By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
    8 hours ago
    ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ
    ಚಿತ್ರದುರ್ಗದಲ್ಲಿ ಯಕ್ಷಗಾನ ತಾಳಮದ್ದಳೆ | ಆಲಾಪಕ್ಕೆ ತಲೆದೂಗಿದ ಯಕ್ಷಗಾನ ಪ್ರಿಯರು
    20 hours ago
    ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಪ್ರಗತಿ ಪರಿಶೀಲನಾ ಸಭೆಯ ಸಿದ್ಧತೆ ಪರಿಶೀಲನೆ
    ಬರದ ನಾಡಲ್ಲಿ ಮುಖ್ಯಮಂತ್ರಿ ಪ್ರಗತಿ ಪರಿಶೀಲನಾ ಸಭೆ | ಅನುಭವ ಮಂಟಪದಲ್ಲಿ ಭರದ ತಯಾರಿ
    20 hours ago
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    1 day ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    9 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    1 day ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    3 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    4 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    8 hours ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    5 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    6 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    6 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    8 hours ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    9 hours ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    1 day ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    1 day ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    2 days ago
Reading: Ettinhola Project: ವಾಣಿವಿಲಾಸ ಜಲಾಶಯದತ್ತ ಎತ್ತಿನಹೊಳೆ | ಇದು ಡಿಕೆಶಿ ಬದ್ದತೆ ಇಚ್ಛಾಶಕ್ತಿಯ ಪ್ರತಿರೂಪ | ಇಲ್ಲಿದೆ ನೋಡಿ ಯೋಜನೆಯ ಕಂಪ್ಲೀಟ್‌ ಡಿಟೇಲ್ಸ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Ettinhola Project: ವಾಣಿವಿಲಾಸ ಜಲಾಶಯದತ್ತ ಎತ್ತಿನಹೊಳೆ | ಇದು ಡಿಕೆಶಿ ಬದ್ದತೆ ಇಚ್ಛಾಶಕ್ತಿಯ ಪ್ರತಿರೂಪ | ಇಲ್ಲಿದೆ ನೋಡಿ ಯೋಜನೆಯ ಕಂಪ್ಲೀಟ್‌ ಡಿಟೇಲ್ಸ್

News Desk Chitradurga News
Last updated: 6 September 2024 07:56
News Desk Chitradurga News
2 years ago
Share
Ettinhola Project 5
ವಾಣಿವಿಲಾಸ ಜಲಾಶಯದತ್ತ ಎತ್ತಿನಹೊಳೆ
SHARE

CHITRADURGA NEWS |06 SEPTEMBER 2024
ಚಿತ್ರದುರ್ಗ: ಬಯಲುಸೀಮೆ ಜನರ ದಶಕದ ಕನಸು ‘ಗೌರಿಹಬ್ಬ’ದಂದು ನನಸಾಗುತ್ತಿದೆ. ಇದು ಡಿಕೆಶಿ ಬದ್ದತೆ ಇಚ್ಛಾಶಕ್ತಿಯ ಪ್ರತಿರೂಪ. ಏಳು ಜಿಲ್ಲೆಗಳ 29 ತಾಲ್ಲೂಕಿನ 38 ಪಟ್ಟಣ ಪ್ರದೇಶ ಹಾಗೂ 6,657 ಗ್ರಾಮಗಳ 75.59 ಲಕ್ಷ ಜನರಿಗೆ ಮತ್ತು ಜಾನುವಾರುಗಳಿಗೆ ನೀರುಣಿಸುವ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ ಇದಾಗಿದೆ. ಮೊದಲ ಹಂತದಲ್ಲಿ ಚಿತ್ರದುರ್ಗದ ಹಿರಿಯೂರಿನ ವಾಣಿವಿಲಾಸ ಜಲಾಶಯಕ್ಕೆ ಹರಿಯಲಿದೆ.

