By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
    ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
    8 hours ago
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    9 hours ago
    ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
    9 hours ago
    ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
    ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
    9 hours ago
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    20 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    2 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    4 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    11 hours ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    19 hours ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    6 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    6 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    7 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    19 hours ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    20 hours ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    2 days ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    2 days ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    3 days ago
Reading: Human-chain; ಕೈ ಕೈ ಬೆಸೆದು ದಾಖಲೆಯ ಮಾನವ ಸರಪಳಿ ರಚನೆ | ಜಿಲ್ಲೆಯಲ್ಲಿ 145 ಕಿ.ಮೀ ಸರಪಳಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Human-chain; ಕೈ ಕೈ ಬೆಸೆದು ದಾಖಲೆಯ ಮಾನವ ಸರಪಳಿ ರಚನೆ | ಜಿಲ್ಲೆಯಲ್ಲಿ 145 ಕಿ.ಮೀ ಸರಪಳಿ

News Desk Chitradurga News
Last updated: 15 September 2024 17:06
News Desk Chitradurga News
2 years ago
Share
ಜಿಲ್ಲೆಯಲ್ಲಿ 145 ಕಿ.ಮೀ ಮಾನವ ಸರಪಳಿ
ಜಿಲ್ಲೆಯಲ್ಲಿ 145 ಕಿ.ಮೀ ಮಾನವ ಸರಪಳಿ
SHARE

CHITRADURGA NEWS | 15 SEPTEMBER 2024

ಚಿತ್ರದುರ್ಗ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ(Democracy Day) ಅಂಗವಾಗಿ ಪ್ರಜಾಪ್ರಭುತ್ವ ಮಹತ್ವ ಸಾರುವ ನಿಟ್ಟಿನಲ್ಲಿ ಭಾನುವಾರ ಜಿಲ್ಲೆಯಲ್ಲಿ 145 ಕಿ.ಮೀ ಅತಿ ಉದ್ದದ ಮಾನವ ಸರಪಳಿ(human-chain) ನಿರ್ಮಿಸಲಾಯಿತು.

ಕ್ಲಿಕ್ ಮಾಡಿ ಓದಿ: KC Veerendra Puppy : ಶಾಸಕ ವೀರೇಂದ್ರ ಪಪ್ಪಿ ಮನೆ ಮುಂದೆ ತಮಟೆ ಚಳವಳಿ | ಭದ್ರಾ ಮೇಲ್ದಂಡೆ ಹೋರಾಟ

ಜಿಲ್ಲೆಯಲ್ಲಿ 1.50 ಲಕ್ಷಕ್ಕೂ ಅಧಿಕ ಮಂದಿ ಸುಮಾರು 145 ಕಿ.ಮೀ ಮಾನವ ಸರಪಳಿ ರಚಿಸಿ, ಸಾವಿರಾರು ವಿದ್ಯಾರ್ಥಿಗಳು ಹಾಗೂ ಜನರು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಕಾಪಾಡುವುದಕ್ಕಾಗಿ ಪ್ರಜಾಪ್ರಭುತ್ವ ಬಲಪಡಿಸುತ್ತೇವೆ ಎಂಬ ಸಂದೇಶ ಸಾರಿದರು. ಜಾತಿ, ಧರ್ಮ, ವರ್ಗಗಳ ಭೇದವಿಲ್ಲದೆ ಎಲ್ಲ ಜನರೂ ಕೈ-ಕೈ ಬೆಸೆದು ನಿಲ್ಲುವ ಮೂಲಕ ನಾವೆಲ್ಲರೂ ಒಂದೇ ಎಂಬ ಒಗ್ಗಟ್ಟಿನ ಮಂತ್ರ ಜಪಿಸಿದರು.

ಹಿರಿಯೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್, ಎಸ್‍ಪಿ ರಂಜಿತ್ ಬಂಡಾರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಗಣ್ಯರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಓದಿದ ಸಂವಿಧಾನ ಪೀಠಿಕೆಯನ್ನು ಎಲ್ಲರೂ ಸಾಮೂಹಿಕವಾಗಿ ಪಠಿಸಿದರು.

ಮಾನವ ಸರಪಳಿಯುದ್ದಕ್ಕೂ ಶಾಲಾ ಕಾಲೇಜು ವಿದ್ಯಾರ್ಥಿಗಳು, ಅಧಿಕಾರಿಗಳು, ನೌಕರರು, ಸಂಘ ಸಂಸ್ಥೆಗಳ ಸದಸ್ಯರು, ಎನ್‍ಜಿಒಗಳ ಸದಸ್ಯರು, ರೈತ ಸಂಘದವರು, ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ಪಾಲ್ಗೊಂಡು ಮಾನವ ಸರಪಳಿಯಲ್ಲಿಯೇ ಎಲ್ಲರೂ ಪರಸ್ಪರ ಕೈ ಹಿಡಿದು ಮೇಲೆಕ್ಕೆತ್ತಿ ಜೈಹಿಂದ್, ಜೈ ಕರ್ನಾಟಕ ಎಂದು ಘೋಷಣೆ ಕೂಗಿ ಪ್ರಜಾಪ್ರಭುತ್ವ ದಿನವನ್ನು ಸಂಭ್ರಮಿಸಿದರು.

ಕ್ಲಿಕ್ ಮಾಡಿ ಓದಿ: Bear; ಬೋನಿಗೆ ಬಿದ್ದು, ಸಲಾಕೆಯನ್ನೇ ಮುರಿದು ತಪ್ಪಿಸಿಕೊಂಡ ಕರಡಿ | ದೈತ್ಯ ಕರಡಿ ಆರ್ಭಟ ಕಂಡ ಜನ ಕಂಗಾಲು

ಮಾನವ ಸರಪಳಿಯುದ್ದಕ್ಕೂ ಹಬ್ಬದ ವಾತಾವರಣ ಮನೆ ಮಾಡಿತ್ತು. ವಿವಿಧ ಸಂಘಟನೆಗಳು, ಸ್ವಯಂ ಸೇವಾ ಸಂಸ್ಥೆಗಳು, ಜನಪ್ರತಿನಿಧಿಗಳು ಉತ್ಸಾಹದಿಂದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ವೇದಿಕೆ ಕಾರ್ಯಕ್ರಮ ಜರುಗಿದ ಹಿರಿಯೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ವಿಶೇಷವಾಗಿ ಮಾನವ ಸರಪಳಿ ನಿರ್ಮಿಸಲಾಯಿತು.

ದಾಖಲೆಯ ಮಾನವ ಸರಪಳಿ ನಿರ್ಮಾಣ
ದಾಖಲೆಯ ಮಾನವ ಸರಪಳಿ ನಿರ್ಮಾಣ

ಜಿಲ್ಲೆಯಲ್ಲಿ ಗಮನ ಸೆಳೆದ ಬೃಹತ್ ಮಾನವ ಸರಪಳಿ:

 ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ರಚಿಸಲಾದ 145 ಕಿ.ಮೀ ಉದ್ದದ ಬೃಹತ್ ಮಾನವ ಸರಪಳಿ ಗಮನ ಸೆಳೆಯಿತು.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಮೇಲಿನ ಕಣಿವೆ ಪ್ರದೇಶದಿಂದ ಪ್ರಾರಂಭವಾದ ಮಾನವ ಸರಪಳಿಯು ಚಳ್ಳಕೆರೆ ಮಾರ್ಗವಾಗಿ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿವರೆಗೂ ಮಾನವ ಸರಪಳಿ ರಚಿಸಲಾಯಿತು.

ಇದರಲ್ಲಿ ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕಿನ ವಿದ್ಯಾರ್ಥಿಗಳು, ನೌಕರರು, ಜನಪ್ರತಿನಿಧಿಗಳೂ, ಸಂಘ ಸಂಸ್ಥೆಗಳು, ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಜಿಲ್ಲೆಯ ಸುಮಾರು 1.50 ಲಕ್ಷ ಜನ ಈ ಮಾನವ ಸರಪಳಿಯಲ್ಲಿ ಭಾಗವಹಿಸಿದ್ದರು.

ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಸಿ ನೆಟ್ಟ ಸಚಿವರು :

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾನವ ಸರಪಳಿ ನಿರ್ಮಿಸುವುದರ ಜೊತೆಗೆ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ಹಿರಿಯೂರು ನಗರದ ಅಂಬೇಡ್ಕರ್ ವೃತ್ತದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಸಸಿ ನೆಟ್ಟು, ನೀರೆರೆದರು.

ಕ್ಲಿಕ್ ಮಾಡಿ ಓದಿ: Gaurasandra Maramma; ಸೆ.19ವರೆಗೆ ಗೌರಸಂದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ 

ಅರ್ಥಪೂರ್ಣ ಪ್ರಜಾಪ್ರಭುತ್ವ ದಿನ ಆಚರಣೆ | ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ರಚಿಸುವ ಮೂಲಕ ರಾಜ್ಯ ಸರ್ಕಾರದಿಂದ ವಿನೂತನ ಪ್ರಯತ್ನ ಮಾಡಲಾಗಿದ್ದು, ಅರ್ಥಪೂರ್ಣವಾಗಿ ಪ್ರಜಾಪ್ರಭುತ್ವ ದಿನ ಆಚರಿಸಲಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.

ಹಿರಿಯೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕದ ಉತ್ತರ ತುದಿಯಿಂದ ದಕ್ಷಿಣದ ತುದಿಯವರೆಗೆ ಅಂದರೆ ಬೀದರ್‍ನಿಂದ ಚಾಮರಾಜನಗರ ಜಿಲ್ಲೆಯವರೆಗೂ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರಜಾಪ್ರಭುತ್ವದ ಅರಿವು ಮೂಡಿಸುವ ನಿಟ್ಟಿನಲ್ಲಿ ಏರ್ಪಡಿಸಿರುವ ಈ ಕಾರ್ಯಕ್ರಮ ಶ್ಲಾಘನೀಯವಾಗಿದೆ.

ಕ್ಲಿಕ್ ಮಾಡಿ ಓದಿ: Novel: 3. ಎಲ್ಲರೂ ಲಿಂಗವಂತರಾದರು

ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಮೇಲಿನ ಕಣಿವೆ ಗ್ರಾಮದಿಂದ ಜಿಲ್ಲೆಯ ಗಡಿ ಭಾಗವಾಗಿರುವ ಜವನಗೊಂಡನಹಳ್ಳಿಯವರೆಗೂ 145 ಕಿ.ಮೀ. ಉದ್ದವರೆಗೂ ಮಾನವಸರಪಳಿ ನಿರ್ಮಿಸಲಾಗಿದೆ. ಕಾರ್ಯಕ್ರಮದ ಯಶಸ್ವಿಗೆ ಕೈ ಜೋಡಿಸಿದ ಶಿಕ್ಷಣ ಇಲಾಖೆ, ಖಾಸಗಿ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು, ಎನ್.ಜಿ.ಓಗಳು, ಮಹಿಳಾ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ದಲಿತ ಸಂಘಟನೆಗಳು ಕೈಜೋಡಿಸುವ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿರುವುದಕ್ಕಾಗಿ ಸಚಿವರು ಧನ್ಯವಾದ ತಿಳಿಸಿದರು.

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ರಾಜ್ಯದಲ್ಲಿ 25 ಲಕ್ಷ ಜನರಿಂದ 2500 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಾಣ ಮಾಡಾಗಿದೆ. ಜಿಲ್ಲೆಯ ವಿವಿಧ ಭಾಗಗಳಿಂದ 500 ಹೆಚ್ಚು ಬಸ್‍ಗಳಲ್ಲಿ 35 ಸಾವಿರ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಾಣದಲ್ಲಿ ಭಾಗವಹಿಸಿದ್ದಾರೆ.

ಈ ಮೂಲಕ ಪ್ರಜಾಪ್ರಭುತ್ವದ ಮಹತ್ವವನ್ನು ಸಾರಲಾಗಿದೆ. ಮಾನವ ಸರಪಳಿ ಹಾದು ಹೊಗಿರುವ ಹಿರಿಯೂರು, ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಏಕ ಕಾಲಕ್ಕೆ ಕಾರ್ಯಕ್ರಮ ಆಯೋಜಿಸುವ ಮೂಲಕ ಮಾನವ ಸರಪಳಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದರು.

ಕ್ಲಿಕ್ ಮಾಡಿ ಓದಿ: Highwayನಲ್ಲಿ ಬೈಕ್ ಭೀಕರ ಅಪಘಾತ | ಸ್ಥಳದಲ್ಲೇ ಓರ್ವ ಸಾವು

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಸೇರಿದಂತೆ ಎಲ್ಲ ಗಣ್ಯರು, ಅಧಿಕಾರಿಗಳು ಅಂಬೇಡ್ಕರ್ ವೃತ್ತದಲ್ಲಿನ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ದಾಖಲೆಯ ಮಾನವ ಸರಪಳಿ ನಿರ್ಮಾಣ | ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹರ್ಷ  

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲೆಯಲ್ಲಿ ದಾಖಲೆಯ 145 ಕಿ.ಮೀ. ಉದ್ದದ ಮಾನವ ಸರಪಳಿ ಯಶಸ್ವಿಯಾಗಿ ನಿರ್ಮಿಸಿರುವುದಕ್ಕೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹರ್ಷ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ವಿದ್ಯಾರ್ಥಿಗಳು, ಶಿಕ್ಷಕರು, ಸ್ವ-ಸಹಾಯ ಸಂಘಗಳ ಸದಸ್ಯರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರಿ ನೌಕರರು, ವಿವಿಧ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳು, ಸರ್ಕಾರೇತರ ಸಂಘ ಸಂಸ್ಥೆಗಳು, ವಿವಿಧ ಸಂಘಟನೆಗಳ ಸದಸ್ಯರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಕ್ಲಿಕ್ ಮಾಡಿ ಓದಿ: hi-tech hospital; ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಎಂ.ಚಂದ್ರಪ್ಪ ಪ್ರಸ್ತಾವನೆ

ಈ ಮೂಲಕ ಪ್ರಜಾಪ್ರಭುತ್ವದ ಮಹತ್ವವನ್ನು ಜಗತ್ತಿಗೆ ಸಾರಲಾಗಿದೆ. ಜನಪ್ರತಿನಿಧಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿದ್ದಾರೆ.

ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯಕ್ರಮ ರೂಪಿಸಿದ್ದಾರೆ. ಪೊಲೀಸ್ ಇಲಾಖೆ ಸೂಕ್ತ ರಕ್ಷಣೆ ಹಾಗೂ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದೆ. ಶಿಕ್ಷಣ, ಆರೋಗ್ಯ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಾರಿಗೆ ಇಲಾಖೆ ಸೇರಿದಂತೆ, ಕಾರ್ಯಕ್ರಮ ವರದಿಯನ್ನು ಎಲ್ಲಡೆ ವ್ಯಾಪಕವಾಗಿ ಬಿತ್ತರಿಸಿದ ಮಾಧ್ಯಮ ಮಿತ್ರರಿಗೂ ವೈಯಕ್ತಿಕವಾಗಿ ಧನ್ಯವಾದ ತಿಳಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಣ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಹಿರಿಯೂರು ನಗರಸಭೆ ಅಧ್ಯಕ್ಷ ಅಜಯ್ ಕುಮಾರ್, ಸೇರಿದಂತೆ ಉಪಾಧ್ಯಕ್ಷರು, ಸದಸ್ಯರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:145 km in the districtChitradurgaChitradurga newsChitradurga UpdatesDemocracy DayKannada Latest NewsRecordStructureThe human chainಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಜಿಲ್ಲೆಯಲ್ಲಿ 145 ಕಿ.ಮೀದಾಖಲೆಪ್ರಜಾಪ್ರಭುತ್ವ ದಿನಾಚರಣೆಮಾನವ ಸರಪಳಿರಚನೆ
Share This Article
Facebook Email Print
Previous Article kcveerendrapuppy KC Veerendra Puppy : ಶಾಸಕ ವೀರೇಂದ್ರ ಪಪ್ಪಿ ಮನೆ ಮುಂದೆ ತಮಟೆ ಚಳವಳಿ | ಭದ್ರಾ ಮೇಲ್ದಂಡೆ ಹೋರಾಟ
Next Article today bhavishya DINA RASHI BHAVISHYA: ದಿನ ಭವಿಷ್ಯ | ಸೆಪ್ಟೆಂಬರ್ 16 | ಆರೋಗ್ಯದ ಬಗ್ಗೆ ಎಚ್ಚರ, ವ್ಯವಹಾರ ಅಡೆತಡೆ ನಿವಾರಣೆ
Leave a Comment

Leave a Reply Cancel reply

Your email address will not be published. Required fields are marked *

ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
ಮುಖ್ಯ ಸುದ್ದಿ
ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
ಮುಖ್ಯ ಸುದ್ದಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
ಮುಖ್ಯ ಸುದ್ದಿ
ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up