By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Murugha Mata ; ಈಚಘಟ್ಟದಲ್ಲಿ ಮುರುಘಾ ಮಠದ ಕಾರ್ಯಕ್ರಮ | ಅನುಭಾವ ಶ್ರಾವಣಕ್ಕೆ ಹಲವು ಮಠಾಧೀಶರು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Murugha Mata ; ಈಚಘಟ್ಟದಲ್ಲಿ ಮುರುಘಾ ಮಠದ ಕಾರ್ಯಕ್ರಮ | ಅನುಭಾವ ಶ್ರಾವಣಕ್ಕೆ ಹಲವು ಮಠಾಧೀಶರು

ಮುಖ್ಯ ಸುದ್ದಿ

Murugha Mata ; ಈಚಘಟ್ಟದಲ್ಲಿ ಮುರುಘಾ ಮಠದ ಕಾರ್ಯಕ್ರಮ | ಅನುಭಾವ ಶ್ರಾವಣಕ್ಕೆ ಹಲವು ಮಠಾಧೀಶರು

News Desk Chitradurga News
Last updated: 8 August 2024 08:22
News Desk Chitradurga News
11 months ago
Share
ಹೊಳಲ್ಕೆರೆ ತಾಲೂಕಿನ ಈಚಘಟ್ಟ ಗ್ರಾಮದಲ್ಲಿ ಅನುಭಾವ ಶ್ರಾವಣ ಸರಣಿ ಚಿಂತನ ಕಾರ್ಯಕ್ರಮ ಉದ್ಘಾಟನೆ
ಹೊಳಲ್ಕೆರೆ ತಾಲೂಕಿನ ಈಚಘಟ್ಟ ಗ್ರಾಮದಲ್ಲಿ ಅನುಭಾವ ಶ್ರಾವಣ ಸರಣಿ ಚಿಂತನ ಕಾರ್ಯಕ್ರಮ ಉದ್ಘಾಟನೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 08 AUGUST 2024

ಹೊಳಲ್ಕೆರೆ: ಶ್ರಾವಣ ಮಾಸ ಅಂದರೆ ಅದು ಚಿನ್ನದಂತಹ ಸಮಯ, ಕಾರಣ ಆ ತಿಂಗಳಲ್ಲಿ ಜನರಲ್ಲಿ ಚಿಂತನೆಗಳ ಮೂಲಕ ಅರಿವು ಜ್ಞಾನ ಆ ಮೂಲಕ ಅನುಭಾವ ಬಿತ್ತಿ ಜನರಲ್ಲಿ ಜಾಗೃತಿ ಮೂಡಿಸುವಂತಹ ಸಂದರ್ಭವಿದು, ಅಂತಹ ಸನ್ನಿವೇಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ರಾವಂದೂರು ಮುರುಘಾಮಠದ ಶ್ರೀ ಮೋಕ್ಷಪತಿ ಸ್ವಾಮೀಜಿಯವರು ಹೇಳಿದರು.

ಕ್ಲಿಕ್ ಮಾಡಿ ಓದಿ: Mysore; ರಘುಚಂದನ್ ನೇತೃತ್ವ | ಮೈಸೂರು ಪಾದಯಾತ್ರೆಗೆ ತೆರಳಿದ ನೂರಾರು ಬಿಜೆಪಿ ಕಾರ್ಯಕರ್ತರು

ಚಿತ್ರದುರ್ಗದ ಮುರುಘಾ ಮಠದ ವತಿಯಿಂದ ಹೊಳಲ್ಕೆರೆ ತಾಲೂಕಿನ ಈಚಘಟ್ಟ ಗ್ರಾಮದಲ್ಲಿ ಆಯೋಜಿಸಿದ್ದ ಅನುಭಾವ ಶ್ರಾವಣ ಸರಣಿ ಚಿಂತನ ಕಾರ್ಯಕ್ರವನ್ನು ಉದ್ಘಾಟಿಸಿ  ಮಾತನಾಡಿದ ಶ್ರೀಗಳು,

ನಮ್ಮ ಪೂರ್ವಿಕರು ಪ್ರತಿಯೊಂದು ಮಾಸದಲ್ಲಿ ಏನೇನು ಮಾಡಬೇಕೆಂಬುದನ್ನು, ಅವರು ವೈಜ್ಞಾನಿಕ ಹಿನ್ನೆಲೆಯಲ್ಲಿ ನಿರೂಪಿಸಿ ಕೊಟ್ಟಿದ್ದಾರೆ. ಅವುಗಳನ್ನು ಅನುಸರಣೆ ಮಾಡುವ ಮೂಲಕ ನಮ್ಮ ಬದುಕನ್ನು ಹಸನು ಮಾಡಿಕೊಳ್ಳುವ ಹಿನ್ನೆಲೆಯಲ್ಲಿ ಮುಂದಾಗಬೇಕಿದೆ, ಹೇಗೆ ನಾವು ಸೇವಿಸುವ ಆಹಾರದಲ್ಲಿ ಸವಿಯನ್ನು ಬಯಸುತ್ತೇತೇವೆಯೋ ಹಾಗೆ ನಾವು ಅರಿವು ಜ್ಞಾನ ಪಡೆಯಲು ಅನುಭಾವದ ಸವಿಯ ಸಾರವನ್ನು ಪಡೆದರೆ ಜೀವನ ಸಾರವಾಗುತ್ತದೆ ಎಂದು ನೀಡಿದರು.

ಹಳ್ಳಿಗಳು ನಮ್ಮ ದೇಶದ ಜೀವನಾಡಿಗಳು. ಇಲ್ಲಿ ಸುಸಂಸ್ಕೃತಿಯ ಅನಾವರಣವಾಗಿದೆ ಎಂಬುದಕ್ಕೆ ಇಲ್ಲಿನ ಗ್ರಾಮಸ್ಥರು ತೋರಿದ, ನಡೆದುಕೊಂಡ ಪರಿ ನನ್ನನ್ನು ಮುಖ ವಿಸ್ಮಿತನನ್ನಾಗಿಸಿದೆ, ಎಲ್ಲೋ ಒಂದು ಕಡೆ ನವನಾಗರೀಕತೆಯ ಕಡೆಗೆ ಒಳಗಾಗಿ ನಮ್ಮ ನಡೆ-ನುಡಿ ಆಚಾರ ವಿಚಾರಗಳಿಗೆ ವ್ಯಾತೀರಿಕ್ತವಾಗಿ ನಡೆದುಕೊಂಡಿರುವುದು ನಿಜಕ್ಕೂ ಅಭಿನಂಧನಿಯಾ ಎಂದು ಗುರುಮಠಕಲ್ ಖಾಸಾ ಮಠದ ಶಾಂತವೀರ ಗುರು ಮುರುಘಾ ರಾಜೇಂದ್ರ ಸ್ವಾಮೀಜಿ ಹೇಳಿದರು.

ಕ್ಲಿಕ್ ಮಾಡಿ ಓದಿ: Railway: ಕೇಂದ್ರ ಬಜೆಟ್‌ನಲ್ಲಿ ಚಿತ್ರದುರ್ಗ ರೈಲ್ವೇ ಯೋಜನೆಗೆ 150 ಕೋಟಿ

ಪ್ರತಿ ಹಳ್ಳಿ ನಗರ ಪಟ್ಟಣಗಳ ಹಿಂದೆ ಒಂದು ಚರಿತ್ರೆಯಿದೆ. ಹಾಗೆ ಈಚಘಟ್ಟ ಗ್ರಾಮಕ್ಕೂ ಇದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಈ ಸಮಾರಂಭವು ಮುಂದಿನ ಪೀಳಿಗೆಗೆ ಇತಿಹಾಸವಾಗುತ್ತದೆ. ನಾವು ಯಾವುದನ್ನು ಅಲಕ್ಷ್ಯ ಮಾಡುವಂತಿಲ್ಲ. ಗ್ರಾಮದಲ್ಲಿ ಎಂತಹ ಸಂಸ್ಕಾರದ ಸೊಬಗು ಇದೆ ಎಂಬುದಕ್ಕೆ ಈ ಕಾರ್ಯಕ್ರಮವೇ ಸಾಕ್ಷಿ. ಇದು ಇನ್ನೂ ಮತ್ತಷ್ಟು ಬೆಳೆದು ಬೆಳಗಬೇಕು ಎಂದು ಸಾನಿಧ್ಯ ವಹಿಸಿದ್ದ ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಹಾಗೂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ವೇಳೆ ದಾವಣಗೆರೆ ವಿರಕ್ತಮಠದ ಬಸವ ಪ್ರಭು ಸ್ವಾಮೀಜಿ, ಹೊಳಲ್ಕೆರೆಯ ಮಾಜಿ ಶಾಸಕರಾದ ಪಿ .ರಮೇಶ್, ವಕೀಲರಾದ ಜಿ.ಎಚ್. ಶಿವಕುಮಾರ್, ರೈತ ಮುಖಂಡ ಈಚಘಟ್ಟದ ಸಿದ್ಧವಿರಪ್ಪ, ನಿವೃತ್ತ ಪ್ರಾಚಾರ ಎಸ್.ಎಂ.ಕೊಟ್ರೇಶಪ್ಪ ಇವರುಗಳು ಮಾತನಾಡಿದರು.

ಕ್ಲಿಕ್ ಮಾಡಿ ಓದಿ: Power cut: ಏಳು ದಿನ ವಿದ್ಯುತ್‌ ವ್ಯತ್ಯಯ | ಬೆಸ್ಕಾಂ ಮಾಹಿತಿ

ಕಾರ್ಯಕ್ರಮಕ್ಕೂ ಮುನ್ನ ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ತಜ್ಞ ವೈದ್ಯರುಗಳಿಂದ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆಸಲಾಯಿತು.

ಕಾರ್ಯಕ್ರಮಕ್ಕು ಮುನ್ನ ಗ್ರಾಮದಲ್ಲಿ ಸಸಿ ನೆಡಲಾಯಿತು. ಈ ಸಂದರ್ಭದಲ್ಲಿ ಮುರುಘೇಶ ಶ್ರೀಗಳು, ತಿಪ್ಪೇರುದ್ರ ಸ್ವಾಮಿಗಳು, ಗ್ರಾಮದ ಧರ್ಮದರ್ಶಿ ಎಂ.ಪ್ರಸನ್ನ ಕುಮಾರ್, ವೀರಭದ್ರ ಸ್ವಾಮಿ ದೇವಾಲಯದ ಹಿರಿಯ ಅರ್ಚಕರಾದ ವೀರಭದ್ರಪ್ಪ, ಕಾರ್ಯದರ್ಶಿ ಕೆ.ಎಸ್. ಮಾದೇವಪ್ಪ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsexperienceIchaghattaKannada Latest NewsMuruga MathProgramShravanThe abbotಅನುಭಾವಈಚಘಟ್ಟಕನ್ನಡ ಲೇಟೆಸ್ಟ್ ನ್ಯೂಸ್ಕಾರ್ಯಕ್ರಮಚಿತ್ರದುರ್ಗಚಿತ್ರದುರ್ಗ ನ್ಯೂಸ್ಮಠಾಧೀಶರುಮುರುಘಾ ಮಠಶ್ರಾವಣ
Share This Article
Facebook Email Print
Previous Article arecanut price list Today AdikeRate: ಅಡಿಕೆ ಧಾರಣೆ | ಆಗಸ್ಟ್ 07 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
Next Article ವಾಣಿವಿಲಾಸ ಸಾಗರ ಜಲಾಶಯ VV Sagara: ವಿವಿ ಸಾಗರಕ್ಕೆ ಹರಿದು ಬಂತು 2195 ಕ್ಯೂಸೆಕ್ ನೀರು
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜುಲೈ 01 | ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ, ಮನೆಯಲ್ಲಿ ಶುಭ ಕಾರ್ಯಗಳ ಪ್ರಸ್ತಾಪ, ನಿರುದ್ಯೋಗಿಗಳಿಗೆ ಶುಭ ಸುದ್ದಿ
Dina Bhavishya
ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up