ಪಶ್ಚಿಮ ಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಹೊಂಗಡಹಳ್ಳ, ಕೇರಿಹೊಳೆ ಹಳ್ಳಗಳಿಗೆ ಅಡ್ಡಲಾಗಿ ಎಂಟು ವಿಯರ್‌ಗಳನ್ನು (ತಡೆ) ಕಟ್ಟಿ ಮಳೆಗಾಲದಲ್ಲಿ ಪ್ರವಾಹದಿಂದ ಸಿಗುವ ನೀರಿನಲ್ಲಿ 24.11 ಟಿಎಂಸಿ ಅಡಿಯನ್ನು ಬರಪೀಡಿತ ಏಳು ಜಿಲ್ಲೆಗಳಿಗೆ ಹರಿಸುವ ಯೋಜನೆ ಇದಾಗಿದೆ.

ಪ್ರತಿ ವರ್ಷ ಜೂನ್‌ 15ರಿಂದ ಅಕ್ಟೋಬರ್‌ 15ರವರೆಗೆ (ಮಳೆಗಾಲದ ವ್ಯತ್ಯಾಸಕ್ಕೆ ಅನುಗುಣವಾಗಿ ವ್ಯತ್ಯಾಸವಾಗಲಿದೆ) ನಾಲ್ಕು ತಿಂಗಳು ಪೂರ್ವಾಭಿಮುಖ ವಾಗಿ ನೀರು ಹರಿಸಿ ಏಳು ಜಿಲ್ಲೆಗಳ 29 ತಾಲ್ಲೂಕಿನ 38 ಪಟ್ಟಣ ಪ್ರದೇಶ ಹಾಗೂ 6,657 ಗ್ರಾಮಗಳ 75.59 ಲಕ್ಷ ಜನರಿಗೆ ಮತ್ತು ಜಾನುವಾರುಗಳಿಗೆ ನೀರು ಒದಗಿಸುವುದು ಯೋಜನೆಯ ಉದ್ದೇಶವಾಗಿದೆ.

ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | ಸೆಪ್ಟೆಂಬರ್ 06 | ವ್ಯಾಪಾರ– ವ್ಯವಹಾರ ಸುಗಮ, ದೀರ್ಘಕಾಲದ ಸಮಸ್ಯೆಗಳಿಂದ ಮುಕ್ತಿ

ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ವಹಿಸಿಕೊಂಡ ಡಿ.ಕೆ. ಶಿವಕುಮಾರ್ ಅವರು ಮೊದಲ ದಿನದಿಂದಲೇ ಎತ್ತಿನ ಹೊಳೆ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದರು. 2019 ರಲ್ಲಿ ಮತ್ತು ವರ್ಷದ ಹಿಂದೆ (23, ಆಗಸ್ಟ್‌ 2023) ಎತ್ತಿನಹೊಳೆ ಕಾಮಗಾರಿ ನಡೆಯುತ್ತಿದ್ದ ಸ್ಥಳಗಳಿಗೆ ಭೇಟಿ ನೀಡಿ, ಅಧ್ಯಯನ ನಡೆಸಿದ್ದ ಅವರು ಅಲ್ಲಿದ್ದ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿ, ಕಾಮಗಾರಿ ಪರಿಶೀಲಿಸುತ್ತಲೇ ಅವರು ನಿವಾರಣೆಗೂ ತಮ್ಮಲೇ ಕ್ರಿಯಾಯೋಜನೆಯನ್ನು ರೂಪಿಸಿಕೊಂಡಿದ್ದರು.

Ettinhola Project 1
ಎತ್ತಿನಹೊಳೆ ಯೋಜನೆ

2014 ರಲ್ಲಿ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರು ಎತ್ತಿನ ಹೊಳೆ ಯೋಜನೆಗೆ ಚಾಲನೆ ನೀಡಿದ್ದರು. 2018– 19ರ ಸಮ್ಮಿಶ್ರ ಸರ್ಕಾರದ ವೇಳೆ ಜಲಸಂಪನ್ಮೂಲ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಅವರು ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಹಲವಾರು ಸಭೆಗಳನ್ನು ನಡೆಸಿ, ಸ್ಥಳ ಭೇಟಿ ಕೈಗೊಂಡು ಯೋಜನೆಗೆ ವೇಗ ನೀಡುವ ಪ್ರಯತ್ನ ನಡೆಸಿದ್ದರು. ಬದಲಾದ ಕಾಲದಲ್ಲಿ ಯೋಜನೆಯ ತನ್ನ ವೇಗವನ್ನು ಕಳೆದುಕೊಂಡು 2021 ರ ಹೊತ್ತಿಗೆ ಏದುಸಿರು ಬಿಡುತ್ತಿತ್ತು. ಕುಂಟುತ್ತಾ ಸಾಗಿದ್ದ ಈ ಯೋಜನೆಗೆ ಮತ್ತೊಮ್ಮೆ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರುಗಳು ಇನ್ನಿಲ್ಲದ ವೇಗ ನೀಡಿದ್ದರು.

ಅದರಲ್ಲೂ ಎದುರಾದ ಸಮಸ್ಯೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಖುದ್ದಾಗಿ ಆಯಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಅನುಮತಿ ಪಡೆದುಕೊಳ್ಳುವಲ್ಲಿಯೂ ಯಶಸ್ವಿಯಾಗಿದ್ದರು. ಇವುಗಳಿಗೆ ಕೆಲವೊಂದು ನಿರ್ದಶನಗಳು ಇಲ್ಲಿವೆ. 2021ರಲ್ಲಿ ಹೆಬ್ಬನಹಳ್ಳಿ ಸಬ್ ಸ್ಟೇಷನ್ ಪೂರ್ಣಗೊಂಡರೂ ಚಾರ್ಜಿಂಗ್ ಮಾಡಲು ಕೆಪಿಟಿಸಿಲ್‌ ನಿಂದ ನಿರಪೇಕ್ಷಣಾ ಪತ್ರ ಪಡೆಯಲು 3 ವರ್ಷಗಳಷ್ಟು ಕಾಲ ವಿಳಂಬವಾಗಿತ್ತು. ಇಂಧನ ಇಲಾಖೆ ಅಧಿಕಾರಿಗಳ ಜತೆ ಮಾತನಾಡಿ ಈ ಯೋಜನೆಗೆ ಅಗತ್ಯ ಸಹಕಾರ ಪಡೆಯಲು ಯಶಸ್ವಿಯಾಗಿದ್ದರು. ಅದೇ ರೀತಿ, ಯೋಜನೆ ಮಾರ್ಗದಲ್ಲಿ ಬರುವ ಅರಣ್ಯ ಪ್ರದೇಶದ ಭೂಸ್ವಾಧೀನ ವಿಚಾರದಲ್ಲಿ ಉಂಟಾದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಅರಣ್ಯ ಇಲಾಖೆ ಜತೆ ಸಮನ್ವಯತೆ ಸಾಧಿಸಿಸುವಲ್ಲಿ ಶಿವಕುಮಾರ್ ಅವರ ಪಾತ್ರ ಪ್ರಮುಖವಾಗಿದೆ.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಮೊದಲ ಹಂತದ ಏತ ಕಾಮಗಾರಿ ಪ್ಯಾಕೇಜ್-4ರ ಕಾಮಗಾರಿ ಕೆಲಸಕ್ಕೆ ಮೈಸೂರು ಮರ್ಕೆಂಟೈಲ್ ಕಂಪನಿ ಕಳೆದ ಐದು ವರ್ಷಗಳಿಂದಲೂ ಅಡ್ಡಿ ಪಡಿಸುತ್ತಿತ್ತು. ಜಲಸಂಪನ್ಮೂಲ ಸಚಿವರ ಸಂಧಾನದ ಮಾತುಕತೆ ಹಾಗೂ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಹಕಾರದೊಂದಿಗೆ ಮೈಸೂರು ಮರ್ಕೆಂಟೈಲ್ ಕಂಪನಿಯ ಜಮೀನಿನಲ್ಲಿ ಪೈಪ್ ಅಳವಡಿಕೆ ಪೂರ್ಣಗೊಳಿಸಲಾಯಿತು.

ಅದೇ ರೀತಿ, ಮೊದಲ ಹಂತದ ಏತ ಕಾಮಗಾರಿಯ ಪ್ಯಾಕೇಜ್ 5ರ ಕೆಲಸಗಳಿಗೆ ಮೂರು ವರ್ಷಗಳಿಂದ ಅಡ್ಡಿಪಡಿಸುತ್ತಿದ್ದ ಕಾಡುಮನೆ ಎಸ್ಟೇಟ್ ಅವರ ಮನವೊಲಿಸಿ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇದ್ದ ಸಮಸ್ಯೆಗಳನ್ನು ಬಗೆಹರಿಸಿ ಕಾಮಗಾರಿ ಮುಂದುವರಿಯಲು ಪ್ರಮುಖ ಪಾತ್ರ ವಹಿಸಿದ್ದರು.

ಕ್ಲಿಕ್ ಮಾಡಿ ಓದಿ: ಸಿರಿಧಾನ್ಯ ‘ಸಾವೆ’ಗೆ ದರ ನಿಗದಿಗೊಳಿಸಿ | ಜಿಲ್ಲಾಡಳಿತಕ್ಕೆ ಅನ್ನದಾತರ ಡೆಡ್‌ ಲೈನ್‌

ಯೋಜನೆ ಹಂತ-2ರ ಗುರುತ್ವ ಕಾಲುವೆ ಕಾಮಗಾರಿಗೆ ಸಕಲೇಶಪುರ ತಾಲೂಕಿನ, ಬೆಳಗೂಡು ಹೋಬಳಿ ಮೂಗಲಿ ಗ್ರಾಮದ ಎಂ.ಪಿ. ಧೀರಜ್ ಬಿನ್ ಎಂ.ಪಿ ಪಾಲಾಕ್ಷರವರು ಅಡ್ಡಿಪಡಿಸಿದ್ದರು. ಇದರಿಂದ ಈ ಕಾಮಗಾರಿ 5 ವರ್ಷ ವಿಳಂಬವಾಗಿತ್ತು. ಈ ಸಮಸ್ಯೆಯನ್ನು ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬಗೆಹರಿಸಿ ಕಾಮಗಾರಿಗೆ ವೇಗ ನೀಡಲಾಯಿತು. ಆಲೂರು ತಾಲ್ಲೂಕು, ಪಾಳ್ಯ ಗ್ರಾಮದ ಜನರು ಕಾಮಗಾರಿಗೆ ಅಡ್ಡಿಪಡಿಸಿದಾಗಲೂ ಶಿವಕುಮಾರ್ ಅವರ ಸಲಹೆ ಸೂಚನೆ ಮೇರೆಗೆ ಗ್ರಾಮಸ್ಥರ ಸಮಸ್ಯೆಗಳನ್ನು ಪರಿಹರಿಸಿ ಕಾಮಗಾರಿ ಪೂರ್ಣಗೊಳಿಸಿದ್ದರು.

Ettinhola Project 2
ಪೂಜೆ ಸಲ್ಲಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇಂತಹ ಪ್ರಗತಿಯ ಪಥವನ್ನು ಕ್ರಮಿಸುವಲ್ಲಿ ಸರ್ಕಾರಕ್ಕೆ ಇರುವ ಬದ್ದತೆ ಮತ್ತು ಇಚ್ಛಾಶಕ್ತಿ ಇತರ ರಾಜ್ಯಗಳಿಗೂ ಪ್ರೇರಣೆಯಾಗಿದೆ. ಸರ್ಕಾರದ ನಿರಂತರ ಶ್ರಮದ ಪ್ರತಿಫಲವೇ ಎತ್ತಿನ ಹೊಳೆ ಯೋಜನೆ. ಅತ್ಯಂತ ಮಹತ್ವಾಕಾಂಕ್ಷೆಯ ಈ ಎತ್ತಿನ‌ಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡು ನಾಡಿಗೆ ಸಮರ್ಪಿಸುವ ಮೂಲಕ ಜನ – ಜಾನುವಾರುಗಳಿಗೆ ಕುಡಿಯುವ ನೀರಿನ ತಾತ್ವಾರವನ್ನು ಶಾಶ್ವತವಾಗಿ ನೀಗಿಸುವಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಬದ್ದತೆಗೆ ಸಾಕ್ಷಿಯಾಗಿದೆ.

ಎತ್ತಿನ ಹೊಳೆ ಯೋಜನೆ: ರಾಜ್ಯದಲ್ಲಿ ಯಥೇಚ್ಛವಾಗಿರುವ ಜಲಸಂಪನ್ಮೂಲವನ್ನು ಜನರ ಕಲ್ಯಾಣ ಮತ್ತು ಅಭಿವೃದ್ಧಿಗೆ ಬಳಸಿಕೊಳ್ಳುವ ದೃಷ್ಟಿಯಿಂದ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಹೊಂಗದಹಳ್ಳ ಹಾಗೂ ಕೇರಿಹೊಳೆ ಹಳ್ಳಗಳ ಮುಂಗಾರು ಮಳೆ ಅವಧಿಯಲ್ಲಿ ದೊರೆಯಬಹುದಾದ ನೀರನ್ನು ಬಳಸಿಕೊಳ್ಳುವಲ್ಲಿ ಎತ್ತಿನ ಹೊಳೆ ಕುಡಿಯುವ ನೀರಿನ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ.

ಯೋಜನೆಯ ಮೊದಲನೇ ಹಂತದ ಏತ (ಲಿಫ್ಟ್) ಮತ್ತು ವಿದ್ಯುತ್ ಪೂರೈಕೆಯ ಕಾಮಗಾರಿಗಳ ಅನುಷ್ಠಾನಕ್ಕೆ ಬಹುದಿನಗಳಿಂದ ಉದ್ಭವಿಸಿದ್ದ ಎಲ್ಲಾ ಅಡೆತಡೆಗಳನ್ನು ಈ ಸರ್ಕಾರವು ಕಳೆದ 18 ತಿಂಗಳಲ್ಲಿ ನಿವಾರಿಸಿಕೊಂಡು ಕಾಮಗಾರಿ ಪೂರ್ಣಗೊಳಿಸುವ ಮೂಲಕ ತನ್ನ ಇಚ್ಛಾಶಕ್ತಿಯನ್ನು ಪ್ರದರ್ಶಿಸಿದೆ.

ಎತ್ತಿನಹೊಳೆ, ಕಾಡುಮನೆಹೊಳೆ, ಹೊಂಗದಹಳ್ಳ ಹಾಗೂ ಕೇರಿಹೊಳೆ ಹಳ್ಳಗಳ ಪ್ರವಾಹದಿಂದ ಮುಂಗಾರಿನ ಅವಧಿಯಲ್ಲಿ ಪೂರ್ವಾಭಿಮುಖವಾಗಿ ತಿರುಗಿಸಿ, ದೊರೆಯಬಹುದಾದ ನೀರಿನ ಪೈಕಿ 24.01 ಟಿ.ಎಂ.ಸಿ ನೀರನ್ನು ಇವುಗಳಿಗೆ ಅಡ್ಡಲಾಗಿ 8 ವಿಯರ್‌ಗಳನ್ನು ನಿರ್ಮಿಸಿ ರಾಜ್ಯದ ಬರಪೀಡಿತ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕಿನ 38 ಪಟ್ಟಣ ಪ್ರದೇಶದ ಹಾಗೂ 6657 ಗ್ರಾಮಗಳ ಸುಮಾರು 75.59 ಲಕ್ಷ ಜನರಿಗೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವ ಮಹಾಸಂಕಲ್ಪವೊಂದು ಈ ಯೋಜನೆಯ ಮೂಲಕ ಈಡೇರುತ್ತಿರುವುದು ಈ ಜಿಲ್ಲೆಗಳ ಜನರ ಕುಡಿವ ನೀರಿನ ಸಮಸ್ಯೆಯನ್ನು ಇಂಗಿಸಿದೆ.
ಒಟ್ಟಾರೆ 24.01 ಟಿ.ಎಂ.ಸಿ ನೀರಿನಲ್ಲಿ ಕುಡಿಯುವ ನೀರಿಗಾಗಿ 14.056 ಟಿ.ಎಂ.ಸಿ, 527 ಕೆರೆ ತುಂಬಿಸಲು 9.953 ಟಿ.ಎಂ.ಸಿ ಬಳಸಿಕೊಳ್ಳುವ ಯೋಜನೆ ರೂಪಿಸಲಾಗಿದ್ದು, ರೂ. 23,251.66 ಕೋಟಿಗಳ ಅಂದಾಜು ಮೊತ್ತದ ಮೊದಲ ಹಂತದ ಕಾಮಗಾರಿಯನ್ನು ಜನರಿಗೆ ಸಮರ್ಪಿಸಲಾಗುತ್ತಿದೆ.

ಮೊದಲನೇ ಹಂತದ ಏತ (ಲಿಫ್ಟ್‌) ಮತ್ತು ವಿದ್ಯುತ್ ಪೂರೈಕೆಯ ಕಾಮಗಾರಿಗಳ ಅನುಷ್ಠಾನದಲ್ಲಿ ಬಹುದಿನಗಳಿಂದ ಉದ್ಭವಿಸಿದ್ದ ಅಡಚಣೆಗಳನ್ನು ನಿವಾರಿಸಿಕೊಂಡು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು, ಪ್ರಸ್ತುತ 1 ರಿಂದ 8 ವಿಯರ್ ಗಳಿಂದ ಒಟ್ಟಾರೆ 79.50 ಕ್ಯುಮೆಕ್ಸ್ (2800.00 ಕ್ಯೂಸೆಕ್ಸ್) ನೀರನ್ನೆತ್ತಿ ವಿತರಣಾ ತೊಟ್ಟಿ – 3ರ ವರೆಗೆ ಪೂರೈಸಿ ತದನಂತರ ವಿತರಣಾ ತೊಟ್ಟಿ-3 ರಿಂದ ನೀರನ್ನೆತ್ತಿ ವಿತರಣಾ ತೊಟ್ಟಿ -4 ರ ಮುಖಾಂತರ ಗುರುತ್ವ ಕಾಲುವೆಗೆ 79.50 ಕ್ಯುಮೆಕ್ಸ್ (2800.00 ಕ್ಯೂಸೆಕ್ಸ್) ನೀರನ್ನು ಹರಿಸಲು ಯೋಜಿಸಲಾಗಿದೆ.

ಗುರುತ್ವಕಾಲುವೆಯು ಒಟ್ಟು 252.61 ಕಿ.ಮೀ ಉದ್ದವಿದ್ದು, ಈ ಪೈಕಿ 164.47 ಕಿ.ಮೀ ಪೂರ್ಣಗೊಂಡಿದ್ದು, 25.87 ಕಿ.ಮೀ ಪ್ರಗತಿಯಲ್ಲಿರುತ್ತದೆ. ಗುರುತ್ವಕಾಲುವೆಯ ಒಟ್ಟು 42 ಕಿ.ಮೀ ವರಗಿನ ಕಾಮಗಾರಿಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಂಡಿದೆ. ನಂತರದ ಕಾಮಗಾರಿಗಳು ಅರಣ್ಯ ಮತ್ತು ಭೂಸ್ವಾಧೀನ ಸಮಸ್ಯೆಯಿಂದಾಗಿ ಪೂರ್ಣಗೊಂಡಿರದ ಕಾರಣ, ಗುರುತ್ವಕಾಲುವೆಯ 32.50 ಕಿ.ಮೀ ನಲ್ಲಿರುವ ನಾಲಾ ಎಸ್ಕೇಪ್ ಮೂಲಕ ಸುಮಾರು 132.50 ಕಿ.ಮೀ ದೂರದಲ್ಲಿರುವ ವಾಣಿ ವಿಲಾಸ ಸಾಗರಕ್ಕೆ ವೇದಾ ವ್ಯಾಲಿಯ ಮುಖಾಂತರ ತಾತ್ಕಾಲಿಕವಾಗಿ 1500 ಕ್ಯೂಸೆಕ್ಸ್‌ ನೀರನ್ನು ಹರಿಸಲು ಕಾರ್ಯಕ್ರಮ ರೂಪಿಸಲಾಗಿದೆ.

Ettinhola Project 3
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಕಳೆದ ವರ್ಷದ ನವೆಂಬರ್‌ ನಿಂದಲೇ ಪೂರ್ವ ಪರಿಕ್ಷಾರ್ಥ ಚಾಲನಾ ಚಟುವಟಿಕೆಗಳನ್ನು ಕೈಗೊಳ್ಳಲಾಗಿದ್ದು, ವಿಯರ್- 4 ಮತ್ತು 5 ರಿಂದ ನೀರನ್ನೆತ್ತಿ ವಿತರಣಾ ತೊಟ್ಟಿ – 3 ರವರೆಗೆ ನೀರನ್ನು ಪೂರೈಸಲಾಗಿದೆ. ಪ್ರಸ್ತುತ ಇವುಗಳ ಜೊತೆ ವಿಯರ್ 1, 2 ಮತ್ತು 8ರಿಂದಲೂ ಸಹ ನೀರನ್ನೆತ್ತಿ ವಿತರಣಾ ತೊಟ್ಟಿ -4ರ ವರೆಗೆ ಪೂರೈಸಿ, ಅಲ್ಲಿಂದ ಗುರುತ್ವ ಕಾಲುವೆಗೆ ಕಳೆದ ಆ. 26 ರಂದು ಯಶಸ್ವಿಯಾಗಿ ನೀರು ಹರಿಸಲಾಗಿದ್ದು, ಗುರುತ್ವಕಾಲುವೆಯಲ್ಲಿನ ನೀರು 32.50 ಕಿ.ಮೀ ನಲ್ಲಿರುವ ನಾಲಾ ಎಸ್ಕೇಪ್ ಮೂಲಕ ವೇದಾ ವ್ಯಾಲಿಯನ್ನು ಪ್ರವೇಶಿಸಿ ಈಗಾಗಲೇ ಹಳೇಬೀಡು ಕೆರೆಯು ತುಂಬಿ ಕೋಡಿ ಬಿದ್ದು ತದನಂತರ ಬೆಳವಾಡಿ ಕೆರೆಯನ್ನುಪ್ರವೇಶಿಸಿದ್ದು ಇಲ್ಲಿಂದ ವಾಣಿ ವಿಲಾಸ ಸಾಗರದತ್ತ ನೀರು ಹರಿಯುತ್ತಿದೆ. ವಿಯರ್-3 ಅನ್ನು ಹೊರತುಪಡಿಸಿ, ಉಳಿದ ಎಲ್ಲಾ ವಿಯರ್‌ಗಳಿಂದ ಸೆಪ್ಟೆಂಬರ್‌ 6 ರಿಂದ ನೀರನ್ನೆತ್ತಿ ಗುರುತ್ವ ಕಾಲುವೆಗೆ ಪೂರೈಸಲಾಗುತ್ತಿದೆ.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನಯೋಜನೆಗಾಗಿ 2024ರ ಜುಲೈ ಅಂತ್ಯಕ್ಕೆ ರೂ.16,152.05 ಕೋಟಿಗಳ ಆರ್ಥಿಕ ಪ್ರಗತಿ ಸಾಧಿಸಲಾಗಿದೆ. ಯೋಜನೆ ಜಾರಿ ಬಗ್ಗೆ ಅನೇಕ ಟೀಕೆ, ಅನುಮಾನಗಳು ವ್ಯಕ್ತವಾದರೂ ಈ ಯೋಜನೆಯನ್ನು 2026-27ನೇ ಸಾಲಿನ ಮಾರ್ಚ್‌ ಅಂತ್ಯಕ್ಕೆ ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಸರ್ಕಾರ ಕಾರ್ಯೋನ್ಮುಖವಾಗಿದೆ.

