CHITRADURGA NEWS | 15 AUGUST 2024
ಚಿತ್ರದುರ್ಗ: ಬೆಂಗಳೂರಿನ ವಿಧಾನಸೌಧದ ಮುಂದೆ ಚಳ್ಳಕೆರೆ ಯುವಕ ಆಟಾಟೋಪ ಮೆರೆದಿದ್ದು, ಎಲೆಕ್ಟ್ರಿಕ್ ಬೈಕ್ ಹೊತ್ತಿ ಉರಿದಿದೆ. ಪೊಲೀಸರ ಮೇಲಿನ ಕೋಪಕ್ಕೆ ಬುಧವಾರ ಮಧ್ಯಾಹ್ನ ಎಲೆಕ್ಟ್ರಿಕ್ ಬೈಕ್ಗೆ ಬೆಂಕಿ ಹಾಕಿ ದುರ್ವತನೆ ತೋರಿದ್ದಾನೆ.
ಚಿತ್ರದುರ್ಗದ ಚಳ್ಳಕೆರೆಯ ನಿವಾಸಿ ಪೃಥ್ವಿರಾಜ್ (27) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಬೆಂಕಿ ಹಾಕಿ ದುರ್ವತನೆ ತೋರಿದ ಆರೋಪದಡಿ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.
ಯಶವಂತಪುರದಲ್ಲಿರುವ ಬಾಡಿಗೆ ಮನೆಗೆ ಬುಧವಾರ ಬಂದಿದ್ದ ಪೃಥ್ವಿರಾಜ್ ಇಂತಹ ಕೃತ್ಯ ಎಸಗಿದ್ದಾನೆ. ಡಿಪ್ಲೊಮಾ ಪದವಿ ಪಡೆದಿರುವ ಈತ, ‘ಪೊಲೀಸರ ವರ್ತನೆಯಿಂದ ಬೇಸತ್ತು ಈ ರೀತಿ ಮಾಡಿರುವುದಾಗಿ ಹೇಳಿಕೊಂಡಿದ್ದಾನೆ’ ಎಂದು ಮೂಲಗಳು ಹೇಳಿವೆ.

ಕ್ಲಿಕ್ ಮಾಡಿ ಓದಿ: ಸರ್ಕಾರಿ ನೌಕರರಿಂದ ಮುಖ್ಯಮಂತ್ರಿಗೆ ಸನ್ಮಾನ | ದಿನಾಂಕ ಘೋಷಿಸಿದ ಸಿ.ಎಸ್.ಷಡಾಕ್ಷರಿ
ಕೆಲ ದಿನಗಳ ಹಿಂದೆ ಸ್ನೇಹಿತರ ಜತೆಗೆ ಪ್ರವಾಸಕ್ಕೆ ತೆರಳಿದ್ದ. ಮೂರು ದಿನ ಕಳೆದರೂ ಚಳ್ಳಕೆರೆಯಲ್ಲಿದ್ದ ತಾಯಿಗೆ ಕರೆ ಮಾಡಿರಲಿಲ್ಲ. ತಾಯಿ ಕರೆ ಮಾಡಿದರೂ ಮೊಬೈಲ್ ‘ಸ್ವಿಚ್ಡ್ ಆಫ್’ ಎಂದು ಬರುತ್ತಿತ್ತು. ಇದರಿಂದ ಗಾಬರಿಗೊಂಡಿದ್ದ ತಾಯಿ, ಚಳ್ಳಕೆರೆ ಪೊಲೀಸ್ ಠಾಣೆಗೆ ತೆರಳಿ ಮಗನನ್ನು ಪತ್ತೆ ಮಾಡಿಕೊಡುವಂತೆ ಕೋರಿದ್ದರು. ಅಲ್ಲದೇ, ನಾಪತ್ತೆ ಪ್ರಕರಣ ದಾಖಲಿಸುವಂತೆಯೂ ಸಹ ಕೋರಿದ್ದರು. ಆದರೆ ದೂರು ಸ್ವೀಕರಿಸದೇ ಪೊಲೀಸರು ವಾಪಸ್ ಕಳುಹಿಸಿದ್ದರು. ಜತೆಗೆ ನಿಂದನೆ ಮಾಡಿದ್ದರು ಎನ್ನಲಾಗಿದೆ.
ಕ್ಲಿಕ್ ಮಾಡಿ ಓದಿ: ಹೊರಕೆರೆ ದೇವರಪುರ ದೇವಸ್ಥಾನ | ಆಡಳಿತ ಮಂಡಳಿಗೆ ಪದಾಧಿಕಾರಿಗಳ ಆಯ್ಕೆ
ವಾರದ ಬಳಿಕ ಪೃಥ್ವಿರಾಜ್ ಚಳ್ಳಕೆರೆಯ ಮನೆಗೆ ಬಂದಿದ್ದ. ಆಗ, ‘ಪೊಲೀಸರು ದೂರು ಸ್ವೀಕರಿಸದೇ ನಿಂದಿಸಿ ಕಳುಹಿಸಿದ್ದರು’ ಎಂದು ತಾಯಿ ಹೇಳಿದ್ದರು. ಇದರಿಂದ ಸಿಟ್ಟಿಗೆದ್ದು, ತಾಯಿ ಜತೆಗೆ ಠಾಣೆಗೆ ತೆರಳಿ, ನಾಪತ್ತೆ ದೂರು ಏಕೆ ಸ್ವೀಕರಿಸಿಲ್ಲ ಎಂದು ಪ್ರಶ್ನಿಸಿದ್ದ. ಆಗ ಪೊಲೀಸರು ಠಾಣೆ ಒಳಕ್ಕೆ ಕರೆದೊಯ್ದಿದ್ದರು. ಅಲ್ಲಿ ನಡೆದ ವಾಗ್ವಾದದ ವಿಡಿಯೊ ಮಾಡಿದ್ದ ಎಂದು ತಿಳಿದು ಬಂದಿದೆ.
ಈ ವೇಳೆ ಪೊಲೀಸರ ವರ್ತನೆಯಿಂದ ಬೇಸರವಾಗಿದೆ ಎಂದು ಹೇಳಿಕೊಂಡು ವಿಧಾನಸೌಧ, ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಸೇರಿದಂತೆ ಕೆಲವು ಸಂಸ್ಥೆಗಳನ್ನು ಸ್ಫೋಟಿಸುವುದಾಗಿ ವಿಡಿಯೊ ಚಿತ್ರೀಕರಣ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದ.

ಇದನ್ನು ಗಮನಿಸಿದ ಚಳ್ಳಕೆರೆ ಪೊಲೀಸರು ಪೃಥ್ವಿರಾಜ್ನನ್ನು ಪುನಃ ಠಾಣೆಗೆ ಕರೆಸಿ ಎಚ್ಚರಿಕೆ ನೀಡಿದ್ದರು. ಆ ವೇಳೆ ಪಿಎಸ್ಐ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲವೇ ಪಿಸ್ತೂಲ್ ತೆಗೆದು ಪಿಎಸ್ಐಗೆ ಗುಂಡು ಹಾರಿಸುತ್ತೇನೆಂದು ಬೆದರಿಕೆ ಒಡ್ಡಿದ್ದ. ಪೃಥ್ವಿ ಹಾಗೂ ಅವರ ತಾಯಿಗೆ ಡಿವೈಎಸ್ಪಿಯೊಬ್ಬರು ಎಚ್ಚರಿಕೆ ನೀಡಿ ಕಳುಹಿಸಿದ್ದರು ಎಂದು ಪೊಲೀಸರು ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
