By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Horticulture training: ಶಾಲಾ ಮಕ್ಕಳಿಗೆ ತೋಟಗಾರಿಕೆ ತರಬೇತಿ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Horticulture training: ಶಾಲಾ ಮಕ್ಕಳಿಗೆ ತೋಟಗಾರಿಕೆ ತರಬೇತಿ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ಮುಖ್ಯ ಸುದ್ದಿ

Horticulture training: ಶಾಲಾ ಮಕ್ಕಳಿಗೆ ತೋಟಗಾರಿಕೆ ತರಬೇತಿ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

News Desk Chitradurga News
Last updated: 8 August 2024 15:43
News Desk Chitradurga News
11 months ago
Share
Horticulture training
ಚಿತ್ರದುರ್ಗ ನಗರದ ತೋಟಗಾರಿಕೆ ಇಲಾಖೆ ಸಭಾಂಗಣದಲ್ಲಿ ಗುರುವಾರ ತೋಟಗಾರಿಕೆ ಇಲಾಖೆಯಿಂದ ಆಯೋಜಿಸಿದ್ದ ತೋಟಗಾರಿಕೆ ದಿನಾಚರಣೆಯಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ವಿದ್ಯಾರ್ಥಿಗಳಿಗೆ ತರಕಾರಿ, ಹಣ್ಣು ಬೀಜಗಳ ಕಿಟ್‍ ವಿತರಿಸಿದರು.
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 08 AUGUST 2024
ಚಿತ್ರದುರ್ಗ: ಹೆಚ್ಚಿನ ಪರಿಶ್ರಮ ಪಟ್ಟರೆ ಕೃಷಿ ಹಾಗೂ ತೋಟಗಾರಿಕೆಯನ್ನು ಲಾಭದಾಯಕವಾಗಿಸಬಹುದು. ನೌಕರಿಗಿಂತಲೂ ಹೆಚ್ಚು ಆದಾಯಗಳಿಕೆ ಮಾಡಲು ಸಾಧ್ಯವಿದೆ. ಜತೆಗೆ ಇದೊಂದು ದೇಶಸೇವೆಯೂ ಆಗಲಿದೆ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ತೋಟಗಾರಿಕೆ ಇಲಾಖೆ ಸಭಾಂಗಣದಲ್ಲಿ ಗುರುವಾರ ತೋಟಗಾರಿಕೆ ಇಲಾಖೆಯಿಂದ ಆಯೋಜಿಸಿದ್ದ ತೋಟಗಾರಿಕೆ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ‘ಇಂದಿನ ವಿದ್ಯಾರ್ಥಿಗಳಿಗೆ ಕೃಷಿ, ತೋಟಗಾರಿಕೆ ಬೆಳೆ ಹಾಗೂ ರೈತರ ಶ್ರಮದ ಬಗ್ಗೆ ಮಾಹಿತಿ ಕೊರತೆ ಇದೆ’ ಎಂದರು.

‘ನಾವು ತಿನ್ನುವ ಆಹಾರ, ಹಣ್ಣು, ತರಕಾರಿ ಬೆಳೆಗಳನ್ನು ಯಾವ ರೀತಿಯಾಗಿ ಬೆಳೆಯುತ್ತಿದ್ದೇವೆ ಎಂಬುವುದರ ಕುರಿತು ಪ್ರಾಥಮಿಕ ಜ್ಞಾನ ಅತ್ಯವಶ್ಯಕವಾಗಿ ಬೇಕಾಗಿದೆ. ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ತೋಟಗಾರಿಕೆ ಬಗ್ಗೆ ತರಬೇತಿ ನೀಡಲಾಗುತ್ತಿದ್ದು, ಇದು ವಿದ್ಯಾರ್ಥಿಗಳಿಗೆ ಅತ್ಯಗತ್ಯವಾಗಿದೆ’ ಎಂದು ತಿಳಿಸಿದರು.