ಕ್ಲಿಕ್ ಮಾಡಿ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಪುನಃ ವಿಘ್ನ | ಕಾಲುವೆ ನಿರ್ಮಾಣಕ್ಕೆ ಎದುರಾಯಿತು ತೊಡಕು

ಪ್ರಸ್ತುತ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1 ರ ಕಾಮಗಾರಿಗಳ ಉದ್ಘಾಟನಾ ಸಮಾರಂಭವನ್ನು ಗೌರಿ ಹಬ್ಬದಂದು (ಸೆ. 6) ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರುಗಳು ನೇರವೇರಿಸಲಿದ್ದಾರೆ. ಈ ಮೂಲಕ ರಾಜ್ಯದ ಬರಪೀಡಿತ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಜನ – ಜಾನುವಾರುಗಳಿಗೆ ಗೌರಿ-ಗಣೇಶ ಹಬ್ಬದ ಸಂಭ್ರಮಕ್ಕೆ ಗಂಗಮ್ಮನೂ ಸೇರಿ ಕುಡಿವ ನೀರಿನ ಸುಧೆಯನ್ನು ಹರಿಸಲಿದ್ದಾಳೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BaddateComplete DetailsCounterpartDkeshiEttinholeplanReservoirVanivilasaWillಇಚ್ಛಾಶಕ್ತಿಎತ್ತಿನಹೊಳೆಕಂಪ್ಲೀಟ್‌ ಡಿಟೇಲ್ಸ್ಜಲಾಶಯಡಿಕೆಶಿಪ್ರತಿರೂಪಬದ್ದತೆಯೋಜನೆವಾಣಿವಿಲಾಸ
Share This Article
Facebook Email Print
Previous Article today bhavishya Dina Rashi Bhavishya: ದಿನ ಭವಿಷ್ಯ | ಸೆಪ್ಟೆಂಬರ್ 06 | ವ್ಯಾಪಾರ– ವ್ಯವಹಾರ ಸುಗಮ, ದೀರ್ಘಕಾಲದ ಸಮಸ್ಯೆಗಳಿಂದ ಮುಕ್ತಿ
Next Article Govinda karajola ಎತ್ತಿನಹೊಳೆ Project ಬಟನ್ ಹೊಡೆಯಿರಿ | ಜನರಿಗೆ ಸುಳ್ಳು ಹೇಳಬೇಡಿ | ಸಂಸದ ಗೋವಿಂದ ಕಾರಜೋಳ ಗರಂ
Leave a Comment

Leave a Reply Cancel reply

Your email address will not be published. Required fields are marked *

endometrial cancer that plague women
ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
Life Style
ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
ಮುಖ್ಯ ಸುದ್ದಿ
3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
ಹೊಳಲ್ಕೆರೆ
cow's milk to children
ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up