಲಿ 24 ಮಿ.ಮೀ ವಾಡಿಕೆ ಮಳೆಗಿಂತ 53 ಮಿ.ಮೀ ಮಳೆ (ಶೇ.121) ಸುರಿದಿದೆ. ಇದರಿಂದಾಗಿ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ಹೆಚ್ಚು ಭರದಿಂದ ನಡೆಯುತ್ತಿವೆ.

35,000 ಕ್ವಿಂಟಾಲ್ ಬಿತ್ತನೆ ಬೀಜ ದಾಸ್ತಾನು: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಜೋಳ, ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ, ತೊಗರಿ, ರಾಗಿ ಸೇರಿ ಒಟ್ಟು 31,801 ಕ್ವಿಂಟಾಲ್ ಬಿತ್ತನೆ ಬೀಜದ ಬೇಡಿಕೆ ಇದ್ದು, ಕೆಎಸ್‍ಎಸ್‍ಸಿ, ಎನ್‍ಎಸ್‍ಸಿ, ಕೆಒಎಫ್ ಸಂಸ್ಥೆಗಳು ಹಾಗೂ ಖಾಸಗಿ ಬಿತ್ತನೆ ಬೀಜ ಸರಬರಾಜುದಾರ ಸಂಸ್ಥೆಗಳಲ್ಲಿ 35,000 ಕ್ವಿಂಟಾಲ್ ಬಿತ್ತನೆ ಬೀಜ ದಾಸ್ತಾನಿದೆ. ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದೆ. ವಿತರಣೆ ಕಾರ್ಯ ಪ್ರಾರಂಭವಾಗಿದ್ದು, 3228 ಕ್ವಿಂಟಾಲ್ ಬಿತ್ತನೆ ಬೀಜ ವಿತರಣೆಯಾಗಿದೆ.

ಇದನ್ನೂ ಓದಿ: ನಟ ದರ್ಶನ್‍ಗೆ ನನ್ನ ಮಗನಿಗೆ ಬಂದ ಸ್ಥಿತಿ ಬರಲಿ | ಕೊಲೆಗಡುಕರು ಎಂದ ತಂದೆ | ಮುಗಿಲು ಮುಟ್ಟಿದ ಆಕ್ರಂಧನ

ಜಿಲ್ಲೆಯಲ್ಲಿ 7,70,702 ಹೆಕ್ಟೇರ್ ಭೌಗೋಳಿಕ ಪ್ರದೇಶವಿದ್ದು, ಮುಂಗಾರು ಹಂಗಾಮಿನಲ್ಲಿ 3,26,748 ಹೆಕ್ಟೇರ್ ಪ್ರದೇಶ ಸಾಗುವಳಿಗೆ ಸಜ್ಜಾಗಿದೆ. ಒಟ್ಟು 3,01,562 ರೈತರು ಸಾಗುವಳಿದಾರರಿದ್ದು, ಆ ಪೈಕಿ 1,19,034 ಅತೀ ಸಣ್ಣ ರೈತರು, 96,837 ಸಣ್ಣ ರೈತರು, 82,102 ಮದ್ಯಮ ರೈತರು ಹಾಗೂ 3,589 ದೊಡ್ಡ ರೈತರಿದ್ದಾರೆ.ಶೇ.8.53ರಷ್ಟು ಬಿತ್ತನೆ ಪ್ರಗತಿ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರಿಗೆ 3,26,748 ಹೆಕ್ಟೇರ್ ಪ್ರದೇಶ ಬಿತ್ತನೆ ಗುರಿ ಇದ್ದು, ಇಲ್ಲಿಯವರೆಗೆ 27,872 ಹೆಕ್ಟೇರ್ ಪ್ರದೇಶ ಬಿತ್ತನೆಯಾಗಿದ್ದು, ಶೇ.8.53ರಷ್ಟು ಪ್ರಗತಿಯಾಗಿದೆ.

ಇದನ್ನೂ ಓದಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಶುಭ‌ ಕೋರಿದ ಗೋವಿಂದ ಕಾರಜೋಳ 

25,045 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ (ಏಪ್ರಿಲ್-2024 ರಿಂದ ಸೆಪ್ಟೆಂಬರ್-2024 ವರೆಗೆ) ಯೂರಿಯಾ, ಡಿ.ಎ.ಪಿ ಹಾಗೂ ಕಾಂಪ್ಲೆಕ್ಸ್ ಸೇರಿ ಒಟ್ಟು 64,171 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇದ್ದು, ಖಾಸಗಿ ಡೀಲರ್ಸ್, ಕೆ.ಎಸ್.ಎಸ್.ಸಿ ಹಾಗೂ ಮಾರುಕಟ್ಟೆ ಫೆಡರಷನ್ ಮೂಲಕ 39,610 ಮೆಟ್ರಿಕ್ ಟನ್ ರಸಗೊಬ್ಬರ ಸರಬರಾಜಾಗಿದೆ ಮತ್ತು 14,565 ಮೆಟ್ರಿಕ್ ಟನ್ ವಿತರಣೆಯಾಗಿದ್ದು, 25,045 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನಿದೆ.ಜಿಲ್ಲೆಯಲ್ಲಿ ಈ ವರ್ಷ ಉತ್ತಮ ಮಳೆಯಾಗುವ ಕುರಿತಂತೆ ಹವಾಮಾನ ಇಲಾಖೆಯ ಮುನ್ಸೂಚನೆಗಳು ಇದ್ದು, ಇದಕ್ಕೆ ಪೂರಕವಾಗಿ ಪೂರ್ವ ಮುಂಗಾರು ಉತ್ತಮವಾಗಿದೆ. ಕೃಷಿ ಚಟುವಟಿಕೆಗಳು ಉತ್ತಮವಾಗಿ ನಡೆಯುತ್ತಿವೆ.

ಇದನ್ನೂ ಓದಿ: ನನಗೆ ನನ್ನ ಪತಿ ಬೇಕು | ಅವರ ಸಾವಿಗೆ ನ್ಯಾಯ ಕೊಡಿ | ರೇಣುಕಾಸ್ವಾಮಿ ಪತ್ನಿಯ ಆಕ್ರಂಧನ

ಜಿಲ್ಲೆಯ ರೈತರು ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಪೂರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಇದ್ದು, ರೈತರು ಯಾವುದೇ ರೀತಿಯ ಆತಂಕ, ಗೊಂದಲಪಡುವ ಅವಶ್ಯಕತೆ ಇಲ್ಲ. ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ವಿತರಣೆ ಮಾಡಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AgricultureavailableChitradurga DistrictChitradurga newsFertilizerKannada NewsSow the seedಕನ್ನಡ ನ್ಯೂಸ್ಕೃಷಿಚಿತ್ರದುರ್ಗ ಜಿಲ್ಲೆಚಿತ್ರದುರ್ಗ ನ್ಯೂಸ್ಬಿತ್ತನೆ ಬೀಜರಸಗೊಬ್ಬರಲಭ್ಯ
Share This Article
Facebook Email Print
Previous Article RENUKA SWAMY ರೇಣುಕಾಸ್ವಾಮಿ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ | ಹಲವು ಸಂಘಟನೆಗಳು ಭಾಗಿ
Next Article Power Cut chitradurga News (3) ವಿದ್ಯುತ್ ವ್ಯತ್ಯಯ | ತ್ರೈಮಾಸಿಕ ನಿರ್ವಹಣಾ ಕಾಮಗಾರಿ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up