CHITRADURGA NEWS | 31 JULY 2024
ಚಿತ್ರದುರ್ಗ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಅವರನ್ನು ವರ್ಗಾವಣೆ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ.
ನವದೆಹಲಿಯ ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ (NTRO) ಪೇ ಮ್ಯಾಟ್ರಿಕ್ಸ್ ಹಂತ 12ರ ವಿಜ್ಞಾನಿಯನ್ನಾಗಿ ಧರ್ಮೇಂದರ್ ಕುಮಾರ್ ಮೀನಾ ನೇಮಕವಾಗಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಎಸ್ಪಿಯಾಗಿ ಧರ್ಮೇಂದರ್ ಕುಮಾರ್ ಮೀನಾ
ಧರ್ಮೇಂದರ್ ಕುಮಾರ್ ಮೀನಾ ಅವರಿಂದ ತೆರವಾಗಿರುವ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ಯಾವುದೇ ನೇಮಕಾತಿ ಮಾಡಿಲ್ಲ.
11 ತಿಂಗಳ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಕೆ.ಪರಶುರಾಂ ಅವರಿಂದ ತೆರವಾಗಿದ್ದ ಹುದ್ದೆಗೆ ಧರ್ಮೇಂದರ್ ಕುಮಾರ್ ಮೀನಾ ಬಂದಿದ್ದರು.
ಇದನ್ನೂ ಓದಿ: 106 ಜನರಿಗೆ 4.80 ಕೋಟಿ ರೂ. ವಂಚನೆ | ಚಿತ್ರದುರ್ಗ ಜಿಲ್ಲೆಯಲ್ಲಿ ಬಯಲಿಗೆ ಬಂತು ದೊಡ್ಡ ವಂಚನೆ ಪ್ರಕರಣ
ಚಿಕ್ಕಜಾಜೂರಿನ ರೈಲ್ವೇ ಉದ್ಯೋಗಿಗಳಿಗೆ ಸುಮಾರು 5 ಕೋಟಿ ವಂಚನೆ ಮಾಡಿ ವಿದೇಶಕ್ಕೆ ಪರಾರಿಯಾಗಿದ್ದ ಆಂಧ್ರಪ್ರದೇಶದ ಕೋಡೆ ರಮಣಯ್ಯ ಪ್ರಕರಣಕ್ಕೆ ಮರು ಜೀವ ನೀಡಿ ಬಡ್ಸ್ ಕಾಯ್ದೆ ದಾಖಲಿಸಿ ವಿಯೆಟ್ನಾಂನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಎಡೆಮುರಿ ಕಟ್ಟುವಂತೆ ಮಾಡಿದ್ದ ಕೀರ್ತಿ ಧರ್ಮೇಂದರ್ ಕುಮಾರ್ ಮೀನಾ ಅವರಿಗೆ ಸಲ್ಲುತ್ತದೆ.

ಕೇಂದ್ರ ಸರ್ಕಾರದ ಸೇವೆಗೆ ಮೀನಾ:
2021ರ ಕರ್ನಾಟಕ ಬ್ಯಾಚಿನ ಐಪಿಎಸ್ ಅಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಅವರನ್ನು ನವದೆಹಲಿಯ ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆಯ ವಿಜ್ಞಾನಿಯನ್ನಾಗಿ ನೇಮಕ ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ: 4.80 ಕೋಟಿ ವಂಚಿಸಿ ವಿಯೆಟ್ನಾಂ ಸೇರಿದ್ದ ಆರೋಪಿ ಅಂದರ್ | ಕೋಡೆ ರಮಣಯ್ಯನಿಗೆ ಹೆಡೆಮುರಿ ಕಟ್ಟಿದ ಚಿತ್ರದುರ್ಗ ಪೊಲೀಸ್
ಡೆಪ್ಟೇಷನ್ ಆಧಾರದಲ್ಲಿ 4 ವರ್ಷದ ಅವಧಿಗೆ ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಶೊಧನಾ ಸಂಸ್ಥೆಗೆ ವರ್ಗಾವಣೆ ಮಾಡಿ ಕೇಂದ್ರ ಸರ್ಕಾರದ ಕಾರ್ಯದರ್ಶಿ ಸಂಜೀವ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
