
CHITRADURGA NEWS | 11 SEPTEMBER 2024
ಚಿತ್ರದುರ್ಗ: ತಾಲೂಕಿನ ವಿಜಾಪುರ ಗೊಲ್ಲರಹಟ್ಟಿ ಗ್ರಾಮದಲ್ಲಿ ಚಿರತೆಯು(Leopard) ಕುರಿ(sheep) ಮೇಲೆ ದಾಳಿ ಮಾಡಿ, ಅಲ್ಲಿರುವ ಜನರಿಗೆ ಆತಂಕ ಮೂಡಿಸಿದೆ.
ಕ್ಲಿಕ್ ಮಾಡಿ ಓದಿ: Renukaswamy case: ನಟಿಯರಿಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ | ಪ್ರತಿಕ್ರಿಯೆ ಮೂಲಕ ಗೊಂದಲಕ್ಕೆ ತೆರೆ
ಗ್ರಾಮದಲ್ಲಿ ಚಿರತೆಯು ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ಜಮೀನಿನಲ್ಲಿ ಕುರಿಗಳು ಮೇಯುತ್ತಿದ್ದ ವೇಳೆ ಕುರಿಯ ಮೇಲೆ ಚಿರತೆ ದಾಳಿ ನಡೆಸಿದೆ.
ಕುರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.
ಕಳೆದ ಕೆಲ ದಿನಗಳ ಹಿಂದೆಯಷ್ಟೇ ರೈತರು ಜಮೀನಿಂದ ಹಿಂದಿರುಗುತ್ತಿದ್ದ ವೇಳೆ ಕಾಣಿಸಿಕೊಂಡಿದ್ದ ಚಿರತೆ ಮತ್ತೆ ಕಾಣಿಸಿಕೊಂಡಿದೆ.
ಕ್ಲಿಕ್ ಮಾಡಿ ಓದಿ: Sanehalli; ಸಾಣೇಹಳ್ಳಿಯಲ್ಲಿ ಸೆ.24 ರಂದು ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯ ಸ್ಮರಣೆ
ಚಿರತೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಕ್ರಮ ಕೈಗೊಳ್ಳುತ್ತಿಲ್ಲ, ಇದರಿಂದ ಪ್ರಾಣಭಯದಲ್ಲೇ ಜನ ದಿನ ನಿತ್ಯ ಓಡಾಡುತ್ತಿದ್ದಾರೆ ಅಂತಾ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
