By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Muruga Math; ಮುರುಘಾ ಮಠದಲ್ಲಿ ಚಿಂತಕರ ಸಭೆ | ಜಯದೇವ ಶ್ರೀಗಳ ಸಂಸ್ಮರಣ ಗ್ರಂಥ ಹೊರತರಲು ತೀರ್ಮಾ‌ನ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Muruga Math; ಮುರುಘಾ ಮಠದಲ್ಲಿ ಚಿಂತಕರ ಸಭೆ | ಜಯದೇವ ಶ್ರೀಗಳ ಸಂಸ್ಮರಣ ಗ್ರಂಥ ಹೊರತರಲು ತೀರ್ಮಾ‌ನ 

ಮುಖ್ಯ ಸುದ್ದಿ

Muruga Math; ಮುರುಘಾ ಮಠದಲ್ಲಿ ಚಿಂತಕರ ಸಭೆ | ಜಯದೇವ ಶ್ರೀಗಳ ಸಂಸ್ಮರಣ ಗ್ರಂಥ ಹೊರತರಲು ತೀರ್ಮಾ‌ನ 

News Desk Chitradurga News
Last updated: 8 September 2024 20:22
News Desk Chitradurga News
10 months ago
Share
ಮುರುಘಾ ಮಠದಲ್ಲಿ ಚಿಂತಕರ ಸಭೆ
ಮುರುಘಾ ಮಠದಲ್ಲಿ ಚಿಂತಕರ ಸಭೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 08 SEPTEMBER 2024

ಚಿತ್ರದುರ್ಗ: ಶ್ರೀ ಜಗದ್ಗುರು ಮುರಘರಾಜೇಂದ್ರ ಬೃಹನ್ಮಠದ( Muruga Math) 24ನೇ ಪೀಠಾಧ್ಯಕ್ಷರಾಗಿ ಚಿತ್ರದುರ್ಗವನ್ನು ಕೇಂದ್ರವನ್ನಾಗಿರಿಸಿಕೊಂಡು ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ನಮ್ಮೊಂದಿಗೆ ಸದಾ ಇರುವ ಶ್ರೀ ಜಗದ್ಗುರು ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150ನೇ ಜಯಂತ್ಯುತ್ಸವದ ಅಂಗವಾಗಿ ಅವರ ಬಹುಮುಖಿ ಕಾರ್ಯಗಳ ಮೇಲೆ ಬೆಳಕು ಚೆಲುವ ಸಂಸ್ಮರಣ ಗ್ರಂಥ ಹೊರ ತರಲು ಶ್ರೀ ಮುರುಘಮಠದಲ್ಲಿ ಸೇರಿದ್ದ ವಿದ್ವಾಂಸರು, ಪ್ರಾಜ್ಞರು ಹಾಗೂ ಸ್ವಾಮೀಜಿಗಳವರು ಸೇರಿದ್ದ ಪ್ರಕಟಣಾ ಪೂರ್ವ ಸಮಾಲೋಚನಾ ಸಭೆಯಲ್ಲಿ ತೀರ್ಮಾ‌ನಿಸಲಾಯಿತು.

ಕ್ಲಿಕ್ ಮಾಡಿ ಓದಿ: Kannada Novel: ಕರುವುಗಲ್ಲು ನೆಟ್ಟು ಊರು ಕಟ್ಟಿದರು – 2

ಬಹುಮುಖ್ಯವಾಗಿ ಜಯದೇವರ ಪೂರ್ವಾಶ್ರಮ, ಅವರ ಅಧ್ಯಯಕ್ಕೆ ಪ್ರೇರಣೆಯಾದ ಶಕ್ತಿಗಳ ಸ್ಮರಣೆ, ಚಿತ್ರದುರ್ಗದ ಪೀಠಾಧ್ಯಕ್ಷರಾದ ಬಗೆಗೆ ಸೇರಿದಂತೆ ಅವರು ಶ್ರೀಮಠದ ಮೂಲಕ ಸಮಾಜವನ್ನು ಪ್ರಭಾವಿಸಿದ ಬಗೆಯನ್ನು ಸ್ವಾತಂತ್ರ ಕರ್ನಾಟಕ ವಿಶೇಷ 1949ರ ಲೇಖನಗಳು, ಸಂಚಯ ಪತ್ರಿಕೆ ವಿಶೇಷ ಲೇಖನಗಳು, ಜಂಗಮ ಜ್ಯೋತಿ ಸ್ಮರಣ ಸಂಚಿಕೆಯಿಂದಾಯ್ದ ಲೇಖನಗಳು, ಹಳೆಯ ಪುಸ್ತಕಗಳಿಂದ ಗಮನಾರ್ಹ ಲೇಖನಗಳು.

ಜಗದ್ಗುರುಗಳನ್ನು ಕುರಿತು ಬಂದಿರುವ ಕೃತಿಗಳು, ಇದರೊಂದಿಗೆ ಹೊಸ ಲೇಖನಗಳು, ಇತ್ತೀಚಿನ ವಿದ್ವಾಂಸರುಗಳು ಹಾಗೂ ಸ್ವಾಮಿಗಳವರ ಬರಹಗಳು, ಆಗಿನ ಕಾಲದ ಪತ್ರಗಳು, ಆಹ್ವಾನ ಪತ್ರಿಕೆಗಳು, ಕರಪತ್ರಗಳು, ದಿನಪತ್ರಿಕೆಗಳು ಮತ್ತು ಇತರ ದಾಖಲೆಗಳ ಸಂಗ್ರಹ. ಒಟ್ಟಾರೆಯಾಗಿ ಜಯದೇವರ ಇಡೀ ಜೀವನ ಸಾಧನೆಯ ಹೂರಣವನ್ನು ಒಟ್ಟಾಗಿ ಸೇರಿಸಿ ಕಟ್ಟಿಕೊಡುವ ಪ್ರಯತ್ನ ಈ ಕೃತಿಯಲ್ಲಿದೆ ಎಂಬ ಆಶಯ ಸೇರಿದವರಿಂದ ವ್ಯಕ್ತವಾಯಿತು.

ಸಂಶೋಧಕರು, ಸಾಹಿತಿಗಳು, ಕವಿಗಳು ಸೇರಿದ್ದ ಈ ಸಭೆಯಲ್ಲಿ ತಮ್ಮದೇ ಆದ ವಿಭಿನ್ನ ಆಲೋಚನೆ ಮತ್ತು ಕೃತಿಯ ಸ್ವರೂಪ ಹೇಗಿರಬೇಕೆಂಬ ಆಶಯಕ್ಕೆ ತಕ್ಕಂತೆ ಕೃತಿ ಮತ್ತು ಅವರ ಜಯಂತ್ಯುತ್ಸವವೂ ಕೂಡ ಸ್ಮರಣೀಯ ಎನ್ನುವಂತಾಗಬೇಕೆಂಬ ಸದಾಶಯ ಶ್ರೀಜಗದ್ಗುರು ಮುರಘರಾಜೇಂದ್ರ ಬೃಹನ್ಮಠ ಹಾಗೂ ಎಸ್ ಜೆ ಎಂ ವಿದ್ಯಾಪೀಠದ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿಯವರದು. ಇವರ ಜೊತೆಗೆ ದಾವಣಗೆರೆ ವಿರಕ್ತ ಮಠದ ಡಾ. ಬಸವಪ್ರಭು ಸ್ವಾಮಿಗಳ ಅವರ ಆಶಯವೂ ಅದೇ ಆಗಿದೆ.

ಕ್ಲಿಕ್ ಮಾಡಿ ಓದಿ: Ganesha murthy: ಗಣೇಶ ಮೂರ್ತಿ ವಿಸರ್ಜನೆ | ನಗರಸಭೆಯಿಂದ ತೊಟ್ಟಿಗಳ ವ್ಯವಸ್ಥೆ | ಇಲ್ಲಿದೆ ನೋಡಿ ಪಟ್ಟಿ

ಇವರೊಂದಿಗೆ ಡಾ.ಮಲ್ಲಾಪುರಂ ಜಿ ವೆಂಕಟೇಶ್, ಡಾ. ಲಕ್ಷ್ಮಣ್ ತೆಲಗಾವಿ, ಡಾ.ಬಿ.ರಾಜಶೇಖರಪ್ಪ, ಡಾ.ಬಿ.ನಂಜುಂಡಸ್ವಾಮಿ, ಬೈರಮಂಗಲ ರಾಮೇಗೌಡ, ವೀರಸಾಬಿಹಳ್ಳಿ ಶಿವಣ್ಣ, ಹಿರಿಯ ಪತ್ರಕರ್ತ ಜಿ.ಎಸ್.ಉಜ್ಜನಪ್ಪ, ಗಿರಿಮಲ್ಲಣ್ಣ, ಸ್ವಾನ್ ಮುದ್ರಣಾಲಯದ ಕೃಷ್ಣಮೂರ್ತಿ, ಎನ್.ತಿಪ್ಪಣ್ಣ ಮತ್ತಿತರರು ಭಾಗವಹಿಸಿದ್ದರು.

ವಿಜಯವಾಣಿ ದಿನಪತ್ರಿಕೆಯ ಸಂಸ್ಥಾಪಕರಾದ ವಿಜಯ ಸಂಕೇಶ್ವರ ಅವರು ಸಭೆಯಲ್ಲಿ ಭಾಗವಹಿಸಿ ಸಭೆಯ ನಿರ್ಣಯಗಳಿಗೆ ಸಹಮತ ವ್ಯಕ್ತಪಡಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:bring outChitradurgaChitradurga newsDecisionJayadeva sreeeKannada Latest Newsmeeting of thinkersMuruga MathSanskarana Granthಕನ್ನಡ ಲೇಟೆಸ್ಟ್ ನ್ಯೂಸ್ಚಿಂತಕರ ಸಭೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಯದೇವ ಶ್ರೀತೀರ್ಮಾನಮುರುಘಾ ಮಠಸಂಸ್ಕರಣ ಗ್ರಂಥಹೊರತರಲು
Share This Article
Facebook Email Print
Previous Article Habbida Malemadhyadolage Kannada Novel: ಕರುವುಗಲ್ಲು ನೆಟ್ಟು ಊರು ಕಟ್ಟಿದರು – 2
Next Article ನಿವೃತ್ತ ಶಿಕ್ಷಕ ಹೊನ್ನೂರುಸಾಬ್ ಗೆ ನೆಲ್ಲಿಕಟ್ಟೆ ಮಾರಕ್ಕಮಾತೆ ಜ್ಞಾನಸಿರಿ ಪ್ರಶಸ್ತಿ Gnanasiri Award; ನಿವೃತ್ತ ಶಿಕ್ಷಕ ಹೊನ್ನೂರುಸಾಬ್ ಗೆ ನೆಲ್ಲಿಕಟ್ಟೆ ಮಾರಕ್ಕಮಾತೆ ಜ್ಞಾನಸಿರಿ ಪ್ರಶಸ್ತಿ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up