
CHITRADURGA NEWS | 30 JUNE 2024
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಈವರೆಗೆ ಕೇಂದ್ರೀಯ ವಿದ್ಯಾಲಯ ಪ್ರಾರಂಭವಾಗಿಲ್ಲ. ಈ ನಿಟ್ಟಿನಲ್ಲಿ ಚುನಾವಣೆಯಲ್ಲಿ ಗೆದ್ದು ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಕ್ಷಣ ಗೋವಿಂದ ಕಾರಜೋಳ ಕಾರ್ಯಪ್ರವೃತ್ತರಾಗಿದ್ದಾರೆ.
ಮೊದಲ ಅಧಿವೇಶನಕ್ಕೆ ದೆಹಲಿಗೆ ತೆರಳಿದ ಸಂದರ್ಭದಲ್ಲಿ ಕೇಂದ್ರದ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: ಬಯಲು ಸೀಮೆಯ ಊಟಿ | ಸ್ವರ್ಗವ ನಾಚಿಸುವ ಜೋಗಿಮಟ್ಟಿ ಬಗ್ಗೆ ನಿಮಗೆಷ್ಟು ಗೊತ್ತು..!
ಈ ಹಿಂದೆಯೇ ಚಿತ್ರದುರ್ಗದಲ್ಲಿ ಕೇಂದ್ರೀಯ ವಿದ್ಯಾಲಯ ಆರಂಭಿಸಲು ಅಗತ್ಯವಿರುವ ಎಲ್ಲ ಪ್ರಕ್ರಿಯೆಗಳನ್ನು ಮಾಡಲಾಗಿತ್ತು. ಕಟ್ಟಡವೂ ಅಂತಿಮವಾಗಿತ್ತು. ಆದರೆ, ತರಗತಿಗಳು ಪ್ರಾರಂಭವಾಗಿರಲಿಲ್ಲ. ಈ ವರ್ಷ ವಿದ್ಯಾಲಯ ಕಾರ್ಯಾರಂಭ ಮಾಡಬೇಕು ಎಂದು ಮನವಿ ಮಾಡಿ ಪತ್ರವನ್ನೂ ಕೊಟ್ಟಿದ್ದಾರೆ.
ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಬೇಗ ಕೇಂದ್ರೀಯ ವಿದ್ಯಾಲಯ ಪ್ರಾರಂಭಿಸುವ ಕುರಿತು ಸಂಸದ ಗೋವಿಂದ ಕಾರಜೋಳ ಅವರಿಗೆ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: EXPRESS ರೈಲುಗಳ ನಿಲುಗಡೆ ಕೋರಿ ಕೇಂದ್ರ ಸಚಿವರಿಗೆ ಗೋವಿಂದ ಕಾರಜೋಳ ಮನವಿ
ಜಿಲ್ಲೆಯ ಬಹುದಿನಗಳ ಕನಸಾಗಿರುವ ಕೇಂದ್ರೀಯ ವಿದ್ಯಾಲಯ ಈ ವರ್ಷವಾದರೂ ಕಾರ್ಯರಂಭ ಮಾಡಬಹುದೇ ಎನ್ನುವು ಹೊಸ ನಿರೀಕ್ಷೆಯೊಂದಿಗೆ ಜಿಲ್ಲೆಯ ಜನರಲ್ಲಿ ಮತ್ತೆ ಹೊಸ ಕನಸು ಚಿಗುರೊಡೆದಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
