Connect with us

    ರೇಣುಕಾಸ್ವಾಮಿ ನಿವಾಸಕ್ಕೆ ಬಿ.ವೈ.ವಿಜಯೇಂದ್ರ ಭೇಟಿ

    ಬಿ.ವೈ.ವಿಜಯೇಂದ್ರ

    ಮುಖ್ಯ ಸುದ್ದಿ

    ರೇಣುಕಾಸ್ವಾಮಿ ನಿವಾಸಕ್ಕೆ ಬಿ.ವೈ.ವಿಜಯೇಂದ್ರ ಭೇಟಿ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 18 JUNE 2024
    ಚಿತ್ರದುರ್ಗ:‌ ನಗರದ ವಿಆರ್‌ಎಸ್‌ ಬಡಾವಣೆಯ ರೇಣುಕಾಸ್ವಾಮಿ ನಿವಾಸಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ತಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಲಿದ್ದಾರೆ.

    ನಟ ದರ್ಶನ್‌ ಮತ್ತು ಆತನ ಸಹಚರರಿಂದ ಹತ್ಯೆಯಾಗಿರುವ ರೇಣುಕಾಸ್ವಾಮಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ವಿಜಯೇಂದ್ರ ಮಂಗಳವಾರ ಆಗಮಿಸುತ್ತಿದ್ದಾರೆ. ನಿಗಧಿಯಂತೆ ಬೆಳಿಗ್ಗೆ 10.45 ರಿಂದ 11.30 ರೊಳಗೆ ರೇಣುಕಾ ಸ್ವಾಮಿಗೆ ಮನೆಗೆ ಆಗಮಿಸಿ ರೇಣುಕಾಸ್ವಾಮಿ ಪತ್ನಿ, ತಂದೆ, ತಾಯಿಗೆ ಸಾಂತ್ವನ ಹೇಳಲಿದ್ದಾರೆ. ಬಳಿಕ ಬೋವಿ ಗುರುಪೀಠಕ್ಕೆ ತೆರಳಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ಆಶೀರ್ವಾದ ಪಡೆಯಲಿದ್ದಾರೆ. ಅಲ್ಲಿಂದ ಚನ್ನಗಿರಿಗೆ ಪ್ರವಾಸ ಬೆಳೆಸಲಿದ್ದಾರೆ.

    ಕ್ಲಿಕ್ ಮಾಡಿ ಓದಿ: ರೇಣುಕಸ್ವಾಮಿ ಮನೆಗೆ ಗೃಹ ಸಚಿವರ ಬಾಲ ಹಿಡಿದು ಬರ್ತಾರಾ

    ಬೆಂಗಳೂರಿನಿಂದ ಬೆಳಿಗ್ಗೆ 8 ಗಂಟೆಗೆ ಪ್ರವಾಸ ಪ್ರಾರಂಭಿಸಲಿರುವ ವಿಜಯೇಂದ್ರ 8.45ಕ್ಕೆ ತುಮಕೂರಿಗೆ ಆಗಮಿಸಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದು ರೇಣುಕಾಸ್ವಾಮಿ ನಿವಾಸಕ್ಕೆ ಬರುತ್ತಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top