
CHITRADURGA NEWS | 22 JUNE 2024
ಚಿತ್ರದುರ್ಗ: ಇಂದಿನ ವೇಗದ ಜೀವನಶೈಲಿಯಲ್ಲಿ ಹೆಚ್ಚುತ್ತಿರುವ ಒತ್ತಡ ಮತ್ತು ಕಲುಷಿತ ವಾತಾವರಣ, ರಾಸಾಯನಿಕಯುಕ್ತ ಆಹಾರದಿಂದಾಗಿ ಅನಾರೋಗ್ಯದ ಸುಳಿಯಲ್ಲಿ ಸಿಲುಕುತ್ತಿರುವ ನಮ್ಮ ಬದುಕಿಗೆ ಯೋಗ ಅನುಕೂಲ ಎಂದು ಆಯುಷ್ ವೈದ್ಯಾಧಿಕಾರಿ ಡಾ.ವಿಜಯಲಕ್ಷ್ಮಿ ತಿಳಿಸಿದರು.
ಇದನ್ನೂ ಓದಿ: ದೆಹಲಿ ಸಿಎಂ ಕೇಜ್ರಿವಾಲ್ ಬಿಡುಗಡೆ | ಚಿತ್ರದುರ್ಗ ಎಎಪಿ ಕಾರ್ಯಕರ್ತರ ಸಂಭ್ರಮ

ಭಾರತೀಯ ಯೋಗ ಶಿಕ್ಷಣ ಸಂಸ್ಥೆ ವತಿಯಿಂದ ನಗರದ ಶ್ರೀ ಪ್ರಸನ್ನವೆಂಕಟೇಶ್ವರ ಸ್ವಾಮಿ ದೇವಸ್ಥಾನ ಆವರಣದಲ್ಲಿ ಆಯೋಜಿಸಿದ್ದ ಯೋಗೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು.
ಯೋಗ ಮತ್ತು ಧ್ಯಾನ ನಮ್ಮ ಮನಸ್ಸಿನ ಆಂತರಿಕ ಶಕ್ತಿಗಳನ್ನು ಜಾಗೃತಿಗೊಳಿಸುವ ಕ್ರಿಯೆಯಾಗಿದೆ. ಧ್ಯಾನ ದೇಹ, ಮನಸ್ಸು ಆತ್ಮಗಳನ್ನು ಒಟ್ಟುಗೂಡಿಸಿ ಆತ್ಮಾನಂದವನ್ನು ನೀಡುವುದು. ಇದು ನಮ್ಮ ಮೆದುಳಿನಲ್ಲಿ ಸುಳಿದಾಡುವ ಅನಾವಶ್ಯಕ ಆಲೋಚನೆಯನ್ನು ನಿಗ್ರಹಿಸುವುದರ ಜೊತೆಗೆ ಮನಸ್ಸಿನ ದುರಾಲೋಚನೆಗಳನ್ನು ನಿರ್ಬಂಧಿಸುತ್ತದೆ.
ಇಂದ್ರಿಯಗಳು ಮನಸ್ಸಿನ ಮೇಲೆ ಹಿಡಿತವನ್ನು ಸಾಧಿಸುವ ಕೌಶಲ್ಯಪೂರ್ಣ ವಿಜ್ಞಾನವೇ ಯೋಗವಾಗಿದೆ ಇಂತಹ ಅದ್ಬುತ ಕಲೆಯನ್ನು ನಮಗಾಗಿ ಮತ್ತು ಸಮಾಜದ ಆರೋಗ್ಯಕ್ಕಾಗಿ ಎಲ್ಲರೂ ಯೋಗವನ್ನು ತಮ್ಮ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕು ಎಂದರು.
ಇದನ್ನೂ ಓದಿ: ಆಯಾ ಹುದ್ದೆ | ಅರ್ಜಿ ಆಹ್ವಾನ
ಹಿರಿಯ ಯೋಗ ಶಿಕ್ಷಕ ಭರಮಸಾಗರ ತಿಪ್ಪೇಸ್ವಾಮಿ ಎಲ್ಲರಿಗೂ ಅಂತರಾಷ್ಟ್ರೀಯ ಯೋಗ ದಿನದ ಶಿಷ್ಟಾಚಾರದ ಯೋಗಭ್ಯಾಸವನ್ನು ಮಾಡಿಸಿ ಮಾತನಾಡಿ, ನಾವು ನಮ್ಮ ಆರೋಗ್ಯ ಮಾತ್ರ ಚೆನ್ನಾಗಿಟ್ಟುಕೊಂಡರೆ ಸಾಲದು ನಮ್ಮ ಕುಟುಂಬದ ಸದಸ್ಯರು ನಮ್ಮ ಮನೆಯ ಅಕ್ಕಪಕ್ಕದವರ ಆರೋಗ್ಯ ಮತ್ತು ಇಡೀ ಸಮಾಜ ಜನರು ಆರೋಗ್ಯದಿಂದಿರಬೇಕು.

ನಾವು ಮಾತ್ರ ಯೋಗಭ್ಯಾಸ ಮಾಡಿದರೆ ಸಾಲದು ನಮ್ಮ ಜೊತೆಗೆ ಸಮಾಜದ ಇತರರನ್ನೂ ಯೋಗ ಮಾಡುವಂತೆ ಪ್ರೇರೇಪಿಸಬೇಕು. ಈ ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಉದ್ದೇಶವು ಅದೇ ಆಗಿದೆ ನಮ್ಮ ದೇಶ ಸದೃಢವಾಗಿರಲು ನಾವೆಲ್ಲರೂ ರೋಗಮುಕ್ತ ಮತ್ತು ಔಷಧಮುಕ್ತ ಜೀವನ ನಡೆಸಬೇಕು, ಎಲ್ಲರೂ ಪ್ರತಿದಿನ ಒಂದುಗಂಟೆ ಯೋಗಭ್ಯಾಸ ಮಾಡಬೇಕು ಎಂದು ತಿಳಿಸಿದರು.
ಭಾರತೀಯ ಯೋಗ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರವಿ ಕೆ.ಅಂಬೇಕರ್ ಮಾತನಾಡಿ, ಭಾರತೀಯ ಯೋಗ ಶಿಕ್ಷಣ ಸಂಸ್ಥೆಯು ಹೊಸದಾಗಿ ಯೋಗ ಕಲಿಯಲು ಬಯಸುವ ಸಾಧಕರಿಗೆ ಎಂದಿಗೂ ಪ್ರೋತ್ಸಾಹ ನೀಡುತ್ತಾ ಬಂದಿದೆ. ಗ್ರಾಮೀಣ ಭಾಗಗಳಲ್ಲಿ ಯೋಗದ ಮಹತ್ವವನ್ನು ಸಾರಲು ಅನೇಕ ಉಚಿತ ಯೋಗ ಶಿಬಿರಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ.
ಇದನ್ನೂ ಓದಿ: ಪಹಣಿಗೆ ಆಧಾರ್ ಜೋಡಣೆಗೆ ಟಾರ್ಗೆಟ್ ಫಿಕ್ಸ್ ಮಾಡಿದ ಡಿಸಿ
ನಮಗೆ ಶಿಬಿರ ನಡೆಸಲು ಸ್ಥಳ ಮತ್ತು ಯೋಗಾಸಕ್ತರನ್ನು ಸೇರಿಸಿದರೆ ಸಾಕು, ನಮ್ಮ ಶಿಕ್ಷಕರು ಬಂದು ಅವರಿಗೆ ಪ್ರತಿದಿನ ಮಾಡುವ ಯೋಗಭ್ಯಾಸವನ್ನು ಕಲಿಸಿಕೊಡುತ್ತಾರೆ. ಎಲ್ಲರೂ ಕೈಜೋಡಿಸಿದರೆ ಉತ್ತಮ ಆರೋಗ್ಯವಂತ ಸಮಾಜವನ್ಜು ನಿರ್ಮಾಣ ಮಾಡಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಯೋಗ ಸಾಧಕರಾದ ಶ್ರೀಮತಿ ವನಜಾಕ್ಷಮ್ಮ, ನಿರ್ಮಲಾ, ತಿಪ್ಪಮ್ಮ, ನಳಿನಾ, ರೂಪ, ರೇಣುಕಾ, ಅನಸೂಯ, ಅಂಬುಜಾಕ್ಷಿ, ಅನಿತ ಭಾಗ್ಯಲಕ್ಶ್ಮಿ, ದೀಪಾ ಶೈಲಜಾರೆಡ್ಡಿ, ಸುಜಾತ, ಸುಧಾ, ಚೈತ್ರಾ, ಚಿತ್ರಾ, ಮಂಜುಳಾ, ವಸಂತಲಕ್ಷ್ಮಿ, ಮಲ್ಲಿಕಾರ್ಜುನಚಾರ್, ಶಿವಪ್ರಸಾದ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