ಇದನ್ನು ಓದಿ: ವಿದ್ಯಾರ್ಥಿ ನಿಲಯದ ವಾರ್ಡನ್‌ ಅಮಾನತು | ಜಿಪಂ ಸಿಇಒ ಆದೇಶ

ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶರಣಪ್ಪ ಭೋಗಿ ಮಾತನಾಡಿ, ‘ತೋಟಗಾರಿಕೆ ಪಿತಾಮಹಾ ಡಾ.ಎಂ.ಎಚ್‌.ಮರಿಗೌಡರ ಜನ್ಮ ದಿನಾಚರಣೆ ಅಂಗವಾಗಿ ತೋಟಗಾರಿಕೆ ದಿನ ಆಚರಿಸಲಾಗುತ್ತಿದೆ. ತೋಟಗಾರಿಕೆ ದಿನದ ಅಂಗವಾಗಿ ಶಾಲಾ ಮಕ್ಕಳಿಗೆ ಕಿಚನ್ ಗಾರ್ಡನ್ ಮಾಡುವ ಬಗೆ, ಮನೆಯ ಅಕ್ಕಪಕ್ಕ ಹಣ್ಣಿನ ಗಿಡಗಳನ್ನು ಬೆಳೆಯುವ ಪದ್ಧತಿ ಬಗ್ಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ತರಬೇತಿ ನಂತರ ಶಾಲಾ ಮಕ್ಕಳಿಗೆ ವಿವಿಧ ಬಗೆಯ ತರಕಾರಿ ಬೆಳೆಗಳ ಬೀಜದ ಕಿಟ್‍ನ್ನು ವಿತರಣೆ ಮಾಡಲಾಗುವುದು’ ಎಂದರು.

ಇದನ್ನು ಓದಿ: ಲಿಂಗೈಕ್ಯ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸ್ಮರಣೋತ್ಸವ | ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ವಿಶೇಷ ಲೇಖನ

‘ಮಾರುಕಟ್ಟೆಯಲ್ಲಿ ಸಿಗುವ ಹಣ್ಣು, ತರಕಾರಿಗಳು ಸಾಕಷ್ಟು ರಾಸಾಯನಿಕಗಳಿಂದ ಕೂಡಿದ್ದು, ಕೆಲವು ರಾಸಾಯನಿಕಗಳು ಆರೋಗ್ಯಕ್ಕೆ ಹಾನಿಕಾರಕವಾಗಿವೆ. ಹಾಗಾಗಿ ನಮ್ಮ ಮನೆಗೆ ಬೇಕಾದ ಹಣ್ಣು, ತರಕಾರಿಗಳನ್ನು ಬೆಳೆದು ಜನರು ಉತ್ತಮ ಆರೋಗ್ಯ, ಪೌಷ್ಠಿಕ ವೃದ್ಧಿ ಮಾಡುವ ಉದ್ದೇಶದಿಂದ ಶಾಲಾ ಮಕ್ಕಳಿಗೆ ತರಬೇತಿ ನೀಡಲಾಗುತ್ತಿದೆ’ ಎಂದು ತಿಳಿಸಿದರು.
ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ದೇವರಾಜ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್‌.ಜೆ.ಸೋಮಶೇಖರ್‌, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್‌,

ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ನಗರಸಭೆ ಸದಸ್ಯ ವೆಂಕಟೇಶ್‌, ಕೆಡಿಪಿ ಸದಸ್ಯ ನಾಗರಾಜ್‌ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:fruitHorticultureKC Virendra PappiMlaschool childrenTrainingVegetableಕೆ.ಸಿ.ವೀರೇಂದ್ರ ಪಪ್ಪಿತರಕಾರಿತರಬೇತಿತೋಟಗಾರಿಕೆಶಾಲಾ ಮಕ್ಕಳುಶಾಸಕಹಣ್ಣು
Share This Article
Facebook Email Print
Previous Article suspended warden suspended: ವಿದ್ಯಾರ್ಥಿ ನಿಲಯದ ವಾರ್ಡನ್‌ ಅಮಾನತು | ಜಿಪಂ ಸಿಇಒ ಆದೇಶ
Next Article Sri Mallikarjuana swamiji smaranothsava Murugha muth:ಒಂಟಿ ಕಂಬದ ಮಠದಲ್ಲಿ ಮಲ್ಲಿಕಾರ್ಜುನ ಶ್ರೀ ಸ್ಮರಣೋತ್ಸವ | ಹತ್ತಾರು ಮಠಾಧೀಶರು ಭಾಗೀ | ಯರ‍್ಯಾರು ಏನು ಹೇಳಿದ್ರು
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up