CHITRADURGA NEWS | 21 JUNE 2024
ಚಿತ್ರದುರ್ಗ: ಆಗಸ್ಟ್ 8ರಂದು ಎಸ್.ಜೆ.ಎಂ. ವಿದ್ಯಾಪೀಠದ ಸಂಸ್ಥಾಪಕರಾದ ಲಿಂ. ಜಗದ್ಗುರು ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳ ಸ್ಮರಣೋತ್ಸವವನ್ನು ಎಸ್.ಜೆ.ಎಂ. ವಿದ್ಯಾಪೀಠದ ಸಂಸ್ಥಾಪನಾ ದಿನವನ್ನಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಮುರುಘರಾಜೇಂದ್ರ ವಿದ್ಯಾಪೀಠ ಹಾಗೂ ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯಮಟ್ಟದ ಭೋವಿ ಜನೋತ್ಸವ 18ಕ್ಕೆ | ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ
ಶ್ರೀಮಠದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಹಮ್ಮಿಕೊಂಡಿರುವ ಯೋಗ ಸಂಭ್ರಮ 2024ರ ಸಮಾರೋಪ ಶಿವಯೋಗ ಪ್ರಾತ್ಯಕ್ಷಿಕೆಯ ನೇತೃತ್ವ ವಹಿಸಿದ್ದ ಸಂದರ್ಭದಲ್ಲಿ ವಿಷಯ ಪ್ರಸ್ತಾಪಿಸಿದರು.
ಸಂಸ್ಥಾಪನಾ ದಿನದ ಅಂಗವಾಗಿ ವಿದ್ಯಾಪೀಠ ನಡೆದುಬಂದ ದಾರಿ, ಶ್ರೀಗಳವರ ವ್ಯಕ್ತಿತ್ವ ಸಾಧನೆಯ ಕುರಿತಾದ ಗೋಷ್ಟಿಗಳು, ಹೊಳಲ್ಕೆರೆಯ ಒಂಟಿಕಂಬದ ಮುರುಘಾಮಠದಲ್ಲಿ ನಡೆಯಲಿವೆ ಎಂದರು.
ಇದನ್ನೂ ಓದಿ: ಮೋಡ ಮುಸುಕಿದ ವಾತಾವರಣ | ಮೆಕ್ಕೆಜೋಳಕ್ಕೆ ಲದ್ದಿ ಹುಳು ಕಾಟ
ಆಗಸ್ಟ್ 5ರಿಂದ ಆರಂಭವಾಗುವ ಶ್ರಾವಣಮಾಸದ ನಿಮಿತ್ತ ಜಿಲ್ಲೆಯ ಎಲ್ಲ ತಾಲ್ಲೂಕು, ಹಳ್ಳಿಗಳಲ್ಲಿ ಶ್ರೀಮಠದ ವತಿಯಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
