
CHITRADURGA NEWS | 12 JULY 2024
ಚಿತ್ರದುರ್ಗ: ನಗರದ ಮುರುಘಾ ಮಠದಲ್ಲಿ (ಒuಡಿughಚಿ ಒuಣಣ) ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರ ಬೆಳ್ಳಿ ಪುತ್ಥಳಿ ನಾಪತ್ತೆ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮಠದ ದರ್ಬಾರ್ ಹಾಲ್ನಲ್ಲಿದ್ದ 22 ಕೆ.ಜಿ. ತೂಕದ ಬೆಳ್ಳಿ ಪುತ್ಥಳಿ ಕಳ್ಳತನವಾಗಿರುವ ಬಗ್ಗೆ ಮಠದ ಆಡಳಿತ ಮಂಡಳಿ ಸದಸ್ಯ ಡಾ.ಶ್ರೀ ಬಸವಕುಮಾರ ಸ್ವಾಮೀಜಿ ಗುರುವಾರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಠದ ಸಿಬ್ಬಂದಿಯೊಬ್ಬರು ಬುಧವಾರ ದರ್ಬಾರ್ ಹಾಲ್ಗೆ ತೆರಳಿದಾಗ ಪುತ್ಥಳಿ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ಈ ವೇಳೆ ಜುಲೈ 4ರಂದು ಕಡೆಯದಾಗಿ ಪ್ರತಿಮೆ ನೋಡಿದ್ದಾಗಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಠದಲ್ಲಿ ಆಂತರಿಕ ತನಿಖೆ ನಡೆಸಿದಾಗ ಪುತ್ಥಳಿ ಕುರಿತ ಯಾವುದೇ ಮಾಹಿತಿ ಲಭ್ಯವಾಗಿಲ್ಲ.21 ಇಂಚು ಎತ್ತರದ ಪುತ್ಥಳಿಯು ₹ 16 ಲಕ್ಷ ಮೌಲ್ಯ ಹೊಂದಿದೆ.
ಕ್ಲಿಕ್ ಮಾಡಿ ಓದಿ: ಮುರುಘಾ ಮಠದಲ್ಲಿ ಕಳ್ಳರ ಕೈಚಳಕ | ಶಿವಮೂರ್ತಿ ಮುರುಘಾ ಶರಣರ ಬೆಳ್ಳಿ ಪುತ್ಥಳಿ ಕಳವು


ಘಟನೆ ಬಗ್ಗೆ ಮುರುಘಾ ಮಠದ ಟ್ರಸ್ಟ್ ಮತ್ತು ಎಸ್ಜೆಎಂ ವಿದ್ಯಾಪೀಠದ ಆಡಳಿತ ನಿರ್ವಹಣಾ ಸಮಿತಿ ಅಧ್ಯಕ್ಷ ಶಿವಯೋಗಿ ಸಿ. ಕಳಸದ ಅವರ ಮೌಖಿಕ ಸೂಚನೆ ಮೇರೆಗೆ ಬಸವ ಕುಮಾರ ಸ್ವಾಮೀಜಿ ಗುರುವಾರ ಗ್ರಾಮಾಂತರ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: Car accident: ಹೆದ್ದಾರಿಯಲ್ಲಿ ಕಾರು ಅಪಘಾತ | ಕೃಷಿ ಪತ್ತಿನ ಸಹಕಾರ ಸಂಘದ ಮೂವರು ಮೃತ
ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರ ಪೀಠಾರೋಹಣದ ರಜತೋತ್ಸವ ಸಮಾರಂಭದಲ್ಲಿ ವಿವಿಧ ಮಠಾಧೀಶರು ಸ್ವಾಮೀಜಿ ಅವರಿಗೆ ಬೆಳ್ಳಿ ಪುತ್ಥಳಿ ಅರ್ಪಿಸಿದ್ದರು. ಈ ಸಂಭ್ರಮಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್ ಸಾಕ್ಷಿಯಾಗಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